Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...

ಜಿರಳೆ ಜನತಾ ಪಕ್ಷದ ಖಾತೆಗೆ ನಿರ್ಬಂಧ; ದೆಹಲಿ ಹೈಕೋರ್ಟ್‌ನಿಂದ ಕೇಂದ್ರ-ಎಕ್ಸ್‌ಗೆ ನೋಟಿಸ್

ಜಿರಳೆ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ತಮ್ಮ ಸಾಮಾಜಿಕ ಮಾಧ್ಯಮ ಖಾತೆಗಳನ್ನು ನಿರ್ಬಂಧಿಸಿದ್ದನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದು, ದೆಹಲಿ ಹೈಕೋರ್ಟ್ (ಮೇ 29) ಕೇಂದ್ರ ಸರ್ಕಾರ ಮತ್ತು ಸಾಮಾಜಿಕ...

“ದಲಿತ ಮುಖ್ಯಮಂತ್ರಿ” ಅರ್ಹರು ಯಾರಿಲ್ಲಿ?

ಸದ್ಯ ಕರ್ನಾಟಕದಲ್ಲಿ ಮುಖ್ಯಮಂತ್ರಿಗಳ ಬದಲಾವಣೆಗೆ ವೇದಿಕೆ ಸಜ್ಜುಗೊಂಡಿದೆ. ಸುಧೀರ್ಘಾವಧಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ ಅಹಿಂದ ರಾಜಕಾರಣದ ಕುರಿತು ಮಾತಾಡುತ್ತಿದ್ದ, ಸಮಾಜವಾದಿ ಹಿನ್ನೆಲೆಯ ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಡಿ.ಕೆ. ಶಿವಕುಮಾರ್‌ ಮುಖ್ಯಮಂತ್ರಿಯಾಗಿ...

‘ನಾನು ಪ್ರೀತಿ-ವಿಶ್ವಾಸಗಳಿಗೆ ತಲೆಬಾಗುವವನೇ ಹೊರತು ಒತ್ತಡ-ಪ್ರಭಾವಗಳಿಗೆ ಒಳಗಾಗುವವನಲ್ಲ’: ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ

ಹೈಕಮಾಂಡ್ ಯಾವಾಗ ಸೂಚಿಸುತ್ತದೆಯೋ ಆಗ ರಾಜೀನಾಮೆ ಕೊಡುತ್ತೇನೆ ಎಂದು ಹೇಳಿದ್ದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ 2026 ಮೇ 28 ರಂದು ಹೈಕಮಾಂಡ್ ಸೂಚನೆ ಮೇರೆಗೆ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ...