Homeಕರ್ನಾಟಕನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ಶತಾಯುಶಿ ದೊರೆಸ್ವಾಮಿಯವರಿಗೆ 103 ವರ್ಷಗಳ ಹಿನ್ನೆಲೆಯಲ್ಲಿ ’103 ಕಡೆಗಳಲ್ಲಿ ಇಂದು ಮಹಾನ್ ತಾತ ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇಂದು ಗಾಂಧಿ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದರೊಂದಿಗೆ ಅವರ ’ಗೋಡ್ಸೆವಾದಿಗಳಿಗೆ ಗಾಂಧಿವಾದದ ಉತ್ತರ’ ಎಂಬ ಪುಸ್ತಕ ಕೂಡ ಬಿಡುಗಡೆಯಾಗಿದೆ.

ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶನದ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು  ಜಸ್ಟಿಸ್ ಗೋಪಾಲಗೌಡರವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು, ಈ ಬೇಜವಾಬ್ದಾರಿ ಜನಪ್ರತಿನಿಧಿಗಳು ಗಾಂಧೀಜಿಯವರ ಜೊತೆಯಲ್ಲಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾದ ದೊರೆಸ್ವಾಮಿಯವರ ಬಗ್ಗೆ ಮಾತನಾಡುವ ನೈತಿಕರೆ ಉಳಿಸಿಕೊಂಡಿಲ್ಲ. 103ನೇ ವಯಸ್ಸಿನಲ್ಲಿಯೂ ದಮನಿತರ ಪ್ರತಿಭಟನೆಗಳಿಗೆ ಸಾಥ್ ನೀಡುತ್ತಿರುವ ದೊರೆಸ್ವಾಮಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುವವರು ನಾಯಕರು ಅಲ್ಲ, ಜನಪ್ರತಿನಿಧಿಗಳು ಅಲ್ಲ, ಮನುಷ್ಯರೇ ಅಲ್ಲ ಎಂದು ಕಿಡಿಕಾರಿದರು.

ಸಾರ್ವಭೌಮ ಎನ್ನುವ ಮೂಲಸ್ವರೂಪವನ್ನು ದೇಶಕ್ಕೆ ತಂದುಕೊಟ್ಟ ಕೀರ್ತಿಸ್ವತಂತ್ರ ಹೋರಾಟಗಾರರಿಗಿದೆ. ಇಂತಹವರ ಬಗ್ಗೆ ಅರ್ಥವಿಲ್ಲದ ಮಾತನಾಡುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂಬ ನಂಬಿಕೆಯಿದೆ. ಭ್ರಷ್ಟಾಚಾರದಿಂದ ಜನರಿಗೆ ಹಣ, ಹೆಂಡ ಕೊಟ್ಟು ಮತಗಳನ್ನು ಪಡೆಯುವವರು ರಾಜ್ಯಕ್ಕೆ, ದೇಶಕ್ಕೆ ಏನು ಕೊಡುಗೆ ನೀಡಬಹುದು ಎಂದು ಪ್ರಶ್ನಿಸಿದರು.

ನಾನು ನಿವೃತ್ತಿಯಾಗಿ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟು ವರ್ಷಗಳಲ್ಲಿ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹೇಗೆ ಕೆಲಸ ಮಾಡುತ್ತಿವೆ ಎಂದು ಗಮನಿಸುತ್ತಿದ್ದೇನೆ. ಸ್ವತಂತ್ರ ಭಾರತದ 72 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ  ಶಾಸನಬದ್ಧ ಆಳ್ವಿಯಿಲ್ಲ. ಸಂವಿಧಾನದ ಅಡಿಯಲ್ಲಿ ಆಡಳಿತವಿಲ್ಲ ಇಂತಹ ದುಸ್ಥಿತಿಯಲ್ಲಿ ದೇಶದ ಜನರಿದ್ದಾರೆ. ಅತ್ಯಾಚಾರಗಳು, ಕೊಲೆಗಳು, ಅನಾಚಾರಗಳು ಜನರನ್ನು ಹಿಂಸೆ ಮಾಡುತ್ತಿವೆ. ನ್ಯಾಯಾಂಗ ವ್ಯವಸ್ಥೆಯು ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ. ಇಂತಹ ಕಾಲಘಟ್ಟದಲ್ಲಿ ನಾವಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸ್ವತಂತ್ರ ಸೇನಾನಿ ದೇಶದ ಕೃಷಿ ಕಾರ್ಮಿಕರಿಗೆ, ಜನರ ಬಗ್ಗೆ, ದೇಶದ ಬಗ್ಗೆ ಗಾಂಧಿವಾದ ಬಗ್ಗೆ ಹೇಳಬೇಕು. ಸಕ್ರಿಯವಾಗಿ ಚಳವಳಿಗಳಲ್ಲಿ ಭಾಗವಹಿಸಬೇಕು ಎಂದರು.

ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ಸಿರಿಮನೆ ನಾಗರಾಜುರವು ’103 ಕಡೆಗಳಲ್ಲಿ ಇಂದು ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ. ಬರಿ ಬೆಂಗಳೂರಿನಲ್ಲಿ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲೂ ಚಿತ್ರಪ್ರದರ್ಶವಾಗಲಿದೆ. ಕೂಲಿ ಕಾರ್ಮಿಕರು ತಮ್ಮ ಗುಡಿಸಲಿನಲ್ಲೇ ಚಿತ್ರ ನೋಡಲು ಕಾಯುತ್ತಿದ್ದಾರೆ. ಅವರಿಗಾಗಿ ಚಿತ್ರವನ್ನು ಕಳುಹಿಸಲಾಗಿದೆ. ಬೆಂಗಳೂರಿನಲ್ಲೂ ಸಾಕ್ಷ್ಯಚಿತ್ರ ನೋಡಲು ತುಂಬಾ ಜನ ಕಾಯುತ್ತಿದ್ದಾರೆ. ನಮಗೂ ಚಿತ್ರ ಕಳುಹಿಸಿಕೊಡಿ ಎಂದು ಕೇಳುತ್ತಿದ್ದಾರೆ. ನಾವು ಎಲ್ಲಾ ಕಡೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವತಂತ್ರ ಸೇನಾನಿ ಎಚ್.ಎಸ್.ದೊರೆಸ್ವಾಮಿ, “ಗಾಂಧೀಜಿಯವರ ಜೊತೆಯಲ್ಲಿ ಕೆಲಸ ಮಾಡಿದವರ ಜೊತೆ ಹೋಲಿಕೆ ಮಾಡಿಕೊಂಡರೇ ನನ್ನ ಪಾತ್ರ ನಿಜಕ್ಕೂ ಏನೂ ಅಲ್ಲ. ಅಂತಹ ನನ್ನನ್ನು ದೀಪು ಈ ಸಾಕ್ಷ್ಯಚಿತ್ರದ ಮೂಲಕ ದೊಡ್ಡ ಮನುಷ್ಯ ಮಾಡಿಬಿಟ್ಟರು. ನಾನು ಕೊಟ್ಟ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ದೀಪು ತನ್ನ ಹಣ, ಸಮಯ, ಶ್ರಮವನ್ನು ವ್ಯಯಿಸಿ ಇಂಥ ಒಂದು ಸಾಹಸ ಮಾಡಿದ್ದಾರೆ” ಎಂದರು.

ಇನ್ನು ತಮ್ಮ ಬಗ್ಗೆ ಬಂದ ಟೀಕೆಗಳಿಗೆ ಉತ್ತರಿಸುತ್ತಾ, “ಟೀಕೆಗಳು ಬೇಸರ ಉಂಟುಮಾಡಲಿಲ್ಲ. ಆದರೆ ನನ್ನ ಜೊತೆ ಆತ್ಮೀಯವಾಗಿದ್ದ ಒಬ್ಬರು ಒಂದು ಪ್ರತಿರೋಧ ಕೂಡ ತೋರಿಸಲಿಲ್ಲ ಅದು ಬೇಸರವುಂಟುಮಾಡಿತು. ಆದರೆ ತುಂಬಾ ಜನ ನನ್ನ ಪರವಾಗಿ ನಿಂತರು, ಗೋಪಾಲಗೌಡರು ಕೂಡ ನನಗೆ ಬೆಂಬಲ ನೀಡಿದರು. ಅವರ ಟೀಕೆಗಳಿಗೆ ಉತ್ತರ ನೀಡಲೇಬೇಕು ಎಂದು ಈ ಪುಸ್ತಕ ಹೊರತರುತ್ತಿದ್ದೇವೆ. ಆದರೂ ಯಾರ ಮೇಲೂ ಕೆಟ್ಟ ಮಾತುಗಳನ್ನಾಡಿಲ್ಲ. ಜನರಿಗೆ, ಟೀಕಾಕಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದೇವೆ. ಅವರಿಗೆ ಜ್ಞಾನೋದಯವಾಗಬೇಕು, ಪಶ್ಚಾತಾಪವಾಗಬೇಕು ಅಷ್ಟೆ” ಎಂದರು.

ವೀರ ಸಾರ್ವಕರ್‌ ಅವರನ್ನು ನಾನು ತುಚ್ಛವಾಗಿ ಕಾಣಲಿಲ್ಲ. ಪರಾಕ್ರಮಿಯಾಗಿ ಕೆಲಸ ಮಾಡಿದ ಒಬ್ಬ ವೀರ ಪುರುಷ, ನಾನು ಮಾಡಿದ್ದು ತಪ್ಪಾಯಿತು, ನೀವು ಹೇಳಿದಂತೆ ಕೇಳುತ್ತೇನೆ ಎಂದು ಬ್ರೀಟಿಷರ ಕರಾರುಗಳಿಗೆ ಒಪ್ಪಿದ್ದು ಯಾಕೆ ಎಂದು ಪ್ರಶ್ನಿಸಿದೆ. ಕ್ಷಮಾಪಣ ಪತ್ರ ಬರೆದುದ್ದಕ್ಕೆ ನಾನು ಹೇಡಿ ಎಂದೆ. ಹೋರಾಟಕ್ಕೆ ಅಷ್ಟೊಂದು ಕೆಲಸ ಮಾಡಿದಾತ ಬ್ರೀಟಿಷರಿಗೆ ಶರಣಾದಾಗ, ಮತ್ತೆ ಹೋರಾಟ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟರೆ ಹೇಡಿ ಅನ್ನದೇ ಮತ್ತೇನು ಅನ್ನಬೇಕು? ಎಂದು ದೊರೆಸ್ವಾಮಿ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ಜಿ.ರಾಮಕೃಷ್ಣ, ಗುರುಪ್ರಸಾದ್ ಆಕೃತಿ, ಮಹಾನ್ ತಾತ ಸಾಕ್ಷ್ಯಚಿತ್ರದ ನಿರ್ದೇಶಕ ದೀಪು ಭಾಗಿಯಾಗಿದ್ದರು.

ಮಹಾನ್ ತಾತ ಸಾಕ್ಷ್ಯಚಿತ್ರದ ಬಗ್ಗೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಜೀವನವನ್ನು ಇಂದಿನ ಪೀಳಿಗೆಯ ಮುಂದೆ ತೆರೆದಿಡುವ ಕೆಲಸವನ್ನು 39 ನಿಮಿಷದ ಈ ಸಾಕ್ಷ್ಯಚಿತ್ರ ಮಾಡುತ್ತದೆ. 103 ವರ್ಷಗಳ ತುಂಬು ಜೀವನದ ಕ್ಷಣಗಳನ್ನು ಈ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ. ದೊರೆಸ್ವಾಮಿಯವರು ಪಾಲ್ಗೊಂಡ ಹೋರಾಟದ ಫಲಾನುಭವಿಗಳು, ಬಡಜನರು ದೊರೆಸ್ವಾಮಿಯವರ ಬಗ್ಗೆ ಮಾತನಾಡಿರುವುದು ಸಾಕ್ಷ್ಯಚಿತ್ರದಲ್ಲಿ ದಾಖಲಾಗಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ. ಇವರ ಜೀವನಾಧಾರಿತ ಚಿತ್ರವೇ ಮಹಾನ್ ತಾತ.

ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

 

 


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...