Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ಬಿಡದಿ ಟೌನ್‌ಶಿಪ್ ಭೂಸ್ವಾಧೀನ ಪ್ರಕ್ರಿಯೆ ರದ್ದುಗೊಳಿಸಲು ಸಂಯುಕ್ತ ಹೋರಾಟ ಕರ್ನಾಟಕ ಆಗ್ರಹ

ಫಲವತ್ತಾದ ಕೃಷಿ ಭೂಮಿ ನಾಶ ಮಾಡಿ ನಿರ್ಮಿಸಲು ಉದ್ದೇಶಿಸಿರುವ ಬಿಡದಿ ಟೌನ್‌ಶಿಪ್ ಯೋಜನೆ ರೈತ ವಿರೋಧಿ ಹಾಗೂ ಜೀವ ಪರಿಸರ ವ್ಯವಸ್ಥೆಗೆ ವಿನಾಶಕಾರಿ. ಇಂತಹ ಪರಿಸರ ವಿನಾಶದ ಯೋಜನೆಗೆ ನೀಡಿರುವ ಸಂಪುಟ ಅನುಮೋದನೆಯನ್ನು...

‘ಮನೆ ಕೊಡಿ ಇಲ್ಲಾ ಜೈಲಿಗಾದರೂ ಬಿಡಿ’ : ಬೀದಿಗೆ ಬಿದ್ದ ಕೋಗಿಲು ನಿರಾಶ್ರಿತರ ಅಳಲು

"ನಮಗೊಂದು ಸೂರು ಕೊಟ್ಟರೆ ಅದಕ್ಕೆ ಕಾರಣರಾದ ಎಲ್ಲರನ್ನೂ ಹರಸಿ ನೆಮ್ಮದಿಯಾಗಿ ಬದುಕುತ್ತೇವೆ. ಇಲ್ಲವಾದರೆ ನಮ್ಮನ್ನು ಜೈಲಿಗಾದರೂ ಹಾಕಿಬಿಡಿ. ಒಂದು ನೆಲೆ ಮತ್ತು ಮೂರು ಹೊತ್ತಿನ ಊಟವಾದರೂ ಸಿಗುತ್ತದೆ". ಇದು ಸರ್ಕಾರ ಮನೆ ಧ್ವಂಸ...