Homeಕರ್ನಾಟಕಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

ಇಂದು ವನದೇವತೆ ಹಾಲಕ್ಕಿ ಬುಡಕಟ್ಟಿನ ತುಳಸಜ್ಜಿಗೆ ಪದ್ಮಶ್ರೀ ಪುರಸ್ಕಾರ

- Advertisement -
- Advertisement -

ಇಂದು ನವದೆಹಲಿಯಲ್ಲಿ ಉತ್ತರ ಕನ್ನಡದ ಹಾಲಕ್ಕಿ ಬುಡಕಟ್ಟಿನ ತುಳಸಿ ಗೌಡರಿಗೆ ರಾಷ್ಟ್ರಪತಿಗಳು ಪದ್ಮ ಪುರಸ್ಕಾರ ನೀಡಿ ಗೌರವಿಸಲಿದ್ದಾರೆ. ಇದರೊಂದಿಗೆ ಉತ್ತರ ಕನ್ನಡ ಜಿಲ್ಲೆಗೆ ಮೂರು ಪದ್ಮಶ್ರೀ ಪ್ರಶಸ್ತಿ ದೊರಕಿದಂತಾಗುತ್ತದೆ. ಇದು ಜಿಲ್ಲೆಯಲ್ಲಿ ಹೆಮ್ಮೆ-ಸಂಭ್ರಮ ಉಂಟುಮಾಡಿದೆ. ವಿಶೇಷವೆಂದರೆ ಇದರಲ್ಲಿ ಯಕ್ಷಗಾನದ ಮೇರು ಕಲಾವಿದ ಚಿಟ್ಟಾಣಿ ರಾಮಚಂದ್ರ ಹೆಗಡೆ ಬಿಟ್ಟರೆ ಉಳಿದೆರಡು ಪದ್ಮಶ್ರೀ ಜಿಲ್ಲೆಯ ಹೆಮ್ಮೆಯ ಅಸ್ಮಿತೆಯಂತಿರುವ ಹಾಲಕ್ಕಿ ಒಕ್ಕಲಿಗ ಬುಡಕಟ್ಟು ಸಮುದಾಯದ ಶ್ರಮ ಸಂಸ್ಕೃತಿಯ ಮಹಿಳೆಯರಿಬ್ಬರ ಅರಸಿ ಬಂದಿದೆ!

ಅದೇ ರೀತಿಯಾಗಿ ಇಂದು ಅಕ್ಷರ ಸಂತ ಎಂದು ಕರೆಸಿಕೊಂಡ ದಕ್ಷಿಣ ಕನ್ನಡದ ಹರೇಕಳ ಹಾಜಬ್ಬನವರಿಗೆ ದೆಹಲಿಯಲ್ಲಿ ಪದ್ಮಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು.

ಚಿಟ್ಟಾಣಿಯವರಿಗೆ 2012ರಲ್ಲಿ ಪದ್ಮ ಪುರಸ್ಕಾರದಿಂದ ಗೌರವಿಸಲಾಗಿತ್ತು. ಹಾಲಕ್ಕಿ ಬುಡಕಟ್ಟು ಸಮುದಾಯದ ಸುಕ್ರಜ್ಜಿ (ಸುಕ್ರಿ ಬೊಮ್ಮ ಗೌಡ)ರವರಿಗೆ 2017ರಲ್ಲಿ ಪದ್ಮಶೀ ಪ್ರಶಸ್ತಿ ಬಂದಾಗ ಇಡೀ ಜಿಲ್ಲೆಯಲ್ಲಿ ಸಡಗರ ತುಂಬಿತ್ತು. ಇದೊಂದು ಯಾವ ಲಾಬಿ-ಶಿಫಾರಸ್ಸು ಇಲ್ಲದೆ ನೈಜ ಪ್ರತಿಭೆಗೆ ಸಂದ ಗೌರವ! ಸುಕ್ರಜ್ಜಿಯನ್ನು ಜಿಲ್ಲೆಯ ದಶದಿಕ್ಕಿಗೆ ಕರೆದು ಸನ್ಮಾನಿಸಲಾಗಿತ್ತು. ಜಾನಪದ ಹಾಡುಗಳ ಕಣಜವೆಂಬ ಖ್ಯಾತಿಯ ಸುಕ್ರಜ್ಜಿಯ ನಾಲಿಗೆಯಲ್ಲಿ 5000ಕ್ಕಿಂತ ಹೆಚ್ಚು ಹಾಡುಗಳಿವೆ. ಇದನ್ನು ಕಾರವಾರದ ಆಕಾಶವಾಣಿ ನಿಲಯ ಅಖಿಲ ಭಾರತ ರೇಡಿಯೋ ಧ್ವನಿ ಮುದ್ರಣ ಯೋಜನೆಯಲ್ಲಿ ದಾಖಲಿಸಿಟ್ಟಿದೆ. ಕರ್ನಾಟಕ ಜಾನಪದ ಅಕಾಡಮಿ ಸುಕ್ರಜ್ಜಿಯವರ ಹಾಡುಗಳ ಪುಸ್ತಕ ಹೊರತಂದಿದೆ. ಸುಕ್ರಿ ಗೌಡರಿಗೆ 1999ರಲ್ಲಿ ಜಾನಪದಶ್ರೀ ಪ್ರಶಸ್ತಿ ಬಂದಾಗ ಅವರು ನಾಡಿನ ಹೆಮ್ಮೆಯ ಅಜ್ಜಿಯೆಂದು ಲಂಕೇಶ್ ಪತ್ರಿಕೆ ಬರೆದಿತ್ತು. ಅಂದಿನಿಂದ ಸುಕ್ರಿ ಗೌಡರು ನಾಡಿನ ಜಾನಪದ, ಸಾಮಾಜಿಕ ಲೋಕದ ಅಜ್ಜಿಯೆಂದೇ ಗುರುತಿಸಲ್ಪಟ್ಟರು. ಸಾರಾಯಿ ವಿರೋಧಿ ಆಂದೋಲನವೇ ಮುಂತಾದ ಸಾಮಾಜಿಕ ಹೋರಾಟದಲ್ಲಿ ಸಕ್ರಿಯರಾಗಿದ್ದರು.

ಈಗ ಪದ್ಮಶ್ರೀ ಸ್ವಿಕರಿಸುತ್ತಿರುವ ಅಂಕೋಲೆಯ ತುಳಸಿ ಗೌಡರು ಆರೇಳು ದಶಕದಿಂದ ಪ್ರತಿ ವರ್ಷ 30 ಸಾವಿರ ಸಸಿಗಳನ್ನು ನೆಟ್ಟು ಪೋಷಿಸುತ್ತ ಬಂದಿದ್ದಾರೆ. 72 ವರ್ಷದ ತುಳಸಜ್ಜಿ ವನದೇವತೆಯೆಂದೇ ಜನಜನಿತರಾಗಿದ್ದಾರೆ! ಕೇಂದ್ರ ಸರ್ಕಾರದ ಪ್ರಿಯದರ್ಶಿನಿ ವೃಕ್ಷ ಮಿತ್ರ ಪ್ರಶಸ್ತಿ, ರಾಜೋತ್ಸವ ಪ್ರಶಸ್ತಿ ಸಹ ತುಳಸಜ್ಜಿಗೆ ಸಂದಿವೆ. ಪ್ರಶಸ್ತಿ ಸ್ವೀಕರಿಸಲು ದಿಲ್ಲಿಗೆ ತೆರಳಿರುವ ಅವರನ್ನು ಅಂಕೋಲೆ ಜನರು ಖರ್ಚಿಗೆಂದು ಹಣ ಸಂಗ್ರಹಿಸಿ ಕೊಟ್ಟು, ಸನ್ಮಾನಿಸಿ ಸಡಗರದಲ್ಲಿ ಬೀಳ್ಕೊಟ್ಟಿದ್ದಾರೆ.

ದಿಲ್ಲಿಗೆ ಹೋಗಲೆಂದು ಜನರು ಕೂಡಿಸಿ ಕೊಟ್ಟಿರುವ 1 ಲಕ್ಷ 16 ಸಾವಿರ ರೂಗಳಲ್ಲಿ ಒಂದಿಷ್ಟನ್ನು ಅನಾರೋಗ್ಯದಲ್ಲಿರುವ ಜಾನಪದ ಕೋಗಿಲೆ ಸುಕ್ರಜ್ಜಿಯ ಆಸ್ಪತ್ರೆ ಖರ್ಚಿಗೆಂದು ತುಳಸಜ್ಜಿ ಕೊಟ್ಟಿದ್ದಾರೆ. ಈ ಮಾನವೀಯ ಕಳಕಳಿ ಜಿಲ್ಲೆಯ ಹೃದಯವನ್ನು ಆರ್ದ್ರವಾಗಿಸಿದೆ! ಇದಕ್ಕಿಂತ ದೊಡ್ಡ ಮನುಷ್ಯತ್ವ ಇನ್ನೇನಿದೆ? ಹಾಲಕ್ಕಿ ಬುಡಕಟ್ಟು ಸಮುದಾಯಕ್ಕೆ ಪರಿಶಿಷ್ಟ ಪಂಗಡ ಮೀಸಲಾತಿ ಒದಗಿಸುವಂತೆ ಸುಕ್ರಜ್ಜಿ, ತುಳಸಜ್ಜಿ ಆದಿಯಾಗಿ ಆ ಜನಾಂಗದವರು ದಶಕಗಳಿಂದ ಹೋರಾಡಿತ್ತಿದ್ದಾರೆ. ಈಗಲಾದರೂ ಹಾಲಕ್ಕಿಗಳು ಹೆಚ್ಚಿರುವ ಕಾರವಾರ ಹಾಗೂ ಕುಮಟಾ ಕ್ಷೇತ್ರದ ಶಾಸಕರಾದ ರೂಪಾಲಿ ನಾಯ್ಕ್ ಮತ್ತು ದಿನಕರ ಶೆಟ್ಟಿ ಸಂಸದ ಅನಂತಕುಮಾರ್ ಹೆಗಡೆ ಮೇಲೆ ಒತ್ತಡ ಹಾಕಿ ಇಚ್ಚಾ ಶಕ್ತಿ ತೋರಿಸುವರಾ ಎಂದು ಕಾದು ನೋಡಬೇಕಾಗಿದೆ.


ಇದನ್ನೂ ಓದಿ: ಬುಡಕಟ್ಟು ಹಾಲಕ್ಕಿ ಒಕ್ಕಲಿಗರನ್ನು ಎಸ್‌‌ಟಿಗೆ ಸೇರಿಸಲು ಅಡ್ಡಗಾಲು ಹಾಕುತ್ತಿರುವುದು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...

ನಾವು ದಾಖಲೆಗಳನ್ನು ಕೊಟ್ಟರೂ ನಮ್ಮನ್ನು ಹಕ್ಕುಗಳಿಂದ ವಂಚಿಸಲಾಗುತ್ತದೆ ಎಚ್ಚರ- ಡಿ.ಹೆಚ್.ಕಂಬಳಿ

ಸಿಂಧನೂರು: SIR ವಿರೋಧಿಸಿ ನಡೆಸಲಾಗುತ್ತಿರುವ ಜಾಗೃತಿ ಜಾಥ ರಾಯಚೂರು ಜಿಲ್ಲೆಯ ಸಿಂಧನೂರು ಪ್ರವೇಶಿಸಿತ್ತು. ನಗರದ ಜಮಾತ್ ಎ ಇಸ್ಲಾಂ ಹಿಂದ್ ಕಚೇರಿಯಲ್ಲಿ ಹಲವು ಸಮುದಾಯದ ಮುಖಂಡರು ಹಾಗೂ ಹೋರಾಟಗಾರರು ಹಾಜರಿದ್ದರು. ಜಾಥಾದ ಭಾಗವಾಗಿ...

ಹುಬ್ಬಳ್ಳಿಯಲ್ಲಿ ಎಸ್‌ಐಆರ್ ವಿರೋಧಿ ಜನಜಾಗೃತಿ ಸಭೆ ; ಒಗ್ಗಟ್ಟಿನ ಹೋರಾಟಕ್ಕೆ ಕರೆ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಹುಬ್ಬಳ್ಳಿಯ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಜ್ಞಾನ ಮಂಟಪದಲ್ಲಿ ಮಂಗಳವಾರ (ಜೂ.16) ಸಂಜೆ ವಿವಿಧ ಜನ ಸಂಘಟನೆಗಳು ಮತ್ತು...

ಎಸ್ಐಆರ್ ಮೂಲಕ ಮನುವಾದದ ಮರು ಜಾರಿಗೆ ಯತ್ನ : ಡಾ. ಗಣೇಶ್ ದೇವಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್) ಮೂಲಕ ಮನುವಾದದ ಮರು ಜಾರಿಗೆ ಪ್ರಯತ್ನಿಸಲಾಗುತ್ತಿದೆ ಎಂದು ಪದ್ಮಶ್ರೀ ಪುರಸ್ಕೃತ ಡಾ. ಗಣೇಶ್ ದೇವಿ ಹೇಳಿದರು. ಮಂಗಳವಾರ (ಜೂ.16) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಬಳಿಯ...

ಎಡದೊರೆಯ ನಾಡಿನಲ್ಲಿ ಮೊಳಗಿದ SIR ವಿರೋಧಿ ಕೂಗು

ಕರ್ನಾಟಕದಲ್ಲಿ ಅವೈಜ್ಞಾನಿಕವಾಗಿ ಜಾರಿಮಾಡಲು ಹೊರಟಿರುವ SIR ಅನ್ನು ವಿರೋಧಿಸಿ ಜನಜಾಗೃತಿ ಜಾಥಾವು ಇಂದು ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯನ್ನು ಪ್ರವೇಶಿಸಿತು. ಹೋರಾಟಗಳ ನೆಲ ರಾಯಚೂರಿನಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಹೋರಾಟಗಾರರು, ವಿವಿಧ ಸಮುದಾಯದ...

ಜೂನ್ 20ರ ಬೆಂಗಳೂರಿನ ‘SIR’ ವಿರೋಧಿ ಸಮಾವೇಶಕ್ಕೆ ಶಿವಮೊಗ್ಗದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಹಿರಿಯ ವಕೀಲರಾದ ಶ್ರೀಪಾಲ್ ಕರೆ

ಜೂನ್ 20 ರಂದು ಬೆಂಗಳೂರಿನಲ್ಲಿ ಹಮ್ಮಿಕೊಳ್ಳಲಾಗಿರುವ ‘SIR’ ವಿರೋಧಿ ಜನಜಾಗೃತಿ ಸಮಾವೇಶಕ್ಕೆ ಶಿವಮೊಗ್ಗ ಜಿಲ್ಲೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಭಾಗವಹಿಸಬೇಕೆಂದು ಹಿರಿಯ ವಕೀಲರಾದ ಶ್ರೀಪಾಲ್ ಕರೆ ನೀಡಿದ್ದಾರೆ. ನಗರದ ಪತ್ರಿಕಾ ಭವನದಲ್ಲಿ ಪ್ರಗತಿಪರ ಸಂಘಟನೆಗಳ...

ಮತದಾನದ ಹಕ್ಕು ಪ್ರಜಾಪ್ರಭುತ್ವದ ಜೀವಾಳ: ತರೀಕೆರೆಯಲ್ಲಿ ಶಾಸಕ G.H ಶ್ರೀನಿವಾಸ್ ಅಭಿಮತ

ರಾಜ್ಯಾದ್ಯಂತ ನಡೆಯುತ್ತಿರುವ ಎಸ್‌ಐಆರ್ (SIR) ವಿರೋಧಿ ಜನಜಾಗೃತಿ ಜಾಥಾದ ನಾಲ್ಕನೇ ದಿನದ ಪಯಣ ಇಂದು ತರೀಕೆರೆಗೆ ತಲುಪಿತು. ಪ್ರಜಾಪ್ರಭುತ್ವದ ಅಡಿಪಾಯವಾಗಿರುವ ಮತದಾನದ ಹಕ್ಕನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಹಮ್ಮಿಕೊಂಡಿರುವ ಈ ಜಾಥಾವನ್ನು, ತರೀಕೆರೆಯ ಜಾಗೃತ...

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...