Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆ, ಪ್ರಧಾನಿ ಪ್ರತಿಕ್ರಿಯೆ ಇಲ್ಲದೆ ರಾಷ್ಟ್ರಪತಿ ಭಾಷಣಕ್ಕೆ ವಂದನಾ ನಿರ್ಣಯ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಇಂದು (ಫೆ.5, ಗುರುವಾರ) ಲೋಕಸಭೆ ಕಲಾಪ ಹಲವು ಬಾರಿ ಮುಂದೂಡಿಕೆಯಾಯಿತು. ಆದರೂ, ಗದ್ದಲ ಕಡಿಮೆಯಾಗದ ಕಾರಣ ಅಂತಿಮವಾಗಿ ಸ್ಪೀಕರ್ ಓಂ ಬಿರ್ಲಾ ಕಲಾಪವನ್ನು ಒಂದು ದಿನದ ಮಟ್ಟಿಗೆ,...

ಮಾಲೂರು ಮರು ಮತ ಎಣಿಕೆ : ಕಾಂಗ್ರೆಸ್‌ನ ನಂಜೇಗೌಡ ಗೆಲುವು ಎತ್ತಿಹಿಡಿದ ಸುಪ್ರೀಂ ಕೋರ್ಟ್

ರಾಜ್ಯ ವಿಧಾನಸಭೆಯ 2023ರ ಚುನಾವಣೆಯಲ್ಲಿ ಕೋಲಾರ ಜಿಲ್ಲೆ ಮಾಲೂರು ಕ್ಷೇತ್ರದಿಂದ ಕಾಂಗ್ರೆಸ್‌ನ ಕೆ.ವೈ ನಂಜೇಗೌಡ ಗೆಲುವು ಸಾಧಿಸಿರುವುದನ್ನು ಸುಪ್ರೀಂ ಕೋರ್ಟ್ ಗುರುವಾರ (ಫೆ.5) ಎತ್ತಿ ಹಿಡಿದಿದೆ. ಮತಗಳ ಮರುಎಣಿಕೆಯ ನಂತರವೂ, ನಂಜೇಗೌಡರು ತಮ್ಮ ಎದುರಾಳಿ...

ಅತ್ಯಾಚಾರಿ ಅಸಾರಾಂ ಆಶ್ರಮದ ಭೂಮಿ ವಶಕ್ಕೆ ಪಡೆಯಲು ಸರ್ಕಾರಕ್ಕೆ ಹೈಕೋರ್ಟ್ ಅನುಮತಿ

ಅತ್ಯಾಚಾರ ಪ್ರಕರಣದ ಅಪರಾಧಿ ಮತ್ತು ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಪುನ ಅಹಮದಾಬಾದ್‌ನ ಮೊಟೇರಾದಲ್ಲಿರುವ ಆಶ್ರಮದಿಂದ 45,000 ಚದರ ಮೀಟರ್‌ಗೂ ಹೆಚ್ಚು ಭೂಮಿಯನ್ನು ವಾಪಸ್ ಪಡೆಯಲು ಗುಜರಾತ್ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಅನುಮತಿ...

ಬಿಹಾರ ಚುನಾವಣೆಯಲ್ಲಿ ಅಕ್ರಮ ಆರೋಪಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಜನ್ ಸುರಾಜ್ ಪಕ್ಷ : ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ

ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷವು 2025ರ ಬಿಹಾರ ವಿಧಾನಸಭಾ ಚುನಾವಣೆಯನ್ನು ಪ್ರಶ್ನಿಸಿ ಗುರುವಾರ (ಫೆ.5) ಸುಪ್ರೀಂ ಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದೆ ಎಂದು ವರದಿಯಾಗಿದೆ. ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ವ್ಯಾಪಕ...

ಸಭಾಪತಿ ಹೊರಟ್ಟಿ ಉಮಾಶ್ರೀ ಜೊತೆ ಬಳಸಿದ ಭಾಷೆ ಶಿಸ್ತಿನ ಹೆಸರಿನ ಅಹಂಕಾರ: ನಿರ್ದೇಶಕಿ ಸುಮನಾ ಕಿತ್ತೂರು

ಸಭಾಪತಿ ಬಸವರಾಜ ಹೊರಟ್ಟಿ ಅವರು ವಿಧಾನಪರಿಷತ್‌ನಲ್ಲಿ ಉಮಾಶ್ರೀ ಅವರಿಗೆ ಬಳಸಿದ ಭಾಷೆ ಶಿಸ್ತಿನ ಹೆಸರಲ್ಲಿನ ಅಹಂಕಾರವಾಗಿದೆ ಎಂದು ನಿರ್ದೇಶಕಿ ಸುಮನಾ ಕಿತ್ತೂರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಗುರುವಾರ (ಫೆ.5) ಈ ಕುರಿತು ಫೇಸ್‌ಬುಕ್‌ನಲ್ಲಿ ಪೋಸ್ಟ್ ಹಾಕಿರುವ...

ವಾಷಿಂಗ್ಟನ್ ಪೋಸ್ಟ್‌ನಲ್ಲಿ ಉದ್ಯೋಗ ಕಡಿತ : ಕೆಲಸ ಕಳೆದುಕೊಂಡ ಶಶಿ ತರೂರ್ ಮಗ

ಪ್ರಮುಖ ಮಾಧ್ಯಮ ಸಂಸ್ಥೆ ವಾಷಿಂಗ್ಟನ್‌ ಪೋಸ್ಟ್‌ನಲ್ಲಿ ಭಾರೀ ಉದ್ಯೋಗ ಕಡಿತ ನಡೆದಿರುವ ಬಗ್ಗೆ ವರದಿಯಾಗಿದೆ. ಈ ಕುರಿತು ಕೆಲಸ ಕಳೆದುಕೊಂಡಿರುವ ಹಿರಿಯ ಕಾಂಗ್ರೆಸ್‌ ನಾಯಕ ಹಾಗೂ ಸಂಸದ ಶಶಿ ತರೂರ್ ಅವರ ಮಗ...

ಪ್ರತಿಪಕ್ಷಗಳಿಂದ ತೀವ್ರ ಪ್ರತಿಭಟನೆ : ಲೋಕಸಭೆ ಕಲಾಪ ಮುಂದೂಡಿಕೆ

ಪ್ರತಿಪಕ್ಷಗಳ ತೀವ್ರ ಪ್ರತಿಭಟನೆ ಹಿನ್ನೆಲೆ ಗುರುವಾರ (ಫೆ.5) ಲೋಕಸಭೆ ಕಲಾಪವನ್ನು ಸ್ಪೀಕರ್ ಓಂ ಬಿರ್ಲಾ ಮಧ್ಯಾಹ್ನದವರೆಗೆ ಮುಂದೂಡಿದರು. ಬೆಳಿಗ್ಗೆ 11 ಗಂಟೆಗೆ ಸದನ ಸಮಾವೇಶಗೊಳ್ಳುತ್ತಿದ್ದಂತೆಯೇ, ಪ್ರತಿಪಕ್ಷದ ಸದಸ್ಯರು ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದರು. ವಿಶೇಷವಾಗಿ,...

ಗದಗ | ಕ್ಯಾಂಟರ್-ಕ್ರೂಸರ್ ನಡುವೆ ಅಪಘಾತ : ಮೂವರು ಸ್ಥಳದಲ್ಲೇ ಸಾವು, 10ಕ್ಕೂ ಹೆಚ್ಚು ಜನರಿಗೆ ಗಾಯ

ಗದಗ ಜಿಲ್ಲೆ ರೋಣ ತಾಲೂಕಿನ ಜಿಗಳೂರು ಕ್ರಾಸ್ ಬಳಿ ಕ್ರೂಸರ್ ಹಾಗೂ ಕ್ಯಾಂಟರ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಮೂವರು ಮಹಿಳೆಯರು ಸ್ಥಳದಲ್ಲೇ ಸಾವಿಗೀಡಾಗಿದ್ದು, 10ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗಜೇಂದ್ರಗಡದ...

‘ಗಾಜಿಯಾಬಾದ್ ಮೂವರು ಸಹೋದರಿಯರ ಆತ್ಮಹತ್ಯೆ’: ಕೊರಿಯನ್ ಮೂಲದ ಆನ್ ಲೈನ್ ಆಟದಿಂದ ಸಾವನ್ನಪ್ಪಿರುವ ಶಂಕೆ 

ಗಾಜಿಯಾಬಾದ್‌ನಲ್ಲಿ ಬುಧವಾರ ತಡರಾತ್ರಿ 12, 14 ಮತ್ತು 16 ವರ್ಷ ವಯಸ್ಸಿನ ಮೂವರು ಸಹೋದರಿಯರು ತಮ್ಮ ವಸತಿ ಕಟ್ಟಡದ ಟೆರೇಸ್‌ನಿಂದ ಹಾರಿ ಸಾವನ್ನಪ್ಪಿದ್ದಾರೆ. ಈ ಕೃತ್ಯವು ಕೊರಿಯನ್ ಮೂಲದ ಆನ್‌ಲೈನ್ ಆಟಕ್ಕೆ ಸಂಬಂಧಿಸಿರಬಹುದು...

‘ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟು’: ಮಧ್ಯಪ್ರವೇಶಿಸುವಂತೆ ಕೇಂದ್ರ ಸರ್ಕಾರಿ ಸಂಸ್ಥೆಗಳಿಗೆ ಮನವಿ ಪತ್ರ ಸಲ್ಲಿಸಿದ ಲಕ್ಷದ್ವೀಪ ವಿದ್ಯಾರ್ಥಿಗಳ  ಸಂಘ 

ಲಕ್ಷದ್ವೀಪ ವಿದ್ಯಾರ್ಥಿ ಸಂಘವು, ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚುತ್ತಿರುವ ನಿರುದ್ಯೋಗ ಬಿಕ್ಕಟ್ಟಿನ ಬಗ್ಗೆ ಮಧ್ಯಪ್ರವೇಶಿಸುವಂತೆ ರಾಷ್ಟ್ರೀಯ ಪರಿಶಿಷ್ಟ ಪಂಗಡಗಳ ಆಯೋಗ ಮತ್ತು ಇತರ ಕೇಂದ್ರ ಸರ್ಕಾರಿ ಸಂಸ್ಥೆಗಳನ್ನು ಒತ್ತಾಯಿಸಿದೆ. ಒಂದು ವರ್ಷಕ್ಕೂ ಹೆಚ್ಚು ಕಾಲ...