Homeಮುಖಪುಟಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

ಕಾಲದ ಕನ್ನಡಿ.. ದೇಶದ ಪರಿಸ್ಥಿತಿಯ ಒಂದು ಗಂಭೀರ ಅವಲೋಕನ.

- Advertisement -
- Advertisement -

| ಸುರೇಶ್ ಕಂಜರ್ಪಣೆ |

ಡಬ್ಲ್ಯೂ.ಬಿ. ಯೇಟ್ಸ್ ತನ್ನ ಸುವಿಖ್ಯಾತ ದಿ ಸೆಕೆಂಡ್ ಕಮಿಂಗ್ ಕವನದಲ್ಲಿ ಡೇಗೆಯೊಂದು ಕೇಂದ್ರವೊಂದರ ಸುತ್ತ ವೃತ್ತಾಕಾರವಾಗಿ ವಿಸ್ತರಿಸುತ್ತಾ ಹಾರುವ ಚಿತ್ರ ಕೊಡುತ್ತಾನೆ. ಡೇಗೆ ಒಂದು ಕೇಂದ್ರದ ಸುತ್ತ ಸುತ್ತುತ್ತಾ ವಿಸ್ತರಿಸುತ್ತಾ ಹಾರುತ್ತದೆ. ಆದರೆ ಯಾವುದೋ ಒಂದು ಕ್ಷಣ ವೃತ್ತದ ಹೊರ ಅಂಚಿನ ಬಿಂದುವನ್ನೇ ಕೇಂದ್ರವೆಂದು ಬಗೆದು, ಈಗ ಹೊಸ ಕೇಂದ್ರದ ಸುತ್ತ ತಿರುಗುತ್ತದೆ. ಅರ್ಥಾತ್ ಮೂಲ ಕೇಂದ್ರದಿಂದ ಬಲು ದೂರ ಸಾಗಿರುತ್ತದೆ. ಈ ಸುತ್ತುವ ಕ್ರಿಯೆಯಲ್ಲಿ ಅದು ಆಗಾಗ್ಗೆ ಹಳೇ ವೃತ್ತದ ಭಾಗವನ್ನು ದಾಟುವ ಕಾರಣ ಒಂದು ಗೊಂದಲ ಇರುತ್ತದೆ. ಕೇಂದ್ರಕ್ಕೆ ಹಿಡಿಯುವ ಶಕ್ತಿ ಇಲ್ಲ. ಅದರ ಗುರುತ್ವಾಕರ್ಷಣೆ ಶಕ್ತಿಯಿಂದ ವಸ್ತುಗಳು ಕಳಚಿ ಚೆಲ್ಲಾಪಿಲ್ಲಿ ಉದುರುತ್ತವೆ ಎಂದು ಯೇಟ್ಸ್ ವಿಷಾದದಲ್ಲಿ ಹೇಳುತ್ತಾನೆ . ಅಚಿಬೆ ತನ್ನ ಜಗತ್ಪ್ರಸಿದ್ಧ ಕಾಂದಂಬರಿಗೆ ಇದೇ ಹೆಸರು ಕೊಡುತ್ತಾನೆ. (“ಥಿಂಗ್ಸ್ ಫಾಲ್ ಅಪಾರ್ಟ್”).
ಭಾಜಪದಲ್ಲಿ ನಿರ್ಗಮಿಸಿದ ನಾಯಕರನ್ನು ಕಂಡಾಗ ಇದು ನೆನಪಾಯಿತು. ಅನಂತಕುಮಾರ್ ಮತ್ತು ಪರಿಕರ್ ಭೌತಿಕವಾಗಿ ನಿರ್ಗಮಿಸಿದರೆ, ಅನಾದಿ ಕಾಲದ ನಾಯಕರಾದ ಅದ್ವಾನಿ ಮತ್ತು ಮುರಳಿ ಮನೋಹರ ಜೋಡಿ ಸಾಂಕೇತಿಕವಾಗಿ ನಿರ್ಗಮಿಸಿದ್ದಾರೆ.
ಹಿರಿಯಬ್ಬರು, ಮತ್ತು ಅವರ ಶಿಷ್ಯರಿಬ್ಬರು ಭಾಜಪದ ಕಳಚಿದ ಕೊಂಡಿಯ ಸಂಕೇತವಾಗಿದ್ದಾರೆ. ಸಾಂವಿಧಾನಿಕ ಭಾಷೆ, ಶಿಷ್ಟಾಚಾರ, ತಮಗೊಂದು ಸೈದ್ಧಾಂತಿಕ ಭೂಮಿಕೆ ಇದೆ ಎಂಬಂಥಾ ವಾದ- ಇವೆಲ್ಲಾ ಇವರಲ್ಲಿತ್ತು. ಮುರಳಿಮನೋಹರ ಜೋಷಿ ಭೌತಶಾಸ್ತ್ರದ ಪ್ರಾಧ್ಯಾಪಕ. ಕಲಿತ ಶಾಸ್ತ್ರದ ವೈಜ್ಞಾನಿಕತೆ ಅಂತರ್ಗತವಾಗಲಿಲ್ಲ ಎಂಬುದರ ಪುರಾವೆಯಾಗಿ ಉಳಿದರು. ಕಾಕತಾಳೀಯವಾಗಿ ಪರಿಕರ್ ಕೂಡಾ ಐಐಟಿಯಲ್ಲಿ ಓದಿಯೂ ಹಿಂದುತ್ವವನ್ನು ಅಪ್ಪಿಕೊಂಡರು. ಆಧುನಿಕ ಸಮಾಜಶಾಸ್ತ್ರೀಯ ವಿವರಗಳು ಅವರೊಳಗೆ ಇಳಿಯಲಿಲ್ಲ. ಇದು ಕಾಕತಾಳೀಯ ಅಲ್ಲ. ಆದರೆ ನಮ್ಮ ಸಂವಿಧಾನದ ಆಶಯಗಳು ಎಷ್ಟು ಘನವಾಗಿತ್ತೆಂದರೆ ಇವರಿಗೆ ಅದನ್ನು ಗೌರವಿಸದೇ ಔಪಚಾರಿಕ ಮನ್ನಣೆ ಸಾಧ್ಯವಿಲ್ಲ ಎಂಬ ಪ್ರಜ್ಞೆ ಇತ್ತು.
ಈಗ ಹೊಸ ಕೇಂದ್ರದ ಸುತ್ತ ಡೇಗೆ ಸುತ್ತತೊಡಗಿದೆ. ಕೇಂದ್ರ ಹಳೆಯದೇ ಎಂದು ಅದು ನಂಬಿಸಲು ನೋಡುತ್ತಿದೆ.ಮೋದಿ ಮತ್ತು ಶಾ ಜೋಡಿ ಭಾಜಪವನ್ನು ದೇಶದ ಸಾಂವಿಧಾನಿಕ ನೈತಿಕ ಕೇಂದ್ರದ ಸೆಳವಿಂದ ಬಲು ದೂರ ಒಯ್ಯುತ್ತಿದ್ದಾರೆ. ವಿಸ್ತಾರಗೊಳ್ಳುವ ಭ್ರಮಾತ್ಮಕ ಚಲನೆಯಲ್ಲಿ ಇದಕ್ಕೆ ಹಿಡಿದಿಟ್ಟುಕೊಳ್ಳುವ ಗುರುತ್ವ ಕೇಂದ್ರವೂ ಇಲ್ಲದೇ, ಕ್ರಮೇಣ ಇದೊಂದು ಅರಾಜಕ ಬಿಡಿಭಾಗಗಳ ಮೂಟೆಯಾಗಬಲ್ಲುದು.
ಒಂದಷ್ಟು ಜನ ಮೋದಿ Generationನ ನಾಯಕರ ಮಾತು ಕೇಳಿದರೆ ಅವರ್ಯಾರಿಗೂ ಈ ದೇಶದ ವೈವಿಧ್ಯತೆ, ಸಮಸ್ಯೆಗಳ ಸಂಕೀರ್ಣತೆ, ಸಾಮಾಜಿಕ ಅಸಮತೋಲನದ ಬಗ್ಗೆ ಅರಿವಿದ್ದಂತೆ ಕಾಣುತ್ತಿಲ್ಲ. ಬಿಡಿಬಿಡಿಯಾಗಿ ಗೆದ್ದು ಅಧಿಕಾರ ಬಲಪಡಿಸುವ ವಾಂಛೆಯಿಂದಾಚೆ ಇವರ ದೃಷ್ಟಿ ಚಾಚಿದಂತೆ ಕಾಣುತ್ತಿಲ್ಲ.

ಕಾಂಗ್ರೆಸ್ಸಿನ ಕಥೆಯೂ ಇದೇ. ಆದರೆ ಅದು ಹೆಚ್ಚು ನಿರ್ವೀರ್ಯ ಚಲನೆಯಲ್ಲಿ ಸುತ್ತುತ್ತಿದೆ. ಅದರ ಮೂಲ ಕೇಂದ್ರವಾದ ಸೆಕ್ಯುಲರ್ – ಸಮಪಾಲಿನ ಸಮಾಜದ ಸುತ್ತ ಸುತ್ತುತ್ತಿದ್ದೇನೆ ಎಂಬ ಭ್ರಮೆಯಲ್ಲಿ ಕಾಂಗ್ರೆಸ್ ಇದೆ. ಆದರೆ ಅದರ ಹೊಸ ಕೇಂದ್ರ ಮೂಲ ಕೇಂದ್ರದ ಅಂಚಿನ ಕ್ಷುಲ್ಲಕ ಬಿಂದು ಅಷ್ಟೇ.
ಈ ಕೇಂದ್ರದ ಸುತ್ತ ಅದು ಈಗಾಗಲೇ ಪಡಪೋಶಿಯಾದ ನುಡಿಕಟ್ಟು, ಹೇಳಿಕೆಗಳನ್ನು ಮುಂದಿಡುತ್ತಾ ಭಾಜಪಕ್ಕೆ ಪರ್ಯಾಯ ಎಂಬಂತೆ ನಟಿಸುತ್ತಿದೆ. ಭಾಜಪವನ್ನು ತಡವಿ ನಿಲ್ಲಿಸುವ ಶಕ್ತಿಯೇ ಅದಕ್ಕಿಲ್ಲ. ಅದಕ್ಕೆ ಕಾರಣ ಭಾಜಪ ಅಲ್ಲ.
ಕ್ರಿಯೆಯ ಮೂಲಕ ಶಕ್ತಿ ತುಂಬಿದರಷ್ಟೇ ತನ್ನ ನುಡಿಕಟ್ಟಗಳು, ವಾಕ್ಕುಗಳಿಗೆ ಪ್ರಭೆ ಎಂಬುದನ್ನು ಕಾಂಗ್ರೆಸ್ ಮರೆತಿದೆ. ಸ್ಥಳೀಯವಾಗಿ ಬಡ ಜಾತಿಗಳು, ಪ್ರದೇಶಗಳು ತನ್ನಿಂದ ಯಾಕೆ ದೂರವಾಗಿವೆ ಎಂಬುದು ಅದಕ್ಕೆ ಅರ್ಥವೇ ಆಗಿಲ್ಲ. ಬದಲಾದ ಕಾಲ ಸಂದರ್ಭದ ಹೊಸ ತಲೆಮಾರಿಗೆ ಹೊಸ ಮಾಹಿತಿ ಮೂಲಗಳಿಂದ ದೊರಕುವ ವಿವರಗಳು ಏನೆಂದು ಅದಕ್ಕೆ ಅರ್ಥವಾಗಿಲ್ಲ.
ಚುನಾವಣಾ ಗೆಲುವೊಂದೇ ಕಾಂಗ್ರೆಸ್ಸನ್ನೂ ಮಬ್ಬುಗೊಳಿಸಿದೆ. ಒಂದರೆ ಕ್ಷಣ ನಿಂತು, ಹೌದಲ್ಲಾ ಭ್ರಷ್ಟಾಚಾರದ ಬಗ್ಗೆ ಜನಕ್ಕೆ ಹೇವರಿಕೆ ಇದೆ ಎಂದು ಕಾಂಗ್ರೆಸ್ಸಿಗೆ ಅನ್ನಿಸಿದ್ದರೆ ಕಾರ್ತಿಯಂಥಾ ಕ್ಯಾರೆಕ್ಟರ್‍ಗೆ ಸೀಟು ಕೊಡುತ್ತಿರಲಿಲ್ಲ. ಮೋದಿಯ ಒರಟು ಶಕ್ತಿ ಪ್ರದರ್ಶನದ ವಿರುದ್ಧ ಮೊದಲು ದನಿ ಎತ್ತಿದ ಕನ್ನಯ್ಯನನ್ನು ದೂರ ಇಡುತ್ತಿರಲಿಲ್ಲ.

ಮಾಯಾ ಬಜಾರ್ ಸಿನೆಮಾದಲ್ಲಿ ಕನ್ನಡಿ ದೃಶ್ಯವೊಂದಿದೆ. ಮಾಯಾ ಕನ್ನಡಿ ಅದು. ಇಲ್ಲಿ ಇಣುಕಿದಾಗ ಕೃಷ್ಣನಿಗೆ ಶಕುನಿ ಕಾಣಿಸುತ್ತಾನೆ. ಅರ್ಥಾತ್, ಕೃಷ್ಣ ತಾನು ಜಗದೋದ್ಧಾರಕ ಎಂದುಕೊಂಡು ಕನ್ನಡಿ ನೋಡಿದರೆ ಕಾಣಿಸುವುದು ಷಡ್ಯಂತ್ರ ನಿಪುಣ ಶಕುನಿ. ಅಂದರೆ ಲೋಕೋದ್ಧಾರದ ಮಾರಲ್ ಫೈಬರ್ ಮಾಸಿ ಯುದ್ಧ ಕಾಲಕ್ಕೆ ಷಡ್ಯಂತ್ರದ ಬುದ್ಧಿಯಷ್ಟೇ ಉಳಿದಿರುವ ಕೃಷ್ಣ.
ಮತ್ತೆ ಮೋದಿಗೆ ಮರಳುವುದಾದರೆ, ತಾನೊಬ್ಬ ದೇಶೋದ್ಧಾರಕ ಎಂದು ಭಾವಿಸಿ ಮೋದಿ ಕನ್ನಡಿ ನೋಡಿದರೆ ಅಲ್ಲಿ ಕುಯುಕ್ತಿಯ ಷಡ್ಯಂತ್ರದ ದುಷ್ಟ ಮಾತ್ರಾ ಕಾಣಿಸುತ್ತಾನೆ.
ಕಾಂಗ್ರೆಸ್ಸಿಗೆ ಈ ದುಷ್ಟತನವೂ ಇಲ್ಲ. ಅದೀಗ ಹೊಟ್ಟೆ ಹೊರೆವ ಭೀತ ಹೆಜ್ಜೆಯ ಕತ್ತೆ ಕಿರುಬನಂತಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆಯಲ್ಲಿ ಪೆಲೆಟ್ ಗನ್ ಬಳಕೆ ಆರೋಪ; RAF ಮದ್ದುಗುಂಡುಗಳ ದಾಖಲೆ ಕೇಳಿದ ಸುಪ್ರೀಂ ಕೋರ್ಟ್

ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಜಂತರ್ ಮಂತರ್‌ನಲ್ಲಿ ನಿಯೋಜಿಸಲಾಗಿದ್ದ ಕ್ಷಿಪ್ರ ಕಾರ್ಯ ಪಡೆ (RAF) ಯ ಮದ್ದುಗುಂಡುಗಳ ದಾಖಲೆಯನ್ನು ಸಂರಕ್ಷಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ (ಜುಲೈ...

ಕ್ರಿಸ್ತನಿಗಿಂತ ಮೊದಲೇ ಇಲ್ಲಿದ್ದೇವೆ..ನಮಗೆ ಯಾವುದೇ ದಾಖಲೆಗಳು ಬೇಡ : ಎಸ್‌ಐಆರ್ ತಿರಸ್ಕರಿಸಿದ ಜಾರ್ಖಂಡ್‌ನ ಆದಿವಾಸಿಗಳು

ಜಾರ್ಖಂಡ್‌ನ ಖುಂತಿ ಜಿಲ್ಲೆಯ ದಟ್ಟ ಅರಣ್ಯ ಭಾಗದಲ್ಲಿ ವಾಸಿಸುವ ಮುಂಡಾ ಬುಡಕಟ್ಟು ಸಮುದಾಯದ ಒಂದು ವರ್ಗವು ಚುನಾವಣಾ ಆಯೋಗದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯನ್ನು ತೀವ್ರವಾಗಿ ವಿರೋಧಿಸಿದ್ದು, ಆಧುನಿಕ...

NICE ನಲ್ಲಿ ಯೋಜನೆಯಲ್ಲಿ ‘ನೈಸ್’ ಎನ್ನುವಂತಹದ್ದು ಏನೂ ಇಲ್ಲ: ರಾಜ್ಯದ ಅತಿದೊಡ್ಡ ಹಗರಣ ಎಂದ ಹೈಕೋರ್ಟ್

ಬೆಂಗಳೂರು-ಮೈಸೂರು ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್ ಯೋಜನೆ (ಬಿಎಂಐಸಿಪಿ) ಅಥವಾ 'ನೈಸ್' ಯೋಜನೆ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಹಗರಣಗಳಲ್ಲಿ ಒಂದಾಗಿ ಕಾಣಿಸುತ್ತಿದೆ ಎಂದು ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ನಂದಿ ಇನ್‌ಫ್ರಾಸ್ಟ್ರಕ್ಚರ್ ಕಾರಿಡಾರ್...

ಪ್ರತಿಭಟನೆಗೆ ಹೋಗುವ ಮಹಿಳೆಯರು ಗ್ಯಾಂಗ್‌ರೇಪ್‌ ಆನಂದಿಸುತ್ತಾರೆ ಎಂದಿದ್ದ ಟಿ.ಜಿ. ಮೋಹನ್‌ದಾಸ್‌ ವಿರುದ್ಧ ಎಫ್‌ಐಆರ್‌ ದಾಖಲು

ದೆಹಲಿಯ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ, ನನ್ನ ಕೈಯಲ್ಲಿ ಅಧಿಕಾರವಿದ್ದರೆ ಗುಂಡು ಹಾರಿಸುತ್ತಿದ್ದೆ ಎಂದು ಇತ್ತೀಚಿನ ಯೂಟ್ಯೂಬ್ ವೀಡಿಯೊದಲ್ಲಿ ಹೇಳಿಕೆ ನೀಡಿದ್ದ ಹಿಂದುತ್ವವಾದಿ ಚಿಂತಕ ಟಿ.ಜಿ. ಮೋಹನ್‌ದಾಸ್ ವಿರುದ್ಧ ತಿರುವನಂತಪುರಂ ಸಿಟಿ...

ಫ್ರಾನ್ಸ್‌ನಲ್ಲಿ ಕೆಲಸದ ಸಮಯ ಟ್ರ್ಯಾಕಿಂಗ್ ಲೋಪ: ಇನ್ಫೋಸಿಸ್‌ಗೆ ₹1.9 ಕೋಟಿ ದಂಡ: ನಾರಾಯಣಮೂರ್ತಿಯವರ ‘70 ಗಂಟೆ ಶ್ರಮ’ದ ಮಾದರಿ ಟ್ರೋಲ್

ಭಾರತೀಯ ಐಟಿ ರಫ್ತು ಸೇವಾ ರಂಗದ ಬೃಹತ್ ಸಂಸ್ಥೆಯಾದ ಇನ್ಫೋಸಿಸ್‌ಗೆ ಫ್ರಾನ್ಸ್‌ನಲ್ಲಿ ಹಿನ್ನಡೆಯಾಗಿದೆ. ಉದ್ಯೋಗಿಗಳ ಕೆಲಸದ ಸಮಯವನ್ನು ದಾಖಲಿಸುವ ವ್ಯವಸ್ಥೆಯಲ್ಲಿನ ನ್ಯೂನತೆಗಳು ಹಾಗೂ ಸ್ಥಳೀಯ ಕಾರ್ಮಿಕ ನಿಯಮಾವಳಿಗಳ ಪಾಲನೆಯಲ್ಲಿ ಕಂಡುಬಂದ ಲೋಪಗಳ ಹಿನ್ನೆಲೆಯಲ್ಲಿ...

ವೋಟರ್ ಐಡಿ, ಬ್ಯಾಂಕ್ ಪಾಸ್‌ಬುಕ್, ಆಧಾರ್, ಜಮೀನಿನ ಹಕ್ಕು ಪತ್ರ ಇದ್ದ ಮಾತ್ರಕ್ಕೆ ಭಾರತೀಯ ಪ್ರಜೆಯಾಗಲ್ಲ: ಕಲ್ಕತ್ತಾ ಹೈಕೋರ್ಟ್

ಆಧಾರ್ ಕಾರ್ಡ್, ಪಾನ್ ಕಾರ್ಡ್, ಮತದಾರರ ಗುರುತಿನ ಚೀಟಿ, ಬ್ಯಾಂಕ್ ಪಾಸ್‌ಬುಕ್ ಮತ್ತು ಪಿತ್ರಾರ್ಜಿತ ಜಮೀನಿನ ದಾಖಲೆಗಳು ಭಾರತೀಯ ಪೌರತ್ವವನ್ನು ನಿರೂಪಿಸಲು ಅಂತಿಮ ಅಥವಾ ನಿರ್ಣಾಯಕ ಪುರಾವೆಗಳಲ್ಲ ಎಂದು ಕಲ್ಕತ್ತಾ ಹೈಕೋರ್ಟ್ ಮಹತ್ವದ...

‘ನಿಮ್ಮ ಸಮಯ ಬಂದಿದೆ’: ಟೌನ್‌ಶಿಪ್ ಯೋಜನೆ ವಿರುದ್ಧದ ಪ್ರತಿಭಟನೆಗೆ 500 ದಿನ: ‘Gen-Z’ ಯುವಕರ ಬೆಂಬಲ ಕೋರಿದ ಬಿಡದಿ ರೈತರು

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಕೃಷಿ ಭೂಮಿ ಉಳಿವಿಗಾಗಿ ನಡೆಯುತ್ತಿರುವ ರೈತರ ಸುದೀರ್ಘ ಹೋರಾಟವು ಇದೀಗ ಒಂದು ಪ್ರಮುಖ ಘಟ್ಟಕ್ಕೆ ಬಂದು ತಲುಪಿದೆ. ಭೂಸ್ವಾಧೀನದ ವಿರುದ್ಧ ಸತತವಾಗಿ ನಡೆಯುತ್ತಿರುವ ಈ...

ಕೊಡಗಿನ ಆದಿವಾಸಿ ಹಾಡಿಗಳಲ್ಲಿ ಎಸ್‌ಐಆರ್ ಅವ್ಯವಸ್ಥೆ : ಬಿಎಲ್‌ಒಗಳಿಗೆ ತರಬೇತಿಯ ಕೊರತೆ, ಇನ್ನೂ ತಲುಪದ ಗಣತಿ ಫಾರಂ

ಕರ್ನಾಟಕದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಬಹಳ ಯಶಸ್ವಿಯಾಗಿ ನಡೆಯುತ್ತಿದೆ, ಮತದಾರರಿಗೆ ಎಲ್ಲಾ ರೀತಿಯ ಸಹಾಯಗಳನ್ನು ಒದಗಿಸಲಾಗುತ್ತಿದೆ ಎಂದು ರಾಜ್ಯ ಮುಖ್ಯ ಚುನಾವಣಾ ಆಯುಕ್ತ ಅನ್ಬುಕುಮಾರ್ ಅವರು ಪದೇ...

SIR: ಉಡುಪಿಯಲ್ಲಿ ಕರ್ತವ್ಯನಿರತ BLO ಮೇಲೆ ಹಲ್ಲೆಗೆತ್ನಿಸಿದ ಮಾಜಿ ಪಂಚಾಯತ್ ಅಧ್ಯಕ್ಷ, FIR ದಾಖಲು

ಚುನಾವಣಾ ಮತದಾರರ ಪಟ್ಟಿ ಪರಿಷ್ಕರಣೆ (SIR) ಕರ್ತವ್ಯದಲ್ಲಿದ್ದ ಅಂಗನವಾಡಿ ಕಾರ್ಯಕರ್ತೆ ಹಾಗೂ ಬಿಎಲ್‌ಒ (BLO) ಮಹಿಳೆ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸಿ, ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿದ ಗಂಭೀರ ಆರೋಪ ಉಡುಪಿ...

ಕೋಟ್ಯಾಂತರ ವಿದ್ಯಾರ್ಥಿಗಳ ಭವಿಷ್ಯದ ಜೊತೆ NTA ಚೆಲ್ಲಾಟ: RTI ನಲ್ಲಿ ಬಯಲಾಯ್ತು NTA ಕರ್ಮಕಾಂಡ

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ (NTA) ಎನ್ನುವ ಈ ಸರ್ಕಾರಿ ಸಂಸ್ಥೆಯ ಮೇಲೆ ಪ್ರತಿವರ್ಷ ಕೋಟ್ಯಂತರ ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಕನಸುಗಳನ್ನು ಇಟ್ಟುಕೊಳ್ಳುತ್ತಾರೆ. 2018ರಲ್ಲಿ ಸ್ಥಾಪನೆಯಾದ ದಿನದಿಂದ ಇಲ್ಲಿಯವರೆಗೆ ಎನ್‌ಟಿಎ ಸುಮಾರು 270ಕ್ಕೂ ಹೆಚ್ಚು...