Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...