Homeಕರ್ನಾಟಕ‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

‘ನಾವ್ ಮನೆಗ್ ಹೋಗೋದಿಲ್ಲ’ ಅಂತಿದ್ದ ಶಾಸಕರಿಗೆ ಶಾಕ್: ವಿಪ್ ಓಕೆ, ಅತೃಪ್ತರ ಅನರ್ಹತೆ ಪಕ್ಕಾ..

ಸಿದ್ದರಾಮಯ್ಯ ಕ್ರಿಯಾಲೋಪಕ್ಕೆ ಸ್ಪೀಕರ್ ರೂಲಿಂಗ್

- Advertisement -
- Advertisement -

ಮುಂಬೈನಲ್ಲಿ ಕುಳಿತು ‘ನಾವ್ ಮನೆಗ್ ಹೋಗೋದಿಲ್ಲ, ನಾವ್ ಮನೆಗೆ ಹೋಗೋದಿಲ್ಲ’ ಅಂತಾ ಮಜಾ ಮಾಡುತ್ತಿರುವ ಶಾಸಕರು ಈಗ ಟಿವಿ ನೋಡಿ ಬೆಚ್ಚಿ ಬಿದ್ದಿರುವುದಂತೂ ಹಂರ್ಡೆಂಡ್ ಪರ್ಸೆಂಟ್ ಪಕ್ಕಾ.

ವಿಶ್ವಾಸಮತ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಅರ್ಜಿದಾರ ಶಾಸಕರಿಗೆ (ಮುಂಬೈನಲ್ಲಿರುವ ಅತೃಪ್ತರು) ಒತ್ತಾಯ ಮಾಡುವಂತಿಲ್ಲ ಎಂಬ ಸುಪ್ರಿಂಕೋರ್ಟಿನ ಆದೇಶ ಇಟ್ಟುಕೊಂಡು ನಿರಾಳವಾಗಿದ್ದ ಶಾಸಕರಿಗೆ ಸ್ಪೀಕರ್ ರಮೇಶಕುಮಾರ್ ಸಿದ್ದರಾಮಯ್ಯ ಎತ್ತಿದ ಕ್ರಿಯಾಲೋಪದ ಬಗ್ಗೆ ಕೇವಲ ಮೂರು ವಾಕ್ಯಗಳಲ್ಲಿ ನೀಡಿದ ರೂಲಿಂಗ್ ಅತೃಪ್ತ ಶಾಸಕರುಗೆ ಮರ್ಮಾಘಾತ ಉಂಟು ಮಾಡಿದೆ.

ಜೊತೆಗೆ, ‘ಆ ನನ್ಮಕ್ಳು ಅನರ್ಹಗೊಂಡರೆ ಇನ್ನೂ ಒಳ್ಳೇದು’ ಎಂದು ಕಾದಿರುವ ಬಿಜೆಪಿಗೂ ಇದು ಒಳಗೊಳಗೇ ಖುಷಿ ಕೊಟ್ಟಿರಬಹುದು. ಆದರೆ ಈಗ ಕೃಷ್ಣ ಬೈರೆಗೌಡರು ಅತೃಪ್ತ ಶಾಸಕರಾದ ಗೋಕಾಕಿನ ರಮೇಶ ಜಾರಕಿಹೊಳಿ ಮತ್ತು ಹೀರೆಕೆರೂರಿನ ಬಿ.ಸಿ. ಪಾಟೀಲರು ಬಿಜೆಪಿ ಜೊತೆ ಇಟ್ಟುಕೊಂಡಿರುವ ನಂಟನ್ನು ಎತ್ತುವ ಮೂಲಕ, ಇಲ್ಲಿ ಕುದುರೆ ವ್ಯಾಪಾರ ನಡೆಯುತ್ತಿದೆ, ಅದರ ಹಿಂದೆ ಬಿಜೆಪಿ ಇದೆ ಎಂಬುದನ್ನು ಮನದಟ್ಟು ಮಾಡಲು ಪ್ರಯತ್ನಿಸುತ್ತಿದ್ದಾರೆ.

ಈ ಹಿಂದೆ ಬಿ.ಸಿ. ಪಾಟೀಲ್ ಮತ್ತು ಬಿಜೆಪಿ ನಾಯಕರ ( ಶ್ರೀರಾಮುಲು ಮತ್ತು ಬಿಜೆಪಿ ರಾಷ್ಟ್ರೀಯ ನಾಯಕ ಮುರಳೀಧರರಾವ್, ಈ ಹೆಸರನ್ನು ಕೃಷ್ಣ ಬೈರೆಗೌಡ ಪ್ರಸ್ತಾಪಿಸಿದೇ ಹೇಳಿದರು) ನಡುವೆ ನಡೆದ ಸಂಭಾಷಣೆಯ ಆಡಿಯೋ ವಿಷಯವನ್ನು ಪ್ರಸ್ತಾಪಿಸುವ ಮೂಲಕ ಈ ಚರ್ಚೆ ನಾಳೆಗೂ ಮುಂದಕ್ಕೆ ಹೋಗಬಹುದು ಎಂಬ ಪೂರ್ವ ಸೂಚನೆಯೊಂದನ್ನೂ ಅವರು ನೀಡಿದ್ದಾರೆ. ಬಿಜೆಪಿಯ ವಿಪರೀತ ಆಕ್ಷೇಪದ ನಡುವೆಯೂ ಅವರು ಮತ್ತೆ ಮಾತು ಮುಂದುವರೆಸುವ ಅವಕಾಶವನ್ನು ಗಿಟ್ಟಿಸಿಕೊಂಡಿದ್ದಾರೆ.

ಬಿ.ಸಿ. ಪಾಟೀಲರಿಗೆ 25 ಕೋಟಿ ರೂ ಮತ್ತು ಸಚಿವ ಸ್ಥಾನ, ಅವರ ಜೊತೆಗಿರುವ ಮೂರು ನಾಲ್ಕು ಶಾಸಕರಿಗೆ 15 ಕೋಟಿ ರೂ ಮತ್ತು ಸಚಿವ ಸ್ಥಾನದ ಆಫರ್ ನೀಡುರುವುದನ್ನು ಕೃಷ್ಣ ಬೈರೇಗೌಡ ಉಲ್ಲೇಖಿಸಿದ್ದಾರೆ. ಹಾಗೆಯೇ 2018ರ ಅಗಸ್ಟ್ ನಿಂದ ಗೋಕಾಕಿನ ಶಾಸಕ ರಮೇಶ್ ಜಾರಕಿಹೊಳಿ ಬಿಜೆಪಿ ಸಂಪರ್ಕದಲ್ಲಿ ಇದ್ದಾರೆ ಎಂಬುದಕ್ಕೆ ಹಲವು ಉದಾಹರಣೆಗಳನ್ನು ನೀಡಿದ್ದಾರೆ.

ಈಗ ಬೈರೇಗೌಡರ ವಾದ ಮುಂದುವರೆದಿದೆ. ನಂತರ ಎಚ್. ಕೆ. ಪಾಟೀಲ್ ಮತ್ತೆ ಕಾನೂನಾತ್ಮಕ, ಸಂವಿಧಾನಾತ್ಮಕ ವಿಷಯಗಳನ್ನು ಎತ್ತಿ, ಅದರ ನಂತರ ಸಿದ್ದರಾಮಯ್ಯ ಮತ್ತೊಂದು ಶಾಕಿಂಗ್ ಭಾಷಣ ಮಾಡುವ ಸಾಧ್ಯತೆಗಳಿವೆ ಎಂಬ ಮಾಹಿತಿಯಿದೆ.

ಇವತ್ತೇನಾದರೂ ವಿಶ್ವಾಸಮತವನ್ನು ಮುಂದೂಡಲು ಸಾಧ್ಯವಾದರೆ, ಕೆಲ ಅತೃಪ್ತ ಶಾಸಕರು ಮತ್ತೆ ತಮ್ಮ ಗೂಡಿಗೆ ಸೇರಿಕೊಳ್ಳುವುದಂತೂ ಗ್ಯಾರಂಟಿ ಅನಿಸುತ್ತಿದೆ. ಆದರೂ ಟಿವಿ ಚಾನೆಲ್‍ಗಳಂತೆ ಹೀಗೇ ಆಗುತ್ತದೆ ಎಂದು ನಮ್ಮ ಪೋರ್ಟಲ್ ಹೇಳುವುದಿಲ್ಲ. ಆದರೆ ಒಂದು ಕಾಮನ್ ಸೆನ್ಸ್ ಮತ್ತು ತಜ್ಞರ ಅಭಿಪ್ರಾಯದ ಲೆಕ್ಕದಲ್ಲಿ ನಾವಿದನ್ನೆಲ್ಲ ನಿಮ್ಮ ಮುಂದೆ ಇಡುತ್ತ ಹೋಗುತ್ತಾ ಇದ್ದೇವೆ. ಸಾರ್ವಜನಿಕರ ಧ್ವನಿಯಾಗುವುದು ನಮ್ಮ ಕರ್ತವ್ಯವೂ ಆಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...