Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...