Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...