Homeಮುಖಪುಟಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

ಕಮರಿದ ವಿಶ್ವಾಸ; ಕುಲೀನ ಅನುಮಾನಗಳ ನಡುವೆ, ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ: ಶಿವಸುಂದರ್‌

- Advertisement -
- Advertisement -

ಇಂದು ಬಾಬರಿ ಮಸೀದಿ ಒಡೆದ ಸ್ಥಳದಲ್ಲಿ ರಾಮ ಮಂದಿರ ಶಿಲಾನ್ಯಾಸ ಕಾರ್ಯಕ್ರಮ ನಡೆಯುತ್ತಿದೆ. ”500 ವರ್ಷಗಳಿಂದ ಕಾದು ಕುಳಿತಿದ್ದ ರಾಮಲಲ್ಲಾಗೆ ಇಂದು ಮುಕ್ತಿ ಸಿಕ್ಕಿದೆ, ರಾಮಲಲ್ಲಾ ತನ್ನ ಸ್ವತ್ತನ್ನು ಮರಳಿ ಪಡೆದುಕೊಂಡಿದ್ದಾನೆ” ಎಂದೆಲ್ಲಾ ಹೇಳುತ್ತ ದೇಶ್ಯಾದ್ಯಂತ ಅಬ್ಬರದ ಮೆರಗು ಹುಟ್ಟಿಸಲಾಗುತ್ತಿದೆ.

ಆದೆರೆ ರಾಮಲಲ್ಲಾ ಎಲ್ಲರಿಗೂ ಪರಿಚಿತನಾದದ್ದೇ 1992ರಲ್ಲಿ ಸಂಘ ಪರಿವಾರ ಬಾಬರಿ ಮಸೀದಿಯನ್ನು ದ್ವಂಸ ಮಾಡಿದ ನಂತರ, ಅದರ ವ್ಯಾಜ್ಯ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದಾಗ. ಇದೆಲ್ಲದರ ನಡುವೆ, ಕಣ್ಣೆದುರೇ ಇರುವ ಮಸೀದಿಯನ್ನು ಪರಿಗಣಿಸದೆ ನ್ಯಾಯಾಂಗ 500 ವರ್ಷಗಳ ನಂಬಿಕೆಗೆ ಮಾರುಹೋಗಿ ತೀರ್ಪು ನೀಡಿದೆ.

ವಿವಾದಿತ ಜಾಗದಲ್ಲಿ ಮಸೀದಿಯ ಬದುಲು ಮಂದಿರ ಏಳುತ್ತಿದೆ. ಈ ಕುರಿತು, ‘ಇಂದು ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ’ ಎಂದು ಚಿಂತಕ ಶಿವಸುಂದರ್ ಅವರು ಕವಿತೆ ಬರೆದಿದ್ದಾರೆ.

ಇಂದು ಈ ದೇಶ ಮತ್ತೊಮ್ಮೆ ವಿಭಜನೆಯಾಗಿದೆ

ದಫನಾದ ಸತ್ಯ – ವೈಭವದ ಮಿಥ್ಯಗಳ ನಡುವೆ
ರೋಗಿಷ್ಟ ಧರ್ಮ – ಬಲಿಷ್ಠ ಆಧರ್ಮಗಳ ನಡುವೆ
ಕಮರಿದ ವಿಶ್ವಾಸ – ಕುಲೀನ ಅನುಮಾನಗಳ ನಡುವೆ

ಇಂದು ಈ ದೇಶ
ಮತ್ತೊಮ್ಮೆ ವಿಭಜನೆಯಾಗಿದೆ.

ಇಲ್ಲಿ ಧರ್ಮವೂ ಅಧರ್ಮದ ಬೆನ್ನೇರಿದೆ..
ನ್ಯಾಯದ ದೋಣಿಯಲ್ಲಿ ಅನ್ಯಾಯದ ಪಯಣ
ನಿರಾತಂಕವಾಗಿ ಸಾಗಿದೆ…

ಕಾಗದಪತ್ರವಿಲ್ಲದಿದ್ದರೂ
ಕದ್ದವರ ಒಡೆತನ ಸಾಬೀತಾಗಿದೆ..
ಸಾಕ್ಷಿ ಪುರಾವೆಗಳೆಂಬ
ಪರದೇಸಿ ಪ್ರಮಾಣಗಳು ರದ್ದಾಗಿ….
ನ್ಯಾಯದ ರಕ್ಷಣೆಗೆ
ಸನಾತನ ಪಹರೆ ವಿಧಿಸಲಾಗಿದೆ..
ಬಲವಿದ್ದವರ “ಭಕ್ತಿ”ಗೆ ದೈವವೂ ನಡುಗಿದೆ…

ಇನ್ನೂ ನಂಬಿಕೆಯೇ ಸಂವಿಧಾನ,
ರಣ ಘೋಷಗಳೇ ವೇದವಾಕ್ಯ
ನಂಬಿಕೆಯಂತೆ ನಡೆದರೆ ಮೋಕ್ಷ,
ಇಲ್ಲವೇ ನಿಜ ನಿರ್ವಾಣ..
ಪುರಾಣ ಮಂತ್ರ ತಂತ್ರ ಕವಡೆ
ಜನಸಂಖ್ಯೆಗೆ ಅನುಗುಣವಾಗಿ ನ್ಯಾಯದ ಬಟವಾಡೆ….

ರಾಮರಾಜ್ಯ ಸ್ವಾಮಿ…
ಶಂಬೂಕರಾದರೆ ನರಕ
ಸಹಿಸಿಕೊಂಡು ಬಾಳಿದರೆ … ಸ್ವರ್ಗಸುಖ!

– ಶಿವಸುಂದರ್


ಓದಿ: ಮೋದಿ ಭಾಷಣದಲ್ಲಿದ್ದ ಮೂರು ಮಹಾ ಸುಳ್ಳುಗಳು : ಶಿವಸುಂದರ್‌


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...