Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...