Homeಕರ್ನಾಟಕನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ಶತಾಯುಶಿ ದೊರೆಸ್ವಾಮಿಯವರಿಗೆ 103 ವರ್ಷಗಳ ಹಿನ್ನೆಲೆಯಲ್ಲಿ ’103 ಕಡೆಗಳಲ್ಲಿ ಇಂದು ಮಹಾನ್ ತಾತ ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇಂದು ಗಾಂಧಿ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದರೊಂದಿಗೆ ಅವರ ’ಗೋಡ್ಸೆವಾದಿಗಳಿಗೆ ಗಾಂಧಿವಾದದ ಉತ್ತರ’ ಎಂಬ ಪುಸ್ತಕ ಕೂಡ ಬಿಡುಗಡೆಯಾಗಿದೆ.

ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶನದ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು  ಜಸ್ಟಿಸ್ ಗೋಪಾಲಗೌಡರವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು, ಈ ಬೇಜವಾಬ್ದಾರಿ ಜನಪ್ರತಿನಿಧಿಗಳು ಗಾಂಧೀಜಿಯವರ ಜೊತೆಯಲ್ಲಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾದ ದೊರೆಸ್ವಾಮಿಯವರ ಬಗ್ಗೆ ಮಾತನಾಡುವ ನೈತಿಕರೆ ಉಳಿಸಿಕೊಂಡಿಲ್ಲ. 103ನೇ ವಯಸ್ಸಿನಲ್ಲಿಯೂ ದಮನಿತರ ಪ್ರತಿಭಟನೆಗಳಿಗೆ ಸಾಥ್ ನೀಡುತ್ತಿರುವ ದೊರೆಸ್ವಾಮಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುವವರು ನಾಯಕರು ಅಲ್ಲ, ಜನಪ್ರತಿನಿಧಿಗಳು ಅಲ್ಲ, ಮನುಷ್ಯರೇ ಅಲ್ಲ ಎಂದು ಕಿಡಿಕಾರಿದರು.

ಸಾರ್ವಭೌಮ ಎನ್ನುವ ಮೂಲಸ್ವರೂಪವನ್ನು ದೇಶಕ್ಕೆ ತಂದುಕೊಟ್ಟ ಕೀರ್ತಿಸ್ವತಂತ್ರ ಹೋರಾಟಗಾರರಿಗಿದೆ. ಇಂತಹವರ ಬಗ್ಗೆ ಅರ್ಥವಿಲ್ಲದ ಮಾತನಾಡುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂಬ ನಂಬಿಕೆಯಿದೆ. ಭ್ರಷ್ಟಾಚಾರದಿಂದ ಜನರಿಗೆ ಹಣ, ಹೆಂಡ ಕೊಟ್ಟು ಮತಗಳನ್ನು ಪಡೆಯುವವರು ರಾಜ್ಯಕ್ಕೆ, ದೇಶಕ್ಕೆ ಏನು ಕೊಡುಗೆ ನೀಡಬಹುದು ಎಂದು ಪ್ರಶ್ನಿಸಿದರು.

ನಾನು ನಿವೃತ್ತಿಯಾಗಿ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟು ವರ್ಷಗಳಲ್ಲಿ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹೇಗೆ ಕೆಲಸ ಮಾಡುತ್ತಿವೆ ಎಂದು ಗಮನಿಸುತ್ತಿದ್ದೇನೆ. ಸ್ವತಂತ್ರ ಭಾರತದ 72 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ  ಶಾಸನಬದ್ಧ ಆಳ್ವಿಯಿಲ್ಲ. ಸಂವಿಧಾನದ ಅಡಿಯಲ್ಲಿ ಆಡಳಿತವಿಲ್ಲ ಇಂತಹ ದುಸ್ಥಿತಿಯಲ್ಲಿ ದೇಶದ ಜನರಿದ್ದಾರೆ. ಅತ್ಯಾಚಾರಗಳು, ಕೊಲೆಗಳು, ಅನಾಚಾರಗಳು ಜನರನ್ನು ಹಿಂಸೆ ಮಾಡುತ್ತಿವೆ. ನ್ಯಾಯಾಂಗ ವ್ಯವಸ್ಥೆಯು ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ. ಇಂತಹ ಕಾಲಘಟ್ಟದಲ್ಲಿ ನಾವಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸ್ವತಂತ್ರ ಸೇನಾನಿ ದೇಶದ ಕೃಷಿ ಕಾರ್ಮಿಕರಿಗೆ, ಜನರ ಬಗ್ಗೆ, ದೇಶದ ಬಗ್ಗೆ ಗಾಂಧಿವಾದ ಬಗ್ಗೆ ಹೇಳಬೇಕು. ಸಕ್ರಿಯವಾಗಿ ಚಳವಳಿಗಳಲ್ಲಿ ಭಾಗವಹಿಸಬೇಕು ಎಂದರು.

ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ಸಿರಿಮನೆ ನಾಗರಾಜುರವು ’103 ಕಡೆಗಳಲ್ಲಿ ಇಂದು ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ. ಬರಿ ಬೆಂಗಳೂರಿನಲ್ಲಿ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲೂ ಚಿತ್ರಪ್ರದರ್ಶವಾಗಲಿದೆ. ಕೂಲಿ ಕಾರ್ಮಿಕರು ತಮ್ಮ ಗುಡಿಸಲಿನಲ್ಲೇ ಚಿತ್ರ ನೋಡಲು ಕಾಯುತ್ತಿದ್ದಾರೆ. ಅವರಿಗಾಗಿ ಚಿತ್ರವನ್ನು ಕಳುಹಿಸಲಾಗಿದೆ. ಬೆಂಗಳೂರಿನಲ್ಲೂ ಸಾಕ್ಷ್ಯಚಿತ್ರ ನೋಡಲು ತುಂಬಾ ಜನ ಕಾಯುತ್ತಿದ್ದಾರೆ. ನಮಗೂ ಚಿತ್ರ ಕಳುಹಿಸಿಕೊಡಿ ಎಂದು ಕೇಳುತ್ತಿದ್ದಾರೆ. ನಾವು ಎಲ್ಲಾ ಕಡೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವತಂತ್ರ ಸೇನಾನಿ ಎಚ್.ಎಸ್.ದೊರೆಸ್ವಾಮಿ, “ಗಾಂಧೀಜಿಯವರ ಜೊತೆಯಲ್ಲಿ ಕೆಲಸ ಮಾಡಿದವರ ಜೊತೆ ಹೋಲಿಕೆ ಮಾಡಿಕೊಂಡರೇ ನನ್ನ ಪಾತ್ರ ನಿಜಕ್ಕೂ ಏನೂ ಅಲ್ಲ. ಅಂತಹ ನನ್ನನ್ನು ದೀಪು ಈ ಸಾಕ್ಷ್ಯಚಿತ್ರದ ಮೂಲಕ ದೊಡ್ಡ ಮನುಷ್ಯ ಮಾಡಿಬಿಟ್ಟರು. ನಾನು ಕೊಟ್ಟ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ದೀಪು ತನ್ನ ಹಣ, ಸಮಯ, ಶ್ರಮವನ್ನು ವ್ಯಯಿಸಿ ಇಂಥ ಒಂದು ಸಾಹಸ ಮಾಡಿದ್ದಾರೆ” ಎಂದರು.

ಇನ್ನು ತಮ್ಮ ಬಗ್ಗೆ ಬಂದ ಟೀಕೆಗಳಿಗೆ ಉತ್ತರಿಸುತ್ತಾ, “ಟೀಕೆಗಳು ಬೇಸರ ಉಂಟುಮಾಡಲಿಲ್ಲ. ಆದರೆ ನನ್ನ ಜೊತೆ ಆತ್ಮೀಯವಾಗಿದ್ದ ಒಬ್ಬರು ಒಂದು ಪ್ರತಿರೋಧ ಕೂಡ ತೋರಿಸಲಿಲ್ಲ ಅದು ಬೇಸರವುಂಟುಮಾಡಿತು. ಆದರೆ ತುಂಬಾ ಜನ ನನ್ನ ಪರವಾಗಿ ನಿಂತರು, ಗೋಪಾಲಗೌಡರು ಕೂಡ ನನಗೆ ಬೆಂಬಲ ನೀಡಿದರು. ಅವರ ಟೀಕೆಗಳಿಗೆ ಉತ್ತರ ನೀಡಲೇಬೇಕು ಎಂದು ಈ ಪುಸ್ತಕ ಹೊರತರುತ್ತಿದ್ದೇವೆ. ಆದರೂ ಯಾರ ಮೇಲೂ ಕೆಟ್ಟ ಮಾತುಗಳನ್ನಾಡಿಲ್ಲ. ಜನರಿಗೆ, ಟೀಕಾಕಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದೇವೆ. ಅವರಿಗೆ ಜ್ಞಾನೋದಯವಾಗಬೇಕು, ಪಶ್ಚಾತಾಪವಾಗಬೇಕು ಅಷ್ಟೆ” ಎಂದರು.

ವೀರ ಸಾರ್ವಕರ್‌ ಅವರನ್ನು ನಾನು ತುಚ್ಛವಾಗಿ ಕಾಣಲಿಲ್ಲ. ಪರಾಕ್ರಮಿಯಾಗಿ ಕೆಲಸ ಮಾಡಿದ ಒಬ್ಬ ವೀರ ಪುರುಷ, ನಾನು ಮಾಡಿದ್ದು ತಪ್ಪಾಯಿತು, ನೀವು ಹೇಳಿದಂತೆ ಕೇಳುತ್ತೇನೆ ಎಂದು ಬ್ರೀಟಿಷರ ಕರಾರುಗಳಿಗೆ ಒಪ್ಪಿದ್ದು ಯಾಕೆ ಎಂದು ಪ್ರಶ್ನಿಸಿದೆ. ಕ್ಷಮಾಪಣ ಪತ್ರ ಬರೆದುದ್ದಕ್ಕೆ ನಾನು ಹೇಡಿ ಎಂದೆ. ಹೋರಾಟಕ್ಕೆ ಅಷ್ಟೊಂದು ಕೆಲಸ ಮಾಡಿದಾತ ಬ್ರೀಟಿಷರಿಗೆ ಶರಣಾದಾಗ, ಮತ್ತೆ ಹೋರಾಟ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟರೆ ಹೇಡಿ ಅನ್ನದೇ ಮತ್ತೇನು ಅನ್ನಬೇಕು? ಎಂದು ದೊರೆಸ್ವಾಮಿ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ಜಿ.ರಾಮಕೃಷ್ಣ, ಗುರುಪ್ರಸಾದ್ ಆಕೃತಿ, ಮಹಾನ್ ತಾತ ಸಾಕ್ಷ್ಯಚಿತ್ರದ ನಿರ್ದೇಶಕ ದೀಪು ಭಾಗಿಯಾಗಿದ್ದರು.

ಮಹಾನ್ ತಾತ ಸಾಕ್ಷ್ಯಚಿತ್ರದ ಬಗ್ಗೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಜೀವನವನ್ನು ಇಂದಿನ ಪೀಳಿಗೆಯ ಮುಂದೆ ತೆರೆದಿಡುವ ಕೆಲಸವನ್ನು 39 ನಿಮಿಷದ ಈ ಸಾಕ್ಷ್ಯಚಿತ್ರ ಮಾಡುತ್ತದೆ. 103 ವರ್ಷಗಳ ತುಂಬು ಜೀವನದ ಕ್ಷಣಗಳನ್ನು ಈ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ. ದೊರೆಸ್ವಾಮಿಯವರು ಪಾಲ್ಗೊಂಡ ಹೋರಾಟದ ಫಲಾನುಭವಿಗಳು, ಬಡಜನರು ದೊರೆಸ್ವಾಮಿಯವರ ಬಗ್ಗೆ ಮಾತನಾಡಿರುವುದು ಸಾಕ್ಷ್ಯಚಿತ್ರದಲ್ಲಿ ದಾಖಲಾಗಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ. ಇವರ ಜೀವನಾಧಾರಿತ ಚಿತ್ರವೇ ಮಹಾನ್ ತಾತ.

ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

 

 


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...