Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...

ಚೆನ್ನೈನಲ್ಲಿ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದ ಅಂಗವಿಕಲರ ಮೇಲೆ ಪೊಲೀಸ್ ದೌರ್ಜನ್ಯದ ಆರೋಪ

ಚೆನ್ನೈ: ರಾಜ್ಯ ಸರ್ಕಾರದಿಂದ ನೀಡುತ್ತಿರುವ ಮಾಸಿಕ ಸಹಾಯಧನ ಹೆಚ್ಚಿಸುವಂತೆ ಒತ್ತಾಯಿಸಿ ಚೆನ್ನೈನಲ್ಲಿ ಅಂಗವಿಕಲರು ನಡೆಸುತ್ತಿರುವ ಪ್ರತಿಭಟನೆ ಆರನೇ ದಿನಕ್ಕೆ ಕಾಲಿಟ್ಟಿದೆ.  ಅಂಗವಿಕಲರು ನಡೆಸುತ್ತಿದ್ದ ಈ ಪ್ರತಿಭಟನೆ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಹಲವಾರು ಪ್ರತಿಭಟನಾಕಾರರನ್ನು...

ರಾಜ್ಯಸಭೆ 37 ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ; ವೇಳಾಪಟ್ಟಿ ಪ್ರಕಟಿಸಿದ ಚುನಾವಣಾ ಆಯೋಗ

10 ರಾಜ್ಯಗಳಿಂದ ಖಾಲಿ ಇರುವ 37 ಸ್ಥಾನಗಳನ್ನು ಭರ್ತಿ ಮಾಡಲು ರಾಜ್ಯಸಭೆಯ ದ್ವೈವಾರ್ಷಿಕ ಚುನಾವಣೆಗೆ ಭಾರತೀಯ ಚುನಾವಣಾ ಆಯೋಗ (ಇಸಿಐ) ಬುಧವಾರ ವೇಳಾಪಟ್ಟಿ ಪ್ರಕಟಿಸಿದೆ. ಆಯೋಗದ ಪ್ರಕಾರ, ಮಾರ್ಚ್ 16 ರಂದು ಬೆಳಿಗ್ಗೆ 9:00...

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು: ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್

ಹಿಂದೂ ಕುಟುಂಬಗಳು ಕನಿಷ್ಠ ಮೂರು ಮಕ್ಕಳನ್ನು ಹೊಂದಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಕರೆ ನೀಡಿದ್ದಾರೆ. ಮಂಗಳವಾರ ಲಕ್ನೋದ ಸರಸ್ವತಿ ಶಿಶು ಮಂದಿರದಲ್ಲಿ ನಡೆದ ಸಾಮಾಜಿಕ ಸಾಮರಸ್ಯ ಕಾರ್ಯಕ್ರಮದಲ್ಲಿ ಮಾತನಾಡಿದ ಭಾಗವತ್, ಹಿಂದೂ...

5% ಮುಸ್ಲಿಂ ಮೀಸಲಾತಿ ಪ್ರಕ್ರಿಯೆ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರ

ರಾಜ್ಯದಲ್ಲಿ ಮುಸ್ಲಿಂ ಮೀಸಲಾತಿಗಾಗಿ ಜಾತಿ ಪರಿಶೀಲನೆ ಮತ್ತು ಪ್ರಮಾಣೀಕರಣ ಪತ್ರಗಳನ್ನು ನೀಡುವ ಪ್ರಕ್ರಿಯೆಯನ್ನು ಮಹಾರಾಷ್ಟ್ರ ಸರ್ಕಾರ ಮಂಗಳವಾರ (ಫೆ.17) ರದ್ದುಗೊಳಿಸಿ ಆದೇಶ ಹೊರಡಿಸಿದೆ. ಇದು ಪ್ರಸ್ತುತ ಪರಿಸ್ಥಿತಿಯಲ್ಲಿ ಯಾವುದೇ ತಕ್ಷಣದ ಬದಲಾವಣೆಯನ್ನು ತರದಿದ್ದರೂ,...

‘ಆರ್‌ಎಸ್‌ಎಸ್ ನೋಂದಣಿಗೆ ಕಾಂಗ್ರೆಸ್ ಕಾನೂನು ತರಲಿದೆ’: ತಮ್ಮ ಹೇಳಿಕೆಗಳನ್ನು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಕುರಿತ ತಮ್ಮ ಹೇಳಿಕೆಗಳನ್ನು ಮತ್ತು ಕರಾವಳಿ ಕರ್ನಾಟಕದ ಹೂಡಿಕೆಗಳ ಮೇಲೆ ಕೋಮು ಉದ್ವಿಗ್ನತೆ ಪರಿಣಾಮ...

ವಿನೋದ್ ಅದಾನಿ ಸಹಚರರ ವಿರುದ್ಧ ತನಿಖೆ ನಡೆಸಿದ ಇಟಾಲಿಯನ್ ಬ್ಯಾಂಕ್; ಅನುಮಾನಾಸ್ಪದ ‘ಹೆಡ್ಜ್ ಫಂಡ್’ ಹೂಡಿಕೆ ಪತ್ತೆ

ಜನವರಿ 2023 ರಲ್ಲಿ ಹಿಂಡೆನ್‌ಬರ್ಗ್‌ ರಿಸರ್ಚ್ ವರದಿಯ ಬೆನ್ನಲ್ಲೇ, ಇಟಲಿಯ ಅತಿದೊಡ್ಡ ಬ್ಯಾಂಕ್ 'ಇಂಟೆಸಾ ಸ್ಯಾನ್ಪೋಲೊ' ಅದಾನಿ ಗ್ರೂಪ್ ಅಧ್ಯಕ್ಷ ಗೌತಮ್ ಅದಾನಿ ಅವರ ಸಹೋದರ ವಿನೋದ್ ಅದಾನಿ ಅವರ ಇಬ್ಬರು ಸಹಚರರನ್ನು...

‘ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು ಅತ್ಯಾಚಾರ ಯತ್ನವಲ್ಲ’ ಎಂಬ ಅಲಹಾಬಾದ್ ಹೈಕೋರ್ಟ್ ತೀರ್ಪು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

"ಹೆಣ್ಣು ಮಕ್ಕಳ ಸ್ತನ ಹಿಡಿಯುವುದು, ಪೈಜಾಮದ ಲಾಡಿ ಬಿಚ್ಚುವುದು, ಅವರನ್ನು ಚರಂಡಿ ಕಡೆಗೆ ಅಥವಾ ಮೋರಿಯ ಅಡಿಗೆ ಎಳೆಯುವುದು 'ಅತ್ಯಾಚಾರ ಅಥವಾ ಅತ್ಯಾಚಾರ ಯತ್ನವಲ್ಲ" ಎಂಬ ಅಲಹಾಬಾದ್‌ ಹೈಕೋರ್ಟ್‌ನ ವಿವಾದಾತ್ಮಕ ತೀರ್ಪಿನ್ನು ಸುಪ್ರೀಂ...

‘ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ನಾವು ನಿಮ್ಮಿಂದ ಶಕ್ತಿ ಪಡೆಯುತ್ತೇವೆ’: ಕೇರಳ ಸಮ್ಮೇಳನದಲ್ಲಿ ಫಾರೂಕ್ ಅಬ್ದುಲ್ಲಾ ಭಾವುಕ ಮಾತು

"ದೇವರಿಗೆ ಧನ್ಯವಾದಗಳು, ದಕ್ಷಿಣ ಇನ್ನೂ ಸ್ವತಂತ್ರವಾಗಿದೆ, ಮತ್ತು ಅದು ಸ್ವತಂತ್ರವಾಗಿಯೇ ಉಳಿದಿದೆ ಮತ್ತು ಅಭಿವೃದ್ಧಿ ಹೊಂದುತ್ತದೆ ಮತ್ತು ಬಲಗೊಳ್ಳುತ್ತದೆ ಎಂದು ನಾನು ಭಾವಿಸುತ್ತೇನೆ. ನಾವು ನಿಮ್ಮಿಂದ ಶಕ್ತಿಯನ್ನು ಪಡೆಯುತ್ತೇವೆ. ನಾವು ನಿಮ್ಮನ್ನು ನೋಡುತ್ತೇವೆ...

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...