Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...