Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...

ಉನ್ನತ ಸಾಂಸ್ಥಿಕ ಹುದ್ದೆಗಳಲ್ಲಿ ‘ಬಹುಜನ’ ಪ್ರಾತಿನಿಧ್ಯದ ಕೊರತೆ: ವ್ಯವಸ್ಥಿತ ತಾರತಮ್ಯದ ರೂಪ ಎಂದ ರಾಹುಲ್ ಗಾಂಧಿ 

ಉನ್ನತ ಸಂಸ್ಥೆಗಳ ಹಿರಿಯ ನಾಯಕತ್ವದಲ್ಲಿ "ಬಹುಜನ" ಸಮುದಾಯಗಳಿಗೆ ಪ್ರಾತಿನಿಧ್ಯದ ಕೊರತೆಯಿದೆ ಎಂದು ರಾಹುಲ್ ಗಾಂಧಿ ಸೋಮವಾರ ಆರೋಪಿಸಿದ್ದಾರೆ. ಇದು ವ್ಯವಸ್ಥಿತ ತಾರತಮ್ಯದ ಒಂದು ರೂಪವಾಗಿದ್ದು ಅದನ್ನು ಪರಿಹರಿಸಬೇಕು ಎಂದು ಹೇಳಿದ್ದಾರೆ.  ಲೋಕಸಭೆಯ ವಿರೋಧ ಪಕ್ಷದ...

ಗಾಯಗಳ ತೀವ್ರತೆಯಿಂದಾಗಿ ನೌಕಾಪಡೆಯ ಮುಖ್ಯಸ್ಥ ತಂಗ್ಸಿರಿ ಸಾವನ್ನಪ್ಪಿದ್ದಾರೆ: ದೃಢಪಡಿಸಿದ ಇರಾನ್

ತಾನು ನಡೆಸಿದ ದಾಳಿಯಿಂದ ಇರಾನ್‌ ನೌಕಾಪಡೆಯ ರಿಯರ್ ಅಡ್ಮಿರಲ್ ಅಲಿರೆಜಾ ತಂಗ್ಸಿರಿ ಸಾವನ್ನಪ್ಪಿದ್ದಾರೆ ಎಂದು ಕಳೆದ ಗುರುವಾರ (ಮಾ.26) ಇಸ್ರೇಲ್ ಹೇಳಿಕೊಂಡಿತ್ತು. ಸುದ್ದಿ ಖಷಿತಪಡಿಸಿರುವ ಇರಾನ್, ದಾಳಿಯಿಂದ ಸಂಭವಿಸಿದ ತೀವ್ರ ಗಾಯಗಳಿಂದ ತಂಗ್ಸಿರಿ...

ಬಹುಭಾಷಾ ನಟ ಪ್ರಕಾಶ್ ರಾಜ್‌ ತಾಯಿ ಸ್ವರ್ಣಲತಾ ನಿಧನ

ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ತಾಯಿ ಸ್ವರ್ಣಲತಾ ಅವರು ತಮ್ಮ 86 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ. ಅವರು ವಯೋಸಹಜ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ನಟ ಪ್ರಕಾಶ್‌ ರಾಜ್‌ ಅವರು ತಮ್ಮ ತಾಯಿಯೊಂದಿಗೆ ಇದ್ದ...

ಮುಂಬೈ: ಸ್ವ-ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ಆಕ್ರೋಶ: ದಾದರ್‌ನಲ್ಲಿ ಮೂಢನಂಬಿಕೆ ವಿರೋಧಿ ಅಭಿಯಾನ

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಚಟುವಟಿಕೆಗಳ ಸುತ್ತ ವ್ಯಾಪಕ ಆಕ್ರೋಶ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ವಿವೇಕ್ ಜಾಗರ್ ಉಪಕ್ರಮದಡಿಯಲ್ಲಿ ಮಹಾರಾಷ್ಟ್ರ ಅಂಧಾಶ್ರದ್ಧ ನಿರ್ಮೂಲನ ಸಮಿತಿ (MANS) ಮಹಾರಾಷ್ಟ್ರ ಘಟಕವು ಭಾನುವಾರ...

ನೋಟಿಸ್ ನೀಡದೆ ಮಸೀದಿ ಬಂದ್; ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದ ಅಲಹಾಬಾದ್ ಹೈಕೋರ್ಟ್

ಪೂರ್ವ ಸೂಚನೆ ನೀಡದೆ ಅಥವಾ ಮಾಲೀಕರಿಗೆ ವಿಚಾರಣೆಗೆ ಅವಕಾಶ ನೀಡದೆ ಪ್ರಾರ್ಥನಾ ಸ್ಥಳಕ್ಕೆ ಬೀಗ ಹಾಕಬಹುದೇ ಎಂಬ ಬಗ್ಗೆ ವಿವರಣೆ ನೀಡಬೇಕು ಎಂದು ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರವನ್ನು ಕೇಳಿದೆ. ಮುಜಫರ್‌ನಗರದಲ್ಲಿ ಮಸೀದಿಯನ್ನು...

ಬಿಜು ಪಟ್ನಾಯಕ್ ಕುರಿತು ಹೇಳಿಕೆ : ಬಿಜೆಪಿ ಸಂಸದ ನಿಶಿಕಾಂತ್ ದುಬೆ ವಿರುದ್ಧ ತೀವ್ರ ಆಕ್ರೋಶ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ಬಿಜೆಪಿ ಸಂಸದ ನಿಶಿಕಾಂತ್ ದುಬೆ ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ದುಬೆ ನೇತೃತ್ವದ ಸಂವಹನ ಮತ್ತು ಐಟಿ ಕುರಿತ ಸಂಸದೀಯ ಸ್ಥಾಯಿ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ; ಆರ್‌ಎಸ್‌ಎಸ್ ನಾಯಕ ಸೇರಿದಂತೆ 30 ಜನರ ಬಂಧನ

ಮಾರ್ಚ್ 27 ರಂದು ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ನಡೆದ ರಾಮನವಮಿ ಮೆರವಣಿಗೆ ಹಿಂಸಾಚಾರಕ್ಕೆ ತಿರುಗಿದ ನಂತರ ಸುಮಾರು 30 ಜನರು ಗಾಯಗೊಂಡರು. ಈ ಘಟನೆಯು ವ್ಯಾಪಕ ಉದ್ವಿಗ್ನತೆಗೆ ಕಾರಣವಾಗಿದ್ದು, ಅಂಗಡಿ...

ದೆಹಲಿ ಗಲಭೆ ಪ್ರಕರಣ: ಮಧ್ಯಂತರ ಜಾಮೀನು ಅವಧಿ ಅಂತ್ಯ; ಇಂದು ತಿಹಾರ್ ಜೈಲಿಗೆ ಮರಳಲಿರುವ ಶಾರ್ಜೀಲ್ ಇಮಾಮ್

2020 ರ ಈಶಾನ್ಯ ದೆಹಲಿ ಗಲಭೆಯ ಹಿಂದಿನ ದೊಡ್ಡ ಪಿತೂರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ನ್ಯಾಯಾಲಯವು ನೀಡಿದ್ದ 10 ದಿನಗಳ ಮಧ್ಯಂತರ ಜಾಮೀನು ಅವಧಿ ಮುಗಿದ ಹಿನ್ನೆಲೆಯಲ್ಲಿ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್...