Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...