Homeಕರ್ನಾಟಕನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ಶತಾಯುಶಿ ದೊರೆಸ್ವಾಮಿಯವರಿಗೆ 103 ವರ್ಷಗಳ ಹಿನ್ನೆಲೆಯಲ್ಲಿ ’103 ಕಡೆಗಳಲ್ಲಿ ಇಂದು ಮಹಾನ್ ತಾತ ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇಂದು ಗಾಂಧಿ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದರೊಂದಿಗೆ ಅವರ ’ಗೋಡ್ಸೆವಾದಿಗಳಿಗೆ ಗಾಂಧಿವಾದದ ಉತ್ತರ’ ಎಂಬ ಪುಸ್ತಕ ಕೂಡ ಬಿಡುಗಡೆಯಾಗಿದೆ.

ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶನದ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು  ಜಸ್ಟಿಸ್ ಗೋಪಾಲಗೌಡರವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು, ಈ ಬೇಜವಾಬ್ದಾರಿ ಜನಪ್ರತಿನಿಧಿಗಳು ಗಾಂಧೀಜಿಯವರ ಜೊತೆಯಲ್ಲಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾದ ದೊರೆಸ್ವಾಮಿಯವರ ಬಗ್ಗೆ ಮಾತನಾಡುವ ನೈತಿಕರೆ ಉಳಿಸಿಕೊಂಡಿಲ್ಲ. 103ನೇ ವಯಸ್ಸಿನಲ್ಲಿಯೂ ದಮನಿತರ ಪ್ರತಿಭಟನೆಗಳಿಗೆ ಸಾಥ್ ನೀಡುತ್ತಿರುವ ದೊರೆಸ್ವಾಮಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುವವರು ನಾಯಕರು ಅಲ್ಲ, ಜನಪ್ರತಿನಿಧಿಗಳು ಅಲ್ಲ, ಮನುಷ್ಯರೇ ಅಲ್ಲ ಎಂದು ಕಿಡಿಕಾರಿದರು.

ಸಾರ್ವಭೌಮ ಎನ್ನುವ ಮೂಲಸ್ವರೂಪವನ್ನು ದೇಶಕ್ಕೆ ತಂದುಕೊಟ್ಟ ಕೀರ್ತಿಸ್ವತಂತ್ರ ಹೋರಾಟಗಾರರಿಗಿದೆ. ಇಂತಹವರ ಬಗ್ಗೆ ಅರ್ಥವಿಲ್ಲದ ಮಾತನಾಡುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂಬ ನಂಬಿಕೆಯಿದೆ. ಭ್ರಷ್ಟಾಚಾರದಿಂದ ಜನರಿಗೆ ಹಣ, ಹೆಂಡ ಕೊಟ್ಟು ಮತಗಳನ್ನು ಪಡೆಯುವವರು ರಾಜ್ಯಕ್ಕೆ, ದೇಶಕ್ಕೆ ಏನು ಕೊಡುಗೆ ನೀಡಬಹುದು ಎಂದು ಪ್ರಶ್ನಿಸಿದರು.

ನಾನು ನಿವೃತ್ತಿಯಾಗಿ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟು ವರ್ಷಗಳಲ್ಲಿ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹೇಗೆ ಕೆಲಸ ಮಾಡುತ್ತಿವೆ ಎಂದು ಗಮನಿಸುತ್ತಿದ್ದೇನೆ. ಸ್ವತಂತ್ರ ಭಾರತದ 72 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ  ಶಾಸನಬದ್ಧ ಆಳ್ವಿಯಿಲ್ಲ. ಸಂವಿಧಾನದ ಅಡಿಯಲ್ಲಿ ಆಡಳಿತವಿಲ್ಲ ಇಂತಹ ದುಸ್ಥಿತಿಯಲ್ಲಿ ದೇಶದ ಜನರಿದ್ದಾರೆ. ಅತ್ಯಾಚಾರಗಳು, ಕೊಲೆಗಳು, ಅನಾಚಾರಗಳು ಜನರನ್ನು ಹಿಂಸೆ ಮಾಡುತ್ತಿವೆ. ನ್ಯಾಯಾಂಗ ವ್ಯವಸ್ಥೆಯು ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ. ಇಂತಹ ಕಾಲಘಟ್ಟದಲ್ಲಿ ನಾವಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸ್ವತಂತ್ರ ಸೇನಾನಿ ದೇಶದ ಕೃಷಿ ಕಾರ್ಮಿಕರಿಗೆ, ಜನರ ಬಗ್ಗೆ, ದೇಶದ ಬಗ್ಗೆ ಗಾಂಧಿವಾದ ಬಗ್ಗೆ ಹೇಳಬೇಕು. ಸಕ್ರಿಯವಾಗಿ ಚಳವಳಿಗಳಲ್ಲಿ ಭಾಗವಹಿಸಬೇಕು ಎಂದರು.

ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ಸಿರಿಮನೆ ನಾಗರಾಜುರವು ’103 ಕಡೆಗಳಲ್ಲಿ ಇಂದು ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ. ಬರಿ ಬೆಂಗಳೂರಿನಲ್ಲಿ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲೂ ಚಿತ್ರಪ್ರದರ್ಶವಾಗಲಿದೆ. ಕೂಲಿ ಕಾರ್ಮಿಕರು ತಮ್ಮ ಗುಡಿಸಲಿನಲ್ಲೇ ಚಿತ್ರ ನೋಡಲು ಕಾಯುತ್ತಿದ್ದಾರೆ. ಅವರಿಗಾಗಿ ಚಿತ್ರವನ್ನು ಕಳುಹಿಸಲಾಗಿದೆ. ಬೆಂಗಳೂರಿನಲ್ಲೂ ಸಾಕ್ಷ್ಯಚಿತ್ರ ನೋಡಲು ತುಂಬಾ ಜನ ಕಾಯುತ್ತಿದ್ದಾರೆ. ನಮಗೂ ಚಿತ್ರ ಕಳುಹಿಸಿಕೊಡಿ ಎಂದು ಕೇಳುತ್ತಿದ್ದಾರೆ. ನಾವು ಎಲ್ಲಾ ಕಡೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವತಂತ್ರ ಸೇನಾನಿ ಎಚ್.ಎಸ್.ದೊರೆಸ್ವಾಮಿ, “ಗಾಂಧೀಜಿಯವರ ಜೊತೆಯಲ್ಲಿ ಕೆಲಸ ಮಾಡಿದವರ ಜೊತೆ ಹೋಲಿಕೆ ಮಾಡಿಕೊಂಡರೇ ನನ್ನ ಪಾತ್ರ ನಿಜಕ್ಕೂ ಏನೂ ಅಲ್ಲ. ಅಂತಹ ನನ್ನನ್ನು ದೀಪು ಈ ಸಾಕ್ಷ್ಯಚಿತ್ರದ ಮೂಲಕ ದೊಡ್ಡ ಮನುಷ್ಯ ಮಾಡಿಬಿಟ್ಟರು. ನಾನು ಕೊಟ್ಟ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ದೀಪು ತನ್ನ ಹಣ, ಸಮಯ, ಶ್ರಮವನ್ನು ವ್ಯಯಿಸಿ ಇಂಥ ಒಂದು ಸಾಹಸ ಮಾಡಿದ್ದಾರೆ” ಎಂದರು.

ಇನ್ನು ತಮ್ಮ ಬಗ್ಗೆ ಬಂದ ಟೀಕೆಗಳಿಗೆ ಉತ್ತರಿಸುತ್ತಾ, “ಟೀಕೆಗಳು ಬೇಸರ ಉಂಟುಮಾಡಲಿಲ್ಲ. ಆದರೆ ನನ್ನ ಜೊತೆ ಆತ್ಮೀಯವಾಗಿದ್ದ ಒಬ್ಬರು ಒಂದು ಪ್ರತಿರೋಧ ಕೂಡ ತೋರಿಸಲಿಲ್ಲ ಅದು ಬೇಸರವುಂಟುಮಾಡಿತು. ಆದರೆ ತುಂಬಾ ಜನ ನನ್ನ ಪರವಾಗಿ ನಿಂತರು, ಗೋಪಾಲಗೌಡರು ಕೂಡ ನನಗೆ ಬೆಂಬಲ ನೀಡಿದರು. ಅವರ ಟೀಕೆಗಳಿಗೆ ಉತ್ತರ ನೀಡಲೇಬೇಕು ಎಂದು ಈ ಪುಸ್ತಕ ಹೊರತರುತ್ತಿದ್ದೇವೆ. ಆದರೂ ಯಾರ ಮೇಲೂ ಕೆಟ್ಟ ಮಾತುಗಳನ್ನಾಡಿಲ್ಲ. ಜನರಿಗೆ, ಟೀಕಾಕಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದೇವೆ. ಅವರಿಗೆ ಜ್ಞಾನೋದಯವಾಗಬೇಕು, ಪಶ್ಚಾತಾಪವಾಗಬೇಕು ಅಷ್ಟೆ” ಎಂದರು.

ವೀರ ಸಾರ್ವಕರ್‌ ಅವರನ್ನು ನಾನು ತುಚ್ಛವಾಗಿ ಕಾಣಲಿಲ್ಲ. ಪರಾಕ್ರಮಿಯಾಗಿ ಕೆಲಸ ಮಾಡಿದ ಒಬ್ಬ ವೀರ ಪುರುಷ, ನಾನು ಮಾಡಿದ್ದು ತಪ್ಪಾಯಿತು, ನೀವು ಹೇಳಿದಂತೆ ಕೇಳುತ್ತೇನೆ ಎಂದು ಬ್ರೀಟಿಷರ ಕರಾರುಗಳಿಗೆ ಒಪ್ಪಿದ್ದು ಯಾಕೆ ಎಂದು ಪ್ರಶ್ನಿಸಿದೆ. ಕ್ಷಮಾಪಣ ಪತ್ರ ಬರೆದುದ್ದಕ್ಕೆ ನಾನು ಹೇಡಿ ಎಂದೆ. ಹೋರಾಟಕ್ಕೆ ಅಷ್ಟೊಂದು ಕೆಲಸ ಮಾಡಿದಾತ ಬ್ರೀಟಿಷರಿಗೆ ಶರಣಾದಾಗ, ಮತ್ತೆ ಹೋರಾಟ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟರೆ ಹೇಡಿ ಅನ್ನದೇ ಮತ್ತೇನು ಅನ್ನಬೇಕು? ಎಂದು ದೊರೆಸ್ವಾಮಿ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ಜಿ.ರಾಮಕೃಷ್ಣ, ಗುರುಪ್ರಸಾದ್ ಆಕೃತಿ, ಮಹಾನ್ ತಾತ ಸಾಕ್ಷ್ಯಚಿತ್ರದ ನಿರ್ದೇಶಕ ದೀಪು ಭಾಗಿಯಾಗಿದ್ದರು.

ಮಹಾನ್ ತಾತ ಸಾಕ್ಷ್ಯಚಿತ್ರದ ಬಗ್ಗೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಜೀವನವನ್ನು ಇಂದಿನ ಪೀಳಿಗೆಯ ಮುಂದೆ ತೆರೆದಿಡುವ ಕೆಲಸವನ್ನು 39 ನಿಮಿಷದ ಈ ಸಾಕ್ಷ್ಯಚಿತ್ರ ಮಾಡುತ್ತದೆ. 103 ವರ್ಷಗಳ ತುಂಬು ಜೀವನದ ಕ್ಷಣಗಳನ್ನು ಈ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ. ದೊರೆಸ್ವಾಮಿಯವರು ಪಾಲ್ಗೊಂಡ ಹೋರಾಟದ ಫಲಾನುಭವಿಗಳು, ಬಡಜನರು ದೊರೆಸ್ವಾಮಿಯವರ ಬಗ್ಗೆ ಮಾತನಾಡಿರುವುದು ಸಾಕ್ಷ್ಯಚಿತ್ರದಲ್ಲಿ ದಾಖಲಾಗಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ. ಇವರ ಜೀವನಾಧಾರಿತ ಚಿತ್ರವೇ ಮಹಾನ್ ತಾತ.

ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

 

 


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...