Homeಅಂತರಾಷ್ಟ್ರೀಯಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರ : ಜಾಗತಿಕ ಹಸಿವು ಸೂಚ್ಯಂಕ ವರದಿ

- Advertisement -
- Advertisement -

ಇಂದು ವಿಶ್ವ ಆಹಾರ ದಿನ. ಭಾರತದಲ್ಲಿ ಹಸಿವು ಮತ್ತು ಅಪೌಷ್ಠಿಕತೆಯ ಪ್ರಮಾಣ ಹೆಚ್ಚಿದೆ. ಭಾರತದಲ್ಲಿ ಮಕ್ಕಳ ಮರಣ ಪ್ರಮಾಣದ ಬೆಳವಣಿಗೆ ಅತ್ಯಂತ ಕೆಟ್ಟದಾಗಿದೆ ಎಂದು ಜಾಗತಿಕ ಹಸಿವು ಸೂಚ್ಯಂಕ ( ಜಿ.ಎಚ್.ಐ) ವರದಿ ನೀಡಿದೆ. ಪ್ರತಿ ವರ್ಷ ಜಿ.ಎಚ್.ಐ ವಿವಿಧ ರಾಷ್ಟ್ರಗಳಲ್ಲಿ ಹಸಿವಿನಿಂದ ಬಳಲುವವರು, ಮಕ್ಕಳಲ್ಲಿ ಅಪೌಷ್ಠಿಕತೆಯ ಬಗ್ಗೆ ಅಂಕಿ ಅಂಶ ಕಲೆ ಹಾಕಿ ಪ್ರಕಟಿಸುತ್ತದೆ. ಜಾಗತಿಕ ಮಟ್ಟದಲ್ಲಿ ಜೀರೋ ಅಂಕ ಹೊಂದಿರುವ ರಾಷ್ಟ್ರಗಳಲ್ಲಿ ಹಸಿವು ಮತ್ತು ಅಪೌಷ್ಠಿಕತೆ ಇಲ್ಲವೆಂದು ತೀರ್ಮಾನಿಸಲಾಗುತ್ತದೆ. ಅದೇ ರೀತಿ 100 ಗಡಿ ದಾಟಿದ ದೇಶಗಳಲ್ಲಿ ಹಸಿವಿನಿಂದ ಬಳಲುವವರು ಮತ್ತು ಅಪೌಷ್ಠಿಕತೆ, ಮಕ್ಕಳಲ್ಲಿ ಅನಾರೋಗ್ಯ ಪ್ರಮಾಣ ಹೆಚ್ಚಿದೆ ಎಂದರ್ಥ. ಅಂತಹ ದೇಶಗಳಲ್ಲಿ ಅತ್ಯಂತ ಕೆಟ್ಟ ಸ್ಥಿತಿಯಿದೆ ಎಂದು ವರದಿ ಹೇಳುತ್ತದೆ.

ಜಿ.ಎಚ್.ಐ ವಾರ್ಷಿಕ ವರದಿಯಾಗಿದ್ದು, ಇದನ್ನು ಐರ್ಲೆಂಡ್‌ನ ಕನ್ಸರ್ನ್ ವರ್ಲ್ಡ್‌ ವೈಡ್ ಮತ್ತು ಜರ್ಮನಿಯ ವೆಲ್ತುಂಗರ್‌ ಹಿಲ್ಫ್ ಜಂಟಿಯಾಗಿ ಪ್ರಕಟಿಸಿವೆ. ಈಗ ಸುಮಾರು 117 ರಾಷ್ಟ್ರಗಳಲ್ಲಿನ ಅಂಕಿ-ಅಂಶಗಳನ್ನು ಜಿ.ಎಚ್.ಐ ಪ್ರಕಟಿಸಿದೆ. ಇದರಲ್ಲಿ ಭಾರತದ ಸಂಖ್ಯೆ 102. ಇದು ಭಾರತದಲ್ಲಿ ಹಸಿವಿನ ಪ್ರಮಾಣ ಹೆಚ್ಚಿದೆ ಮತ್ತು ಅಪೌಷ್ಠಿಕತೆ ತೀವ್ರ ಪ್ರಮಾಣದಲ್ಲಿದೆ ಎಂಬುದನ್ನು ತೋರಿಸುತ್ತದೆ. ಭಾರತದಲ್ಲಿ ಹಸಿವಿನ ಮಟ್ಟ ಶೇ. 30.3 ರಷ್ಟಿದ್ದು, ಪರಿಸ್ಥಿತಿ ಗಂಭೀರವಾಗಿದ್ದು, ಹಸಿವಿನಿಂದ ಹೆಚ್ಚು ಜನತೆ ಬಳಲುತ್ತಿದ್ದಾರೆ ಎಂಬುದಾಗಿ ಹೇಳಿದೆ. ಪ್ರತಿ ವರ್ಷ ಜಿ.ಎಚ್.ಐ ಹಸಿವು ಸೂಚ್ಯಂಕ ವರದಿಯನ್ನು ಬಿಡುಗಡೆ ಮಾಡುತ್ತದೆ.

ಅಂದಹಾಗೇ ಭಾರತ ಅಕ್ಕ-ಪಕ್ಕದ ದೇಶಗಳಿಗಿಂತಲೂ ಕಳಪೆ ಮಟ್ಟದಲ್ಲಿರುವುದು, ಆತಂಕಕಾರಿ ಬೆಳವಣಿಗೆಯಾಗಿದೆ. ಪಕ್ಕದ ರಾಷ್ಟ್ರಗಳಾದ ನೇಪಾಳ, ಪಾಕಿಸ್ತಾನ, ಬಾಂಗ್ಲಾದೇಶಗಳಿಗಿಂತ ಹೆಚ್ಚು ಗಂಭೀರ ಹಸಿವಿನ ದುಸ್ಥಿತಿಯನ್ನು ಭಾರತ ಅನುಭವಿಸುತ್ತಿದೆ. ಪಾಕಿಸ್ತಾನ 94 ನೇ ಸ್ಥಾನ, ಬಾಂಗ್ಲಾದೇಶ 88, ನೇಪಾಳ 73 ನೇ ಸ್ಥಾನದಲ್ಲಿದೆ. ಅಂದರೆ ಆ ದೇಶಗಳಿಗಿಂತ ಭಾರತದಲ್ಲಿ ಹಸಿವಿನ ಆಹಾಕಾರ ಹೆಚ್ಚಿದೆ ಎಂಬುದು ಇದರಿಂದ ಖಾತ್ರಿಯಾಗುತ್ತಿರುವುದು ದುರಂತ.

2014 ರ ವೇಳೆ ಭಾರತ 55ನೇ ಸ್ಥಾನದಲ್ಲಿದ್ದರೆ, 2017ರಲ್ಲಿ ಭಾರತ 100ನೇ ಸ್ಥಾನಕ್ಕೆ ಕುಸಿದಿತ್ತು. 2018ರಲ್ಲಿ 103ನೇ ಸ್ಥಾನಕ್ಕೆ ಇಳಿದಿದ್ದ ಭಾರತ ಈ ಬಾರಿ ಒಂದು ರ್ಯಾಂಕ್ ಮೇಲೇರಿದೆಯಾದರು (102ನೇ ಸ್ಥಾನ) ನಾವು ಬಡರಾಷ್ಟ್ರಗಳೆಂದು ಕರೆಯುವ ನೆರೆಯ ಪಾಕಿಸ್ತಾನ, ಬಾಂಗ್ಲಾ, ನೇಪಾಳಗಳಿಗಿಂತಲೂ ತೀರಾ ಹಿಂದೆ ಬಿದ್ದಿರೋದು ನಮ್ಮನ್ನು ನಾವು ವಿಮರ್ಶೆ ಮಾಡಿಕೊಳ್ಳಬೇಕಿರುವ ಅಗತ್ಯತೆಯನ್ನು ಒತ್ತಿ ಹೇಳುತ್ತಿದೆ

ಭಾರತ ಬೃಹತ್ ರಾಷ್ಟ್ರ. ಇಲ್ಲಿ ಜನಸಂಖ್ಯೆ ಕೂಡ ಹಸಿವಿನ ಸೂಚ್ಯಂಕದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹಸಿವಿನಿಂದ ಮಕ್ಕಳು ಬಳಲುವುದು, ಮಕ್ಕಳ ಬೆಳವಣಿಗೆ ಕುಂಠಿತಗೊಳ್ಳುವುದು, ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಅನಾರೋಗ್ಯ, ಪೋಲಿಯೋ, ವಯಸ್ಸಿಗಿಂತ ಕಡಿಮೆ ತೂಕ, ಕಡಿಮೆ ಎತ್ತರ, ಪೌಷ್ಠಿಕಾಂಶವುಳ್ಳ ಆಹಾರದ ಕೊರತೆ, ಐದು ವರ್ಷದೊಳಗಿನ ಮಕ್ಕಳ ಮರಣ ಪ್ರಮಾಣ, ಮಕ್ಕಳನ್ನು ಕೆಲಸಗಳಿಗೆ ಬಳಕೆ ಮಾಡುವುದು, ಯಾವ ಪ್ರದೇಶಗಳಲ್ಲಿ ಹೆಚ್ಚು ಅಪೌಷ್ಠಿಕತೆಯಿಂದ ಮಕ್ಕಳು ಬಳಲುತ್ತಿದ್ದಾರೆ ಎಂಬ ಅಂಶಗಳ ಆಧಾರದ ಮೇಲೆ ಹಸಿವಿನ ಸೂಚ್ಯಂಕವನ್ನು ತಾಳೆ ಹಾಕಲಾಗುತ್ತದೆ. ಕ್ಯಾಲೋರಿ ಕೊರತೆ, ಕಳಪೆ ಆಹಾರ, ಮಕ್ಕಳಿಗೆ ನಿರ್ದಿಷ್ಟ ಪ್ರಮಾಣದ ಆಹಾರ ಒದಗಿಸುವಲ್ಲಿನ ವೈಫಲ್ಯ ಸಹ ಹಸಿವು ಸೂಚ್ಯಂಕದಡಿಯಲ್ಲಿ ದಾಖಲಾಗುತ್ತದೆ. ಪ್ರತಿ ರಾಷ್ಟ್ರದ ಹಸಿವಿನ ಪ್ರಮಾಣ ಮತ್ತು ಅಂಕಿ ಅಂಶಗಳನ್ನು ಜಾಗತಿಕ ಹಸಿವು ಸೂಚ್ಯಂಕ ನೀಡುತ್ತದೆ.

ಇನ್ನು ಪ್ರಧಾನಿ ಮೋದಿ ಸರ್ಕಾರದಲ್ಲಿ ಹಸಿವಿನ ಪ್ರಮಾಣ ಹೆಚ್ಚಿರುವುದಕ್ಕೆ ಹಾಗೂ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತದ ಸ್ಥಾನ 102ಕ್ಕೆ ಏರಿಕೆಯಾಗಿದ್ದರ ಕುರಿತು ವಿಪಕ್ಷ ನಾಯಕರು ವ್ಯಂಗ್ಯವಾಡಿದ್ದಾರೆ. ಮೋದಿ ಆಡಳಿತದಲ್ಲಿ ಮಕ್ಕಳ ಸಾವು ಮತ್ತು ಹಸಿವು,. ಅಪೌಷ್ಠಿಕತೆಯ ಮಟ್ಟ ಹೆಚ್ಚಿದ್ದು, ಪ್ರಪಂಚದ ಬಹುಪಾಲು ಮಂದಿ ಈಗ ಭಾರತದಲ್ಲಿ ನೆಲೆಸಿದ್ದಾರೆ ಎಂದು ಕೇರಳದ ವಿತ್ತ ಸಚಿವ ಥಾಮಸ್ ಐಸಾಕ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿ, ವಿರೋಧಪಕ್ಷ ನಾಯಕ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡಿ, ಭಾರತದಲ್ಲಿ ಹಸಿವಿನ ಪ್ರಮಾಣ ಗಂಭೀರವಾಗಿದ್ದು, 102ನೇ ಸ್ಥಾನಕ್ಕೆ ಏರಿಕೆಯಾಗಿದೆ. ಆದರೆ ಇನ್ನೂ ಕೆಲವು ಮಂದಿ ಅಚ್ಛೇ ದಿನ್ ಆಯೇಗಾ (ಒಳ್ಳೆಯ ದಿನಗಳು ಬರುತ್ತವೆ) ಎಂದು ನಂಬಿದ್ದಾರೆ. ಆ ಅಚ್ಛೇ ದಿನ್ ಯಾವಾಗ ಬರುತ್ತವೆ..? ಎಲ್ಲರೂ ಹಸಿವಿನಿಂದ ಸಾವನ್ನಪ್ಪಿದ ಮೇಲೆ ಬರುತ್ತದೆಯೇ ಎಂದು ಪ್ರಶ್ನಿಸುವ ಮೂಲಕ ಟೀಕಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...