Homeಕರ್ನಾಟಕನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ನ್ಯಾಯಾಂಗ ವ್ಯವಸ್ಥೆ ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ: ಜಸ್ಟಿಸ್ ಗೋಪಾಲಗೌಡ

ಶತಾಯುಶಿ ದೊರೆಸ್ವಾಮಿಯವರಿಗೆ 103 ವರ್ಷಗಳ ಹಿನ್ನೆಲೆಯಲ್ಲಿ ’103 ಕಡೆಗಳಲ್ಲಿ ಇಂದು ಮಹಾನ್ ತಾತ ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ.

- Advertisement -
- Advertisement -

ಹಿರಿಯ ಸ್ವಾತಂತ್ರ್ಯ ಸೇನಾನಿ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್.ಎಸ್ ದೊರೆಸ್ವಾಮಿಯವರ ಜೀವನ ಮತ್ತು ಹೋರಾಟದ ಕುರಿತು ಸಾಕ್ಷ್ಯಚಿತ್ರ ‘ಮಹಾನ್ ತಾತ / The Great Grand Father’ ಇಂದು ಗಾಂಧಿ ಜಯಂತಿ ಅಂಗವಾಗಿ ರಾಜ್ಯಾದ್ಯಂತ ಬಿಡುಗಡೆಯಾಗಿದೆ. ಇದರೊಂದಿಗೆ ಅವರ ’ಗೋಡ್ಸೆವಾದಿಗಳಿಗೆ ಗಾಂಧಿವಾದದ ಉತ್ತರ’ ಎಂಬ ಪುಸ್ತಕ ಕೂಡ ಬಿಡುಗಡೆಯಾಗಿದೆ.

ಬೆಂಗಳೂರಿನ ಅರಮನೆ ರಸ್ತೆಯ ಕರ್ನಾಟಕ ಸ್ಕೌಟ್ಸ್ ಅಂಡ್ ಗೈಡ್ಸ್ ಸಭಾಂಗಣದಲ್ಲಿ ಪ್ರತಿಭಾನ್ವಿತ ನಿರ್ದೇಶಕ ದೀಪುರವರು ನಿರ್ದೇಶನದ ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮಾಧ್ಯಮ ಸಂಸ್ಥೆ ತಯಾರಿಸಿರುವ ಈ ಸಾಕ್ಷ್ಯಚಿತ್ರವನ್ನು  ಜಸ್ಟಿಸ್ ಗೋಪಾಲಗೌಡರವರು ಬಿಡುಗಡೆ ಮಾಡಿದರು.

ನಂತರ ಮಾತನಾಡಿದ ನಿವೃತ್ತ ನ್ಯಾಯಮೂರ್ತಿ ಗೋಪಾಲಗೌಡರು, ಈ ಬೇಜವಾಬ್ದಾರಿ ಜನಪ್ರತಿನಿಧಿಗಳು ಗಾಂಧೀಜಿಯವರ ಜೊತೆಯಲ್ಲಿ ಸ್ವತಂತ್ರ ಹೋರಾಟದಲ್ಲಿ ಭಾಗಿಯಾದ ದೊರೆಸ್ವಾಮಿಯವರ ಬಗ್ಗೆ ಮಾತನಾಡುವ ನೈತಿಕರೆ ಉಳಿಸಿಕೊಂಡಿಲ್ಲ. 103ನೇ ವಯಸ್ಸಿನಲ್ಲಿಯೂ ದಮನಿತರ ಪ್ರತಿಭಟನೆಗಳಿಗೆ ಸಾಥ್ ನೀಡುತ್ತಿರುವ ದೊರೆಸ್ವಾಮಿಯವರ ಬಗ್ಗೆ ಕೆಟ್ಟದಾಗಿ ಮಾತನಾಡುವವರು ನಾಯಕರು ಅಲ್ಲ, ಜನಪ್ರತಿನಿಧಿಗಳು ಅಲ್ಲ, ಮನುಷ್ಯರೇ ಅಲ್ಲ ಎಂದು ಕಿಡಿಕಾರಿದರು.

ಸಾರ್ವಭೌಮ ಎನ್ನುವ ಮೂಲಸ್ವರೂಪವನ್ನು ದೇಶಕ್ಕೆ ತಂದುಕೊಟ್ಟ ಕೀರ್ತಿಸ್ವತಂತ್ರ ಹೋರಾಟಗಾರರಿಗಿದೆ. ಇಂತಹವರ ಬಗ್ಗೆ ಅರ್ಥವಿಲ್ಲದ ಮಾತನಾಡುವವರಿಗೆ ಜನರೇ ತಕ್ಕ ಉತ್ತರ ನೀಡುತ್ತಾರೆ ಎಂಬ ನಂಬಿಕೆಯಿದೆ. ಭ್ರಷ್ಟಾಚಾರದಿಂದ ಜನರಿಗೆ ಹಣ, ಹೆಂಡ ಕೊಟ್ಟು ಮತಗಳನ್ನು ಪಡೆಯುವವರು ರಾಜ್ಯಕ್ಕೆ, ದೇಶಕ್ಕೆ ಏನು ಕೊಡುಗೆ ನೀಡಬಹುದು ಎಂದು ಪ್ರಶ್ನಿಸಿದರು.

ನಾನು ನಿವೃತ್ತಿಯಾಗಿ ನಾಲ್ಕು ವರ್ಷಗಳಾಗುತ್ತಾ ಬಂದಿದೆ. ಇಷ್ಟು ವರ್ಷಗಳಲ್ಲಿ ದೇಶದಲ್ಲಿ ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹೇಗೆ ಕೆಲಸ ಮಾಡುತ್ತಿವೆ ಎಂದು ಗಮನಿಸುತ್ತಿದ್ದೇನೆ. ಸ್ವತಂತ್ರ ಭಾರತದ 72 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ  ಶಾಸನಬದ್ಧ ಆಳ್ವಿಯಿಲ್ಲ. ಸಂವಿಧಾನದ ಅಡಿಯಲ್ಲಿ ಆಡಳಿತವಿಲ್ಲ ಇಂತಹ ದುಸ್ಥಿತಿಯಲ್ಲಿ ದೇಶದ ಜನರಿದ್ದಾರೆ. ಅತ್ಯಾಚಾರಗಳು, ಕೊಲೆಗಳು, ಅನಾಚಾರಗಳು ಜನರನ್ನು ಹಿಂಸೆ ಮಾಡುತ್ತಿವೆ. ನ್ಯಾಯಾಂಗ ವ್ಯವಸ್ಥೆಯು ಇಂದು ನ್ಯಾಯ ಕೊಡುವಲ್ಲಿ ವಿಫಲವಾಗಿದೆ. ಇಂತಹ ಕಾಲಘಟ್ಟದಲ್ಲಿ ನಾವಿದ್ದೇವೆ’ ಎಂದು ಬೇಸರ ವ್ಯಕ್ತಪಡಿಸಿದರು.

ಈ ಸ್ವತಂತ್ರ ಸೇನಾನಿ ದೇಶದ ಕೃಷಿ ಕಾರ್ಮಿಕರಿಗೆ, ಜನರ ಬಗ್ಗೆ, ದೇಶದ ಬಗ್ಗೆ ಗಾಂಧಿವಾದ ಬಗ್ಗೆ ಹೇಳಬೇಕು. ಸಕ್ರಿಯವಾಗಿ ಚಳವಳಿಗಳಲ್ಲಿ ಭಾಗವಹಿಸಬೇಕು ಎಂದರು.

ಸಾಕ್ಷ್ಯಚಿತ್ರ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಹೋರಾಟಗಾರ ಸಿರಿಮನೆ ನಾಗರಾಜುರವು ’103 ಕಡೆಗಳಲ್ಲಿ ಇಂದು ಸಾಕ್ಷ್ಯಚಿತ್ರ ಪ್ರದರ್ಶನವಾಗಲಿದೆ. ಬರಿ ಬೆಂಗಳೂರಿನಲ್ಲಿ ಮಾತ್ರವಲ್ಲ ಹಲವು ಜಿಲ್ಲೆಗಳಲ್ಲೂ ಚಿತ್ರಪ್ರದರ್ಶವಾಗಲಿದೆ. ಕೂಲಿ ಕಾರ್ಮಿಕರು ತಮ್ಮ ಗುಡಿಸಲಿನಲ್ಲೇ ಚಿತ್ರ ನೋಡಲು ಕಾಯುತ್ತಿದ್ದಾರೆ. ಅವರಿಗಾಗಿ ಚಿತ್ರವನ್ನು ಕಳುಹಿಸಲಾಗಿದೆ. ಬೆಂಗಳೂರಿನಲ್ಲೂ ಸಾಕ್ಷ್ಯಚಿತ್ರ ನೋಡಲು ತುಂಬಾ ಜನ ಕಾಯುತ್ತಿದ್ದಾರೆ. ನಮಗೂ ಚಿತ್ರ ಕಳುಹಿಸಿಕೊಡಿ ಎಂದು ಕೇಳುತ್ತಿದ್ದಾರೆ. ನಾವು ಎಲ್ಲಾ ಕಡೆ ತಲುಪಿಸುವ ಕೆಲಸ ಮಾಡುತ್ತಿದ್ದೇವೆ’ ಎಂದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವತಂತ್ರ ಸೇನಾನಿ ಎಚ್.ಎಸ್.ದೊರೆಸ್ವಾಮಿ, “ಗಾಂಧೀಜಿಯವರ ಜೊತೆಯಲ್ಲಿ ಕೆಲಸ ಮಾಡಿದವರ ಜೊತೆ ಹೋಲಿಕೆ ಮಾಡಿಕೊಂಡರೇ ನನ್ನ ಪಾತ್ರ ನಿಜಕ್ಕೂ ಏನೂ ಅಲ್ಲ. ಅಂತಹ ನನ್ನನ್ನು ದೀಪು ಈ ಸಾಕ್ಷ್ಯಚಿತ್ರದ ಮೂಲಕ ದೊಡ್ಡ ಮನುಷ್ಯ ಮಾಡಿಬಿಟ್ಟರು. ನಾನು ಕೊಟ್ಟ ಎಲ್ಲಾ ಕಷ್ಟಗಳನ್ನು ಸಹಿಸಿಕೊಂಡು ದೀಪು ತನ್ನ ಹಣ, ಸಮಯ, ಶ್ರಮವನ್ನು ವ್ಯಯಿಸಿ ಇಂಥ ಒಂದು ಸಾಹಸ ಮಾಡಿದ್ದಾರೆ” ಎಂದರು.

ಇನ್ನು ತಮ್ಮ ಬಗ್ಗೆ ಬಂದ ಟೀಕೆಗಳಿಗೆ ಉತ್ತರಿಸುತ್ತಾ, “ಟೀಕೆಗಳು ಬೇಸರ ಉಂಟುಮಾಡಲಿಲ್ಲ. ಆದರೆ ನನ್ನ ಜೊತೆ ಆತ್ಮೀಯವಾಗಿದ್ದ ಒಬ್ಬರು ಒಂದು ಪ್ರತಿರೋಧ ಕೂಡ ತೋರಿಸಲಿಲ್ಲ ಅದು ಬೇಸರವುಂಟುಮಾಡಿತು. ಆದರೆ ತುಂಬಾ ಜನ ನನ್ನ ಪರವಾಗಿ ನಿಂತರು, ಗೋಪಾಲಗೌಡರು ಕೂಡ ನನಗೆ ಬೆಂಬಲ ನೀಡಿದರು. ಅವರ ಟೀಕೆಗಳಿಗೆ ಉತ್ತರ ನೀಡಲೇಬೇಕು ಎಂದು ಈ ಪುಸ್ತಕ ಹೊರತರುತ್ತಿದ್ದೇವೆ. ಆದರೂ ಯಾರ ಮೇಲೂ ಕೆಟ್ಟ ಮಾತುಗಳನ್ನಾಡಿಲ್ಲ. ಜನರಿಗೆ, ಟೀಕಾಕಾರರಿಗೆ ಮನವರಿಕೆ ಮಾಡುವ ಕೆಲಸ ಮಾಡಿದ್ದೇವೆ. ಅವರಿಗೆ ಜ್ಞಾನೋದಯವಾಗಬೇಕು, ಪಶ್ಚಾತಾಪವಾಗಬೇಕು ಅಷ್ಟೆ” ಎಂದರು.

ವೀರ ಸಾರ್ವಕರ್‌ ಅವರನ್ನು ನಾನು ತುಚ್ಛವಾಗಿ ಕಾಣಲಿಲ್ಲ. ಪರಾಕ್ರಮಿಯಾಗಿ ಕೆಲಸ ಮಾಡಿದ ಒಬ್ಬ ವೀರ ಪುರುಷ, ನಾನು ಮಾಡಿದ್ದು ತಪ್ಪಾಯಿತು, ನೀವು ಹೇಳಿದಂತೆ ಕೇಳುತ್ತೇನೆ ಎಂದು ಬ್ರೀಟಿಷರ ಕರಾರುಗಳಿಗೆ ಒಪ್ಪಿದ್ದು ಯಾಕೆ ಎಂದು ಪ್ರಶ್ನಿಸಿದೆ. ಕ್ಷಮಾಪಣ ಪತ್ರ ಬರೆದುದ್ದಕ್ಕೆ ನಾನು ಹೇಡಿ ಎಂದೆ. ಹೋರಾಟಕ್ಕೆ ಅಷ್ಟೊಂದು ಕೆಲಸ ಮಾಡಿದಾತ ಬ್ರೀಟಿಷರಿಗೆ ಶರಣಾದಾಗ, ಮತ್ತೆ ಹೋರಾಟ ಮಾಡುವುದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟರೆ ಹೇಡಿ ಅನ್ನದೇ ಮತ್ತೇನು ಅನ್ನಬೇಕು? ಎಂದು ದೊರೆಸ್ವಾಮಿ ಪ್ರಶ್ನಿಸಿದರು.

ಕಾರ್ಯಕ್ರಮದಲ್ಲಿ ಹಿರಿಯ ಚಿಂತಕ ಜಿ.ರಾಮಕೃಷ್ಣ, ಗುರುಪ್ರಸಾದ್ ಆಕೃತಿ, ಮಹಾನ್ ತಾತ ಸಾಕ್ಷ್ಯಚಿತ್ರದ ನಿರ್ದೇಶಕ ದೀಪು ಭಾಗಿಯಾಗಿದ್ದರು.

ಮಹಾನ್ ತಾತ ಸಾಕ್ಷ್ಯಚಿತ್ರದ ಬಗ್ಗೆ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ದೊರೆಸ್ವಾಮಿಯವರ ಜೀವನವನ್ನು ಇಂದಿನ ಪೀಳಿಗೆಯ ಮುಂದೆ ತೆರೆದಿಡುವ ಕೆಲಸವನ್ನು 39 ನಿಮಿಷದ ಈ ಸಾಕ್ಷ್ಯಚಿತ್ರ ಮಾಡುತ್ತದೆ. 103 ವರ್ಷಗಳ ತುಂಬು ಜೀವನದ ಕ್ಷಣಗಳನ್ನು ಈ ಚಿತ್ರದಲ್ಲಿ ಸೆರೆಹಿಡಿಯಲಾಗಿದೆ. ದೊರೆಸ್ವಾಮಿಯವರು ಪಾಲ್ಗೊಂಡ ಹೋರಾಟದ ಫಲಾನುಭವಿಗಳು, ಬಡಜನರು ದೊರೆಸ್ವಾಮಿಯವರ ಬಗ್ಗೆ ಮಾತನಾಡಿರುವುದು ಸಾಕ್ಷ್ಯಚಿತ್ರದಲ್ಲಿ ದಾಖಲಾಗಿದೆ.

ಪೆಡೆಸ್ಟ್ರಿಯನ್ ಪಿಕ್ಚರ್ಸ್ ಮತ್ತು ದೀಪು

ದೀಪು ಎಂದೇ ಚಿರಪರಿಚಿತರಾದ ಕೆ.ಪಿ ಪ್ರದೀಪ್‌ರವರು ಪೆಡೆಸ್ಟ್ರಿಯನ್ ಪಿಕ್ಚರ್ಸ್ ಎಂಬ ಜನಪರ ಮಾಧ್ಯಮ ಸಂಸ್ಥೆಯ ಸ್ಥಾಪಕ ಸದಸ್ಯರಲ್ಲೊಬ್ಬರು. ಮೂಲತಃ ಕೇರಳದ ತಿರುವೂರು ಜಿಲ್ಲೆಯ ಮಲಪ್ಪುರಂರವರಾದ ಇವರು ಕಳೆದ 20 ವರ್ಷಗಳಿಂದ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಸಮಾಜದಲ್ಲಿ ಅಸ್ತಿತ್ವದಲ್ಲಿರುವ ಸಾಮಾಜಿಕ-ರಾಜಕೀಯ ವಾಸ್ತವಗಳ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಸಿನಿಮಾ-ಸಾಕ್ಷ್ಯಚಿತ್ರವನ್ನು ಪರಿಣಾಮಕಾರಿಯಾಗಿ ಬಳಸಬೇಕೆನ್ನುವುದು ಅವರ ಅಭಿಲಾಷೆ.

ದೊರೆಸ್ವಾಮಿಯವರ ಬಗ್ಗೆ

ಹಲವರು ಹುಟ್ಟುತ್ತಲೇ ಮುದುಕರು ಆದರೆ ಕೆಲವರು ಸಾಯುವವರೆಗೂ ಚಿರಯುವಕರು ಎಂಬ ನಾಣ್ಣುಡಿಯಂತೆ’ ಹಿರಿಯ ಸ್ವಾತಂತ್ರ್ಯ ಹೋರಾಟಗಾರ, ಶತಾಯುಷಿ, ನಾಡಿನ ಸಾಕ್ಷಿಪ್ರಜ್ಞೆ ಎಚ್‌.ಎಸ್‌ ದೊರೆಸ್ವಾಮಿಯವರು ಇಂದಿಗೂ ಜನಪರರ ಪಾಲಿಗೆ ರಾಕ್‌ಸ್ಟಾರ್‌ ಆಗಿಯೇ ಲವಲವಿಕೆಯಿಂದ ದೃಢವಾಗಿದ್ದಾರೆ. ಬಡಜನರ ಪರ ಸದಾ ಹೋರಾಟನಿರತ ಸ್ವಾತಂತ್ರ್ಯ ಸೇನಾನಿಗೆ ಈಗ 103 ವರ್ಷ. ಇವರ ಜೀವನಾಧಾರಿತ ಚಿತ್ರವೇ ಮಹಾನ್ ತಾತ.

ಇದನ್ನೂ ಓದಿ: ಅಂಬೇಡ್ಕರ್‌ರವರ ಆರ್ಥಿಕ ಚಿಂತನೆಗಳು ದಾರಿಯಾಗಲಿ – ಎಚ್. ಎಸ್ ದೊರೆಸ್ವಾಮಿ

 

 


ಇದನ್ನೂ ಓದಿ: ಹೊಸ ತಲೆಮಾರು ಅಂಬೇಡ್ಕರ್–ಗಾಂಧಿ ಸಮನ್ವಯದ ಬಗ್ಗೆ ಚಿಂತಿಸಲಿ: ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...