Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...