Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...