Homeಮುಖಪುಟಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

ಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

- Advertisement -
- Advertisement -

| ಸುರೇಶ್ ಕಂಜರ್ಪಣೆ |

ಡಬ್ಲ್ಯೂ.ಬಿ. ಯೇಟ್ಸ್ ತನ್ನ ಸುವಿಖ್ಯಾತ ದಿ ಸೆಕೆಂಡ್ ಕಮಿಂಗ್ ಕವನದಲ್ಲಿ ಡೇಗೆಯೊಂದು ಕೇಂದ್ರವೊಂದರ ಸುತ್ತ ವೃತ್ತಾಕಾರವಾಗಿ ವಿಸ್ತರಿಸುತ್ತಾ ಹಾರುವ ಚಿತ್ರ ಕೊಡುತ್ತಾನೆ. ಡೇಗೆ ಒಂದು ಕೇಂದ್ರದ ಸುತ್ತ ಸುತ್ತುತ್ತಾ ವಿಸ್ತರಿಸುತ್ತಾ ಹಾರುತ್ತದೆ. ಆದರೆ ಯಾವುದೋ ಒಂದು ಕ್ಷಣ ವೃತ್ತದ ಹೊರ ಅಂಚಿನ ಬಿಂದುವನ್ನೇ ಕೇಂದ್ರವೆಂದು ಬಗೆದು, ಈಗ ಹೊಸ ಕೇಂದ್ರದ ಸುತ್ತ ತಿರುಗುತ್ತದೆ. ಅರ್ಥಾತ್ ಮೂಲ ಕೇಂದ್ರದಿಂದ ಬಲು ದೂರ ಸಾಗಿರುತ್ತದೆ. ಈ ಸುತ್ತುವ ಕ್ರಿಯೆಯಲ್ಲಿ ಅದು ಆಗಾಗ್ಗೆ ಹಳೇ ವೃತ್ತದ ಭಾಗವನ್ನು ದಾಟುವ ಕಾರಣ ಒಂದು ಗೊಂದಲ ಇರುತ್ತದೆ. ಕೇಂದ್ರಕ್ಕೆ ಹಿಡಿಯುವ ಶಕ್ತಿ ಇಲ್ಲ. ಅದರ ಗುರುತ್ವಾಕರ್ಷಣೆ ಶಕ್ತಿಯಿಂದ ವಸ್ತುಗಳು ಕಳಚಿ ಚೆಲ್ಲಾಪಿಲ್ಲಿ ಉದುರುತ್ತವೆ ಎಂದು ಯೇಟ್ಸ್ ವಿಷಾದದಲ್ಲಿ ಹೇಳುತ್ತಾನೆ . ಅಚಿಬೆ ತನ್ನ ಜಗತ್ಪ್ರಸಿದ್ಧ ಕಾಂದಂಬರಿಗೆ ಇದೇ ಹೆಸರು ಕೊಡುತ್ತಾನೆ. (“ಥಿಂಗ್ಸ್ ಫಾಲ್ ಅಪಾರ್ಟ್”).
ಭಾಜಪದಲ್ಲಿ ನಿರ್ಗಮಿಸಿದ ನಾಯಕರನ್ನು ಕಂಡಾಗ ಇದು ನೆನಪಾಯಿತು. ಅನಂತಕುಮಾರ್ ಮತ್ತು ಪರಿಕರ್ ಭೌತಿಕವಾಗಿ ನಿರ್ಗಮಿಸಿದರೆ, ಅನಾದಿ ಕಾಲದ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಡಿ ಸಾಂಕೇತಿಕವಾಗಿ ನಿರ್ಗಮಿಸಿದ್ದಾರೆ.
ಹಿರಿಯಬ್ಬರು, ಮತ್ತು ಅವರ ಶಿಷ್ಯರಿಬ್ಬರು ಭಾಜಪದ ಕಳಚಿದ ಕೊಂಡಿಯ ಸಂಕೇತವಾಗಿದ್ದಾರೆ. ಸಾಂವಿಧಾನಿಕ ಭಾಷೆ, ಶಿಷ್ಟಾಚಾರ, ತಮಗೊಂದು ಸೈದ್ಧಾಂತಿಕ ಭೂಮಿಕೆ ಇದೆ ಎಂಬಂಥಾ ವಾದ- ಇವೆಲ್ಲಾ ಇವರಲ್ಲಿತ್ತು. ಮುರಳಿಮನೋಹರ ಜೋಷಿ ಭೌತಶಾಸ್ತ್ರದ ಪ್ರಾಧ್ಯಾಪಕ. ಕಲಿತ ಶಾಸ್ತ್ರದ ವೈಜ್ಞಾನಿಕತೆ ಅಂತರ್ಗತವಾಗಲಿಲ್ಲ ಎಂಬುದರ ಪುರಾವೆಯಾಗಿ ಉಳಿದರು. ಕಾಕತಾಳೀಯವಾಗಿ ಪರಿಕರ್ ಕೂಡಾ ಐಐಟಿಯಲ್ಲಿ ಓದಿಯೂ ಹಿಂದುತ್ವವನ್ನು ಅಪ್ಪಿಕೊಂಡರು. ಆಧುನಿಕ ಸಮಾಜಶಾಸ್ತ್ರೀಯ ವಿವರಗಳು ಅವರೊಳಗೆ ಇಳಿಯಲಿಲ್ಲ. ಇದು ಕಾಕತಾಳೀಯ ಅಲ್ಲ. ಆದರೆ ನಮ್ಮ ಸಂವಿಧಾನದ ಆಶಯಗಳು ಎಷ್ಟು ಘನವಾಗಿತ್ತೆಂದರೆ ಇವರಿಗೆ ಅದನ್ನು ಗೌರವಿಸದೇ ಔಪಚಾರಿಕ ಮನ್ನಣೆ ಸಾಧ್ಯವಿಲ್ಲ ಎಂಬ ಪ್ರಜ್ಞೆ ಇತ್ತು.
ಈಗ ಹೊಸ ಕೇಂದ್ರದ ಸುತ್ತ ಡೇಗೆ ಸುತ್ತತೊಡಗಿದೆ. ಕೇಂದ್ರ ಹಳೆಯದೇ ಎಂದು ಅದು ನಂಬಿಸಲು ನೋಡುತ್ತಿದೆ.ಮೋದಿ ಮತ್ತು ಶಾ ಜೋಡಿ ಭಾಜಪವನ್ನು ದೇಶದ ಸಾಂವಿಧಾನಿಕ ನೈತಿಕ ಕೇಂದ್ರದ ಸೆಳವಿಂದ ಬಲು ದೂರ ಒಯ್ಯುತ್ತಿದ್ದಾರೆ. ವಿಸ್ತಾರಗೊಳ್ಳುವ ಭ್ರಮಾತ್ಮಕ ಚಲನೆಯಲ್ಲಿ ಇದಕ್ಕೆ ಹಿಡಿದಿಟ್ಟುಕೊಳ್ಳುವ ಗುರುತ್ವ ಕೇಂದ್ರವೂ ಇಲ್ಲದೇ, ಕ್ರಮೇಣ ಇದೊಂದು ಅರಾಜಕ ಬಿಡಿಭಾಗಗಳ ಮೂಟೆಯಾಗಬಲ್ಲುದು.
ಒಂದಷ್ಟು ಜನ ಮೋದಿ Generationನ ನಾಯಕರ ಮಾತು ಕೇಳಿದರೆ ಅವರ್ಯಾರಿಗೂ ಈ ದೇಶದ ವೈವಿಧ್ಯತೆ, ಸಮಸ್ಯೆಗಳ ಸಂಕೀರ್ಣತೆ, ಸಾಮಾಜಿಕ ಅಸಮತೋಲನದ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ. ಬಿಡಿಬಿಡಿಯಾಗಿ ಗೆದ್ದು ಅಧಿಕಾರ ಬಲಪಡಿಸುವ ವಾಂಛೆಯಿಂದಾಚೆ ಇವರ ದೃಷ್ಟಿ ಚಾಚಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್ಸಿನ ಕಥೆಯೂ ಇದೇ. ಆದರೆ ಅದು ಹೆಚ್ಚು ನಿರ್ವೀರ್ಯ ಚಲನೆಯಲ್ಲಿ ಸುತ್ತುತ್ತಿದೆ. ಅದರ ಮೂಲ ಕೇಂದ್ರವಾದ ಸೆಕ್ಯುಲರ್ – ಸಮಪಾಲಿನ ಸಮಾಜದ ಸುತ್ತ ಸುತ್ತುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಅದರ ಹೊಸ ಕೇಂದ್ರ ಮೂಲ ಕೇಂದ್ರದ ಅಂಚಿನ ಕ್ಷುಲ್ಲಕ ಬಿಂದು ಅಷ್ಟೇ.
ಈ ಕೇಂದ್ರದ ಸುತ್ತ ಅದು ಈಗಾಗಲೇ ಪಡಪೋಶಿಯಾದ ನುಡಿಕಟ್ಟು, ಹೇಳಿಕೆಗಳನ್ನು ಮುಂದಿಡುತ್ತಾ ಭಾಜಪಕ್ಕೆ ಪರ್ಯಾಯ ಎಂಬಂತೆ ನಟಿಸುತ್ತಿದೆ. ಭಾಜಪವನ್ನು ತಡವಿ ನಿಲ್ಲಿಸುವ ಶಕ್ತಿಯೇ ಅದಕ್ಕಿಲ್ಲ. ಅದಕ್ಕೆ ಕಾರಣ ಭಾಜಪ ಅಲ್ಲ.
ಕ್ರಿಯೆಯ ಮೂಲಕ ಶಕ್ತಿ ತುಂಬಿದರಷ್ಟೇ ತನ್ನ ನುಡಿಕಟ್ಟಗಳು, ವಾಕ್ಕುಗಳಿಗೆ ಪ್ರಭೆ ಎಂಬುದನ್ನು ಕಾಂಗ್ರೆಸ್ ಮರೆತಿದೆ. ಸ್ಥಳೀಯವಾಗಿ ಬಡ ಜಾತಿಗಳು, ಪ್ರದೇಶಗಳು ತನ್ನಿಂದ ಯಾಕೆ ದೂರವಾಗಿವೆ ಎಂಬುದು ಅದಕ್ಕೆ ಅರ್ಥವೇ ಆಗಿಲ್ಲ. ಬದಲಾದ ಕಾಲ ಸಂದರ್ಭದ ಹೊಸ ತಲೆಮಾರಿಗೆ ಹೊಸ ಮಾಹಿತಿ ಮೂಲಗಳಿಂದ ದೊರಕುವ ವಿವರಗಳು ಏನೆಂದು ಅದಕ್ಕೆ ಅರ್ಥವಾಗಿಲ್ಲ.
ಚುನಾವಣಾ ಗೆಲುವೊಂದೇ ಕಾಂಗ್ರೆಸ್ಸನ್ನೂ ಮಬ್ಬುಗೊಳಿಸಿದೆ. ಒಂದರೆ ಕ್ಷಣ ನಿಂತು, ಹೌದಲ್ಲಾ ಭ್ರಷ್ಟಾಚಾರದ ಬಗ್ಗೆ ಜನಕ್ಕೆ ಹೇವರಿಕೆ ಇದೆ ಎಂದು ಕಾಂಗ್ರೆಸ್ಸಿಗೆ ಅನ್ನಿಸಿದ್ದರೆ ಕಾರ್ತಿಯಂಥಾ ಕ್ಯಾರೆಕ್ಟರ್‍ಗೆ ಸೀಟು ಕೊಡುತ್ತಿರಲಿಲ್ಲ. ಮೋದಿಯ ಒರಟು ಶಕ್ತಿ ಪ್ರದರ್ಶನದ ವಿರುದ್ಧ ಮೊದಲು ದನಿ ಎತ್ತಿದ ಕನ್ನಯ್ಯನನ್ನು ದೂರ ಇಡುತ್ತಿರಲಿಲ್ಲ.

ಮಾಯಾ ಬಜಾರ್ ಸಿನೆಮಾದಲ್ಲಿ ಕನ್ನಡಿ ದೃಶ್ಯವೊಂದಿದೆ. ಮಾಯಾ ಕನ್ನಡಿ ಅದು. ಇಲ್ಲಿ ಇಣುಕಿದಾಗ ಕೃಷ್ಣನಿಗೆ ಶಕುನಿ ಕಾಣಿಸುತ್ತಾನೆ. ಅರ್ಥಾತ್, ಕೃಷ್ಣ ತಾನು ಜಗದೋದ್ಧಾರಕ ಎಂದುಕೊಂಡು ಕನ್ನಡಿ ನೋಡಿದರೆ ಕಾಣಿಸುವುದು ಷಡ್ಯಂತ್ರ ನಿಪುಣ ಶಕುನಿ. ಅಂದರೆ ಲೋಕೋದ್ಧಾರದ ಮಾರಲ್ ಫೈಬರ್ ಮಾಸಿ ಯುದ್ಧ ಕಾಲಕ್ಕೆ ಷಡ್ಯಂತ್ರದ ಬುದ್ಧಿಯಷ್ಟೇ ಉಳಿದಿರುವ ಕೃಷ್ಣ.
ಮತ್ತೆ ಮೋದಿಗೆ ಮರಳುವುದಾದರೆ, ತಾನೊಬ್ಬ ದೇಶೋದ್ಧಾರಕ ಎಂದು ಭಾವಿಸಿ ಮೋದಿ ಕನ್ನಡಿ ನೋಡಿದರೆ ಅಲ್ಲಿ ಕುಯುಕ್ತಿಯ ಷಡ್ಯಂತ್ರದ ದುಷ್ಟ ಮಾತ್ರಾ ಕಾಣಿಸುತ್ತಾನೆ.
ಕಾಂಗ್ರೆಸ್ಸಿಗೆ ಈ ದುಷ್ಟತನವೂ ಇಲ್ಲ. ಅದೀಗ ಹೊಟ್ಟೆ ಹೊರೆವ ಭೀತ ಹೆಜ್ಜೆಯ ಕತ್ತೆ ಕಿರುಬನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...

ಮಧ್ಯಪ್ರಾಚ್ಯ ಉದ್ವಿಗ್ನತೆ: ಪಶ್ಚಿಮ ಏಷ್ಯಾದಲ್ಲಿ ಸಿಲುಕಿದ್ದ ಮಹಾರಾಷ್ಟ್ರದ 164 ಪ್ರವಾಸಿಗರು ಮನೆಗೆ ಮರಳಿದ್ದಾರೆ: ಶಿವಸೇನೆ

ಮುಂಬೈ: ಅಮೆರಿಕ-ಇಸ್ರೇಲ್-ಇರಾನ್ ಸಂಘರ್ಷದಿಂದಾಗಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಸಿಲುಕಿಕೊಂಡಿದ್ದ ಮಹಾರಾಷ್ಟ್ರದ ಒಟ್ಟು 164 ಪ್ರವಾಸಿಗರು ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ವ್ಯವಸ್ಥೆ ಮಾಡಿದ ಎರಡು ವಿಮಾನಗಳಲ್ಲಿ ಮನೆಗೆ ಮರಳಿದ್ದಾರೆ ಎಂದು ಶಿವಸೇನಾ ಪದಾಧಿಕಾರಿಯೊಬ್ಬರು ಬುಧವಾರ...

‘ಇದು ಟ್ರಂಪ್ ವಾಗ್ದಾನ ಮಾಡಿದ ರಕ್ಷಣೆ’: 165 ಮಕ್ಕಳ ಸಾಮೂಹಿಕ ಸಮಾಧಿಯ ಫೋಟೋ ಹಂಚಿಕೊಂಡ ಇರಾನ್; ಮರುಗಿದ ಮಾನವ ಜಗತ್ತು

ದಕ್ಷಿಣ ಇರಾನ್‌ನ ಮಿನಾಬ್ ನಗರದ ಬಾಲಕಿಯರ ಶಾಲೆಯೊಂದರ ಮೇಲೆ ಶನಿವಾರ (ಫೆ.28) ಅಮೆರಿಕ-ಇಸ್ರೇಲ್ ನಡೆಸಿದ ಜಂಟಿ ದಾಳಿಯಲ್ಲಿ ಸಾವನ್ನಪ್ಪಿದ 165 ವಿದ್ಯಾರ್ಥಿನಿಯರು ಮತ್ತು ಸಿಬ್ಬಂದಿಯ ಬೃಹತ್ ಅಂತಿಮ ಸಂಸ್ಕಾರ ಮೆರವಣಿಗೆ ಮಂಗಳವಾರ (ಮಾ.3)...

ಖಮೇನಿ ಪುತ್ರ ಮೊಜ್ತಬಾ ಅವರನ್ನು ಸರ್ವೋಚ್ಚ ನಾಯಕನನ್ನಾಗಿ ಹೆಸರಿಸಿದ ಇರಾನ್ ತಜ್ಞರ ಸಭೆ?

ದಿವಂಗತ ಅಯತೊಲ್ಲಾ ಅಲಿ ಖಮೇನಿಯವರ ಪುತ್ರ 56 ವರ್ಷದ ಮೊಜ್ತಬಾ ಖಮೇನಿ ಅವರನ್ನು ತಜ್ಞರ ಸಭೆಯು ಇರಾನ್‌ನ ಹೊಸ ಸರ್ವೋಚ್ಚ ನಾಯಕನನ್ನಾಗಿ ಆಯ್ಕೆ ಮಾಡಿದೆ ಎಂದು ಬಲ್ಲ ಮೂಲಗಳನ್ನು ಉಲ್ಲೇಖಿಸಿ ಇರಾನ್ ಅಂತಾರಾಷ್ಟ್ರೀಯ...

ಲೋಕಸಭೆ ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರ ಆಯ್ಕೆ; ರವಿಶಂಕರ್ ಪ್ರಸಾದ್ ನೇತೃತ್ವ

ಹದಿನೆಂಟನೇ ಲೋಕಸಭೆ ರಚನೆಯಾಗಿ ಸುಮಾರು ಎರಡು ವರ್ಷಗಳ ನಂತರ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ (ಮಾ.3) ಹಕ್ಕುಬಾಧ್ಯತಾ ಸಮಿತಿಗೆ 15 ಸದಸ್ಯರನ್ನು ನಾಮನಿರ್ದೇಶನ ಮಾಡಿದ್ದಾರೆ. ಸದನ ಮತ್ತು ಅದರ ಸದಸ್ಯರ ಹಕ್ಕುಚ್ಯುತಿಗೆ...