Homeಮುಖಪುಟಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

ಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

- Advertisement -
- Advertisement -

| ಸುರೇಶ್ ಕಂಜರ್ಪಣೆ |

ಡಬ್ಲ್ಯೂ.ಬಿ. ಯೇಟ್ಸ್ ತನ್ನ ಸುವಿಖ್ಯಾತ ದಿ ಸೆಕೆಂಡ್ ಕಮಿಂಗ್ ಕವನದಲ್ಲಿ ಡೇಗೆಯೊಂದು ಕೇಂದ್ರವೊಂದರ ಸುತ್ತ ವೃತ್ತಾಕಾರವಾಗಿ ವಿಸ್ತರಿಸುತ್ತಾ ಹಾರುವ ಚಿತ್ರ ಕೊಡುತ್ತಾನೆ. ಡೇಗೆ ಒಂದು ಕೇಂದ್ರದ ಸುತ್ತ ಸುತ್ತುತ್ತಾ ವಿಸ್ತರಿಸುತ್ತಾ ಹಾರುತ್ತದೆ. ಆದರೆ ಯಾವುದೋ ಒಂದು ಕ್ಷಣ ವೃತ್ತದ ಹೊರ ಅಂಚಿನ ಬಿಂದುವನ್ನೇ ಕೇಂದ್ರವೆಂದು ಬಗೆದು, ಈಗ ಹೊಸ ಕೇಂದ್ರದ ಸುತ್ತ ತಿರುಗುತ್ತದೆ. ಅರ್ಥಾತ್ ಮೂಲ ಕೇಂದ್ರದಿಂದ ಬಲು ದೂರ ಸಾಗಿರುತ್ತದೆ. ಈ ಸುತ್ತುವ ಕ್ರಿಯೆಯಲ್ಲಿ ಅದು ಆಗಾಗ್ಗೆ ಹಳೇ ವೃತ್ತದ ಭಾಗವನ್ನು ದಾಟುವ ಕಾರಣ ಒಂದು ಗೊಂದಲ ಇರುತ್ತದೆ. ಕೇಂದ್ರಕ್ಕೆ ಹಿಡಿಯುವ ಶಕ್ತಿ ಇಲ್ಲ. ಅದರ ಗುರುತ್ವಾಕರ್ಷಣೆ ಶಕ್ತಿಯಿಂದ ವಸ್ತುಗಳು ಕಳಚಿ ಚೆಲ್ಲಾಪಿಲ್ಲಿ ಉದುರುತ್ತವೆ ಎಂದು ಯೇಟ್ಸ್ ವಿಷಾದದಲ್ಲಿ ಹೇಳುತ್ತಾನೆ . ಅಚಿಬೆ ತನ್ನ ಜಗತ್ಪ್ರಸಿದ್ಧ ಕಾಂದಂಬರಿಗೆ ಇದೇ ಹೆಸರು ಕೊಡುತ್ತಾನೆ. (“ಥಿಂಗ್ಸ್ ಫಾಲ್ ಅಪಾರ್ಟ್”).
ಭಾಜಪದಲ್ಲಿ ನಿರ್ಗಮಿಸಿದ ನಾಯಕರನ್ನು ಕಂಡಾಗ ಇದು ನೆನಪಾಯಿತು. ಅನಂತಕುಮಾರ್ ಮತ್ತು ಪರಿಕರ್ ಭೌತಿಕವಾಗಿ ನಿರ್ಗಮಿಸಿದರೆ, ಅನಾದಿ ಕಾಲದ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಡಿ ಸಾಂಕೇತಿಕವಾಗಿ ನಿರ್ಗಮಿಸಿದ್ದಾರೆ.
ಹಿರಿಯಬ್ಬರು, ಮತ್ತು ಅವರ ಶಿಷ್ಯರಿಬ್ಬರು ಭಾಜಪದ ಕಳಚಿದ ಕೊಂಡಿಯ ಸಂಕೇತವಾಗಿದ್ದಾರೆ. ಸಾಂವಿಧಾನಿಕ ಭಾಷೆ, ಶಿಷ್ಟಾಚಾರ, ತಮಗೊಂದು ಸೈದ್ಧಾಂತಿಕ ಭೂಮಿಕೆ ಇದೆ ಎಂಬಂಥಾ ವಾದ- ಇವೆಲ್ಲಾ ಇವರಲ್ಲಿತ್ತು. ಮುರಳಿಮನೋಹರ ಜೋಷಿ ಭೌತಶಾಸ್ತ್ರದ ಪ್ರಾಧ್ಯಾಪಕ. ಕಲಿತ ಶಾಸ್ತ್ರದ ವೈಜ್ಞಾನಿಕತೆ ಅಂತರ್ಗತವಾಗಲಿಲ್ಲ ಎಂಬುದರ ಪುರಾವೆಯಾಗಿ ಉಳಿದರು. ಕಾಕತಾಳೀಯವಾಗಿ ಪರಿಕರ್ ಕೂಡಾ ಐಐಟಿಯಲ್ಲಿ ಓದಿಯೂ ಹಿಂದುತ್ವವನ್ನು ಅಪ್ಪಿಕೊಂಡರು. ಆಧುನಿಕ ಸಮಾಜಶಾಸ್ತ್ರೀಯ ವಿವರಗಳು ಅವರೊಳಗೆ ಇಳಿಯಲಿಲ್ಲ. ಇದು ಕಾಕತಾಳೀಯ ಅಲ್ಲ. ಆದರೆ ನಮ್ಮ ಸಂವಿಧಾನದ ಆಶಯಗಳು ಎಷ್ಟು ಘನವಾಗಿತ್ತೆಂದರೆ ಇವರಿಗೆ ಅದನ್ನು ಗೌರವಿಸದೇ ಔಪಚಾರಿಕ ಮನ್ನಣೆ ಸಾಧ್ಯವಿಲ್ಲ ಎಂಬ ಪ್ರಜ್ಞೆ ಇತ್ತು.
ಈಗ ಹೊಸ ಕೇಂದ್ರದ ಸುತ್ತ ಡೇಗೆ ಸುತ್ತತೊಡಗಿದೆ. ಕೇಂದ್ರ ಹಳೆಯದೇ ಎಂದು ಅದು ನಂಬಿಸಲು ನೋಡುತ್ತಿದೆ.ಮೋದಿ ಮತ್ತು ಶಾ ಜೋಡಿ ಭಾಜಪವನ್ನು ದೇಶದ ಸಾಂವಿಧಾನಿಕ ನೈತಿಕ ಕೇಂದ್ರದ ಸೆಳವಿಂದ ಬಲು ದೂರ ಒಯ್ಯುತ್ತಿದ್ದಾರೆ. ವಿಸ್ತಾರಗೊಳ್ಳುವ ಭ್ರಮಾತ್ಮಕ ಚಲನೆಯಲ್ಲಿ ಇದಕ್ಕೆ ಹಿಡಿದಿಟ್ಟುಕೊಳ್ಳುವ ಗುರುತ್ವ ಕೇಂದ್ರವೂ ಇಲ್ಲದೇ, ಕ್ರಮೇಣ ಇದೊಂದು ಅರಾಜಕ ಬಿಡಿಭಾಗಗಳ ಮೂಟೆಯಾಗಬಲ್ಲುದು.
ಒಂದಷ್ಟು ಜನ ಮೋದಿ Generationನ ನಾಯಕರ ಮಾತು ಕೇಳಿದರೆ ಅವರ್ಯಾರಿಗೂ ಈ ದೇಶದ ವೈವಿಧ್ಯತೆ, ಸಮಸ್ಯೆಗಳ ಸಂಕೀರ್ಣತೆ, ಸಾಮಾಜಿಕ ಅಸಮತೋಲನದ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ. ಬಿಡಿಬಿಡಿಯಾಗಿ ಗೆದ್ದು ಅಧಿಕಾರ ಬಲಪಡಿಸುವ ವಾಂಛೆಯಿಂದಾಚೆ ಇವರ ದೃಷ್ಟಿ ಚಾಚಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್ಸಿನ ಕಥೆಯೂ ಇದೇ. ಆದರೆ ಅದು ಹೆಚ್ಚು ನಿರ್ವೀರ್ಯ ಚಲನೆಯಲ್ಲಿ ಸುತ್ತುತ್ತಿದೆ. ಅದರ ಮೂಲ ಕೇಂದ್ರವಾದ ಸೆಕ್ಯುಲರ್ – ಸಮಪಾಲಿನ ಸಮಾಜದ ಸುತ್ತ ಸುತ್ತುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಅದರ ಹೊಸ ಕೇಂದ್ರ ಮೂಲ ಕೇಂದ್ರದ ಅಂಚಿನ ಕ್ಷುಲ್ಲಕ ಬಿಂದು ಅಷ್ಟೇ.
ಈ ಕೇಂದ್ರದ ಸುತ್ತ ಅದು ಈಗಾಗಲೇ ಪಡಪೋಶಿಯಾದ ನುಡಿಕಟ್ಟು, ಹೇಳಿಕೆಗಳನ್ನು ಮುಂದಿಡುತ್ತಾ ಭಾಜಪಕ್ಕೆ ಪರ್ಯಾಯ ಎಂಬಂತೆ ನಟಿಸುತ್ತಿದೆ. ಭಾಜಪವನ್ನು ತಡವಿ ನಿಲ್ಲಿಸುವ ಶಕ್ತಿಯೇ ಅದಕ್ಕಿಲ್ಲ. ಅದಕ್ಕೆ ಕಾರಣ ಭಾಜಪ ಅಲ್ಲ.
ಕ್ರಿಯೆಯ ಮೂಲಕ ಶಕ್ತಿ ತುಂಬಿದರಷ್ಟೇ ತನ್ನ ನುಡಿಕಟ್ಟಗಳು, ವಾಕ್ಕುಗಳಿಗೆ ಪ್ರಭೆ ಎಂಬುದನ್ನು ಕಾಂಗ್ರೆಸ್ ಮರೆತಿದೆ. ಸ್ಥಳೀಯವಾಗಿ ಬಡ ಜಾತಿಗಳು, ಪ್ರದೇಶಗಳು ತನ್ನಿಂದ ಯಾಕೆ ದೂರವಾಗಿವೆ ಎಂಬುದು ಅದಕ್ಕೆ ಅರ್ಥವೇ ಆಗಿಲ್ಲ. ಬದಲಾದ ಕಾಲ ಸಂದರ್ಭದ ಹೊಸ ತಲೆಮಾರಿಗೆ ಹೊಸ ಮಾಹಿತಿ ಮೂಲಗಳಿಂದ ದೊರಕುವ ವಿವರಗಳು ಏನೆಂದು ಅದಕ್ಕೆ ಅರ್ಥವಾಗಿಲ್ಲ.
ಚುನಾವಣಾ ಗೆಲುವೊಂದೇ ಕಾಂಗ್ರೆಸ್ಸನ್ನೂ ಮಬ್ಬುಗೊಳಿಸಿದೆ. ಒಂದರೆ ಕ್ಷಣ ನಿಂತು, ಹೌದಲ್ಲಾ ಭ್ರಷ್ಟಾಚಾರದ ಬಗ್ಗೆ ಜನಕ್ಕೆ ಹೇವರಿಕೆ ಇದೆ ಎಂದು ಕಾಂಗ್ರೆಸ್ಸಿಗೆ ಅನ್ನಿಸಿದ್ದರೆ ಕಾರ್ತಿಯಂಥಾ ಕ್ಯಾರೆಕ್ಟರ್‍ಗೆ ಸೀಟು ಕೊಡುತ್ತಿರಲಿಲ್ಲ. ಮೋದಿಯ ಒರಟು ಶಕ್ತಿ ಪ್ರದರ್ಶನದ ವಿರುದ್ಧ ಮೊದಲು ದನಿ ಎತ್ತಿದ ಕನ್ನಯ್ಯನನ್ನು ದೂರ ಇಡುತ್ತಿರಲಿಲ್ಲ.

ಮಾಯಾ ಬಜಾರ್ ಸಿನೆಮಾದಲ್ಲಿ ಕನ್ನಡಿ ದೃಶ್ಯವೊಂದಿದೆ. ಮಾಯಾ ಕನ್ನಡಿ ಅದು. ಇಲ್ಲಿ ಇಣುಕಿದಾಗ ಕೃಷ್ಣನಿಗೆ ಶಕುನಿ ಕಾಣಿಸುತ್ತಾನೆ. ಅರ್ಥಾತ್, ಕೃಷ್ಣ ತಾನು ಜಗದೋದ್ಧಾರಕ ಎಂದುಕೊಂಡು ಕನ್ನಡಿ ನೋಡಿದರೆ ಕಾಣಿಸುವುದು ಷಡ್ಯಂತ್ರ ನಿಪುಣ ಶಕುನಿ. ಅಂದರೆ ಲೋಕೋದ್ಧಾರದ ಮಾರಲ್ ಫೈಬರ್ ಮಾಸಿ ಯುದ್ಧ ಕಾಲಕ್ಕೆ ಷಡ್ಯಂತ್ರದ ಬುದ್ಧಿಯಷ್ಟೇ ಉಳಿದಿರುವ ಕೃಷ್ಣ.
ಮತ್ತೆ ಮೋದಿಗೆ ಮರಳುವುದಾದರೆ, ತಾನೊಬ್ಬ ದೇಶೋದ್ಧಾರಕ ಎಂದು ಭಾವಿಸಿ ಮೋದಿ ಕನ್ನಡಿ ನೋಡಿದರೆ ಅಲ್ಲಿ ಕುಯುಕ್ತಿಯ ಷಡ್ಯಂತ್ರದ ದುಷ್ಟ ಮಾತ್ರಾ ಕಾಣಿಸುತ್ತಾನೆ.
ಕಾಂಗ್ರೆಸ್ಸಿಗೆ ಈ ದುಷ್ಟತನವೂ ಇಲ್ಲ. ಅದೀಗ ಹೊಟ್ಟೆ ಹೊರೆವ ಭೀತ ಹೆಜ್ಜೆಯ ಕತ್ತೆ ಕಿರುಬನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...

ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರನ್ನು ವಾಪಸ್ ಕರೆತಂದ ಕೇಂದ್ರ ಸರ್ಕಾರ

ವರ್ಷದ ಹಿಂದೆ, ಅಂದರೆ 2025ರ ಜೂನ್ ತಿಂಗಳಲ್ಲಿ ಬಾಂಗ್ಲಾದೇಶದ ಗಡಿಯಾಚೆಗೆ ತಳ್ಳಿದ್ದ ನಾಲ್ವರು ಭಾರತೀಯರು ಬುಧವಾರ (ಜು.8) ಪಶ್ಚಿಮ ಬಂಗಾಳದ ಬೀರ್‌ಭೂಮ್ ಜಿಲ್ಲೆಯ ತಮ್ಮ ಗ್ರಾಮಕ್ಕೆ ಹಿಂದಿರುಗಿದ್ದಾರೆ ಎಂದು ವರದಿಯಾಗಿದೆ. ಸುನಾಲಿ...

ಬೆಂಗಳೂರಿನ ಜ್ವಲಂತ ನಾಗರಿಕ ಸಮಸ್ಯೆಗಳ ವಿರುದ್ಧ ಜುಲೈ 12ಕ್ಕೆ ಬೃಹತ್ ‘ಜನಾಕ್ರೋಶ ಸಮಾವೇಶ

ಸಿಲಿಕಾನ್ ಸಿಟಿ ಬೆಂಗಳೂರಿನ ನಾಗರಿಕರು ಪ್ರತಿನಿತ್ಯ ಎದುರಿಸುತ್ತಿರುವ ನರಕಸದೃಶ ಸಮಸ್ಯೆಗಳ ವಿರುದ್ಧ ಮತ್ತು ಆಡಳಿತ ವ್ಯವಸ್ಥೆಯ ಭ್ರಷ್ಟಾಚಾರವನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್‌ವಾದಿ) ಬೃಹತ್ ‘ಜನಾಕ್ರೋಶ ಸಮಾವೇಶ’ವನ್ನು ಹಮ್ಮಿಕೊಂಡಿದೆ. ಈ ‘ಜನಾಕ್ರೋಶ...

ಭೀಕರ ಪ್ರವಾಹಕ್ಕೆ ಕೊಚ್ಚಿಹೋದ 3 ಸಾವಿರ LPG ಸಿಲಿಂಡರ್

ಮಹಾರಾಷ್ಟ್ರದಲ್ಲಿ ವಾರದಿಂದ ಸುರಿಯುತ್ತಿರುವ ಮಳೆ ಇಡೀ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದ್ದು, ಪ್ರಕೃತಿಯ ವಿಕೋಪದ ನಡುವೆ ರಾಯಗಢ ಜಿಲ್ಲೆಯಿಂದ ಅತ್ಯಂತ ಆಘಾತಕಾರಿ ವಿಡಿಯೋವೊಂದು ವೈರಲ್ ಆಗಿದೆ. ಇಲ್ಲಿನ ಎಚ್‌ಪಿಸಿಎಲ್ (HPCL) ಪಾತಾಳಗಂಗಾ ಎಲ್‌ಪಿಜಿ ಬಾಟ್ಲಿಂಗ್...

ಹೈದರಾಬಾದ್‌| ಪವನ್‌ ಕಲ್ಯಾಣ್‌ ಟೀಕಿಸಿದ ಯೂಟ್ಯೂಬರ್ ರಾವಣ್ ಮೇಲೆ ಯುಎಪಿಎ ಕೇಸ್; ನಿವಾಸದಲ್ಲಿ ಪೊಲೀಸರ ಶೋಧ

ತೆಲುಗು ಯೂಟ್ಯೂಬರ್, ಸಾಮಾಜಿಕ ಕಾರ್ಯಕರ್ತ ರಾವಣ್‌ (ಬಚಲಕೂರಿ ಜೋಸೆಫ್) ಅವರನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆ (ಯುಎಪಿಎ) ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸರು ಬಂಧಿಸಿದ್ದು, ಆಂಧ್ರಪ್ರದೇಶ ಪೊಲೀಸರು ಹೈದರಾಬಾದ್‌ನಲ್ಲಿರುವ ಯೂಟ್ಯೂಬರ್ ರಾವಣ್ ನಿವಾಸದಲ್ಲಿ...

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...