Homeಚಳವಳಿಇಂದು ನಮ್ಮೀ ನಾಡು…

ಇಂದು ನಮ್ಮೀ ನಾಡು…

ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ?

- Advertisement -
- Advertisement -

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ನೆಲ ಶಿವರಾಮ ಕಾರಂತ, ಕೋ. ಲ. ಕಾರಂತ,  ಬಿ. ವಿ. ಕಾರಂತ, ಗೋಪಾಲಕೃಷ್ಣ ಅಡಿಗ, ಸೇಡಿಯಾಪು ಕೃಷ್ಣಭಟ್ಟ ಅವರ ತವರು ನೆಲ; ಪಂಜೆ ಮಂಗೇಶರಾಯರ ತವರು ಆ ನೆಲ; ಗೊಲ್ಗೊಥಾ ಮತ್ತು ವೈಶಾಖಿ ಖಂಡಕಾವ್ಯಗಳನ್ನು ಬರೆದ ಗೋವಿಂದ ಪೈ ಅವರ ನೆಲ; ಲಕ್ಷ್ಮೀಶ ತೋಳ್ಪಾಡಿಯವರ  ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ ಮತ್ತು ಬೆಳಕಿಗೆ ನೆರಳಿತ್ತ ಸಂಗಾತಿ ಪುಸ್ತಕಗಳಿಂದಾಗಿ ನನ್ನಂಥವರ ಮನಮೀಟಿದ ಪುತ್ತೂರಿನ ಅಜ್ಜಂದಿರು ರಾಮಚಂದ್ರ ಭಟ್ಟ ಮತ್ತು ಇಸ್ಮಾಯಿಲ್ ಕುಂಞಪ್ಪ ಅವರ ಕರುಳ ಬೇರಿನ ಬೀಡು.

ರಾಮಚಂದ್ರ ಭಟ್ಟರು ಮತ್ತು ಇಸ್ಮಾಯಿಲ್ ಕುಂಞಪ್ಪ
Photo Courtesy: mysorepoetWordPress.com

ಶಿವಮೊಗ್ಗ ಜಿಲ್ಲೆ ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಪಿ. ಲಂಕೇಶ್, ಯು.ಆರ್. ಅನಂತಮೂರ್ತಿ ಮತ್ತು ಕೆ. ವಿ. ಸುಬ್ಬಣ್ಣ ಅವರು ಹುಟ್ಟಿ, ಬೆಳಗಿದ ನೆಲ. ನಿತ್ಯೋತ್ಸವ ಎಂಬ ಹಾಡನ್ನು ಬರೆದು ಕರ್ನಾಟಕದ ನೆಲವನ್ನು ಕೀರ್ತಿಸಿದ ನಿಸಾರ್ ಅಹಮದ್ ಅವರು ನೆಲೆಸಿ, ಒಲಿದು, ಒಲಿಸಿಕೊಂಡ ನೆಲ ಅದು, ಬೆಣ್ಣೆ ಕದ್ದ ನಮ್ಮ ಕೃಷ್ಣದಂಥ ಮುಪ್ಪಿಲ್ಲದ ಹಾಡುಗಳನ್ನು ಅವರು ಬರೆದ ನೆಲೆವೀಡು. ಪ್ರಭುದೇವ ಅಲ್ಲಮ ಹುಟ್ಟಿ, ಸಿದ್ಧನಾದದ್ದು, ಮಹದೇವಿಯಕ್ಕ ಹುಟ್ಟಿ, ಸಿದ್ಧಳಾದದ್ದು, ಅಲ್ಲಿ.

ಧಾರವಾಡ ಎಂದರೆ ನನ್ನಂಥವರಿಗೆ ಬೇಂದ್ರೆ, ಬೇಂದ್ರೆ, ಬೇಂದ್ರೆಯೇ. ಜೊತೆಗೆ, ಸಾತ್ತ್ವಿಕ ಹರಿಹರಿತ ಸವಾಲಿಗೆ ನಿಂತ ಆ ಘನಘನ ಶಂಬಾ, ಶಂಬಾ ಜೋಷಿ. ಮತ್ತು, ಅಣ್ಣ ಬಸವಣ್ಣನ ಒಕ್ಕಲು ತಾವೆಂಬವರ ವಿದ್ಯಾಕಾಶಿ.

ಕೋಲಾರ ಎಂದರೆ ಮಾಗಿದ ಮಾತು: ಮಾಸ್ತಿಯ ಅಯ್ಯ, ಡಿವಿಜಿ. ಕೋಲಾರ ಎಂದರೆ ಎದೆಮೀಟೊ ಹಾಡು:  ಕೈವಾರ ತಾತಯ್ಯ.

ಇನ್ನು ಮೇಲುಕೋಟೆ ಎಂದರೆ, ಅದೇ… ಅಹಲ್ಯೆ, ಗೋಕುಲನಿರ್ಗಮನ, ಮಲೆದೇಗುಲ, ಯದುಗಿರಿಯ ಮೌನವಿಕಾಸ, ಶರ್ವರೀ ಸುಷಮೆ ಬರೆದ ಆರ್ದ್ರತೆ, ರಸಿಕತೆಯ ಮೂರುತಿ – ಪು. ತಿ. ನ.

 

ಆದರೆ ಈಗ, ಕಡಲ ತೀರದ ಆ ಜಿಲ್ಲೆಗಳಲ್ಲಿ, ಶಿವಮೊಗ್ಗ ಸುತ್ತಿನ ಊರೂರಲ್ಲಿ, ಧಾರವಾಡದ ನುಗ್ಗಿಕೇರಿಯಲ್ಲಿ, ಕೋಲಾರದ ಮುಳಬಾಗಿಲಲ್ಲಿ, ಮೇಲುಕೋಟೆಯ ಚೆಲುವನ ಗುಡಿಯ ಮಂದಿಯಲ್ಲಿ – ಎಲ್ಲೆಲ್ಲೂ, ಎಲ್ಲೆಲ್ಲೋ – ಆಗಿರುವುದು, ಆಗುತ್ತಿರುವುದು, ಮತ್ತು ಆಗಲಿರುವುದನ್ನು ಕಂಡು ಅಲ್ಲಿ, ಯಾವ ದಿವ್ಯಲೋಕದಲ್ಲೋ, ಗೋಷ್ಠಿ ನಡೆಸುತ್ತಿರಬಹುದಾದ ಆ ನಮ್ಮ ಹಿರಿಯರಿಗೆಲ್ಲ ಹೇಗಾಗುತ್ತಿರಬೇಕು, ಕೇಳಿಕೊಳ್ಳುವುದು ಬೇಡ: ಆ ಲೋಕದಲ್ಲೂ ವಿಲಿವಿಲಿ ಒದ್ದಾಡುತ್ತಿರಬೇಕು ಅವರು.

ಆ ಅಂಥವರನ್ನು ಓದಿ, ಮೆಚ್ಚಿಕೊಂಡ ಜನರಿದ್ದೇವಲ್ಲ ನಾವು, ನೀವು… ಮಾತುಮಾತಿಗೆ ಅವರನ್ನು ನೆನೆಯುವ… ಅವರು ಆಡಿದ್ದನ್ನು, ಮಾಡಿದ್ದನ್ನು, ಬರೆದದ್ದನ್ನು ಎತ್ತಿ ಆಡುವ, ನಮ್ಮನಮ್ಮಲ್ಲೇ ಗುನುಗಿಕೊಳ್ಳುವ, ಮೆಲುಕು ಹಾಕುವ, ಭಾಷಣ ಬಿಗಿಯುವ, ಬರೆಯುವ, ಪಾಠಮಾಡುವ, ಪರೀಕ್ಷೆ ಪಾಸುಮಾಡಲು ಓದುವ… ಅವರೆಲ್ಲ ಬೆಳೆಸಿದ ಜನ ನಾವು, ನಾವಿದ್ದೇವಲ್ಲ… ಅವರ ಹೆಸರುಗಳನ್ನು ಹೇಳಿ ಬೀಗುವ ನಾವು, ಈ ನಾನು, ಈ ನೀವು… ನಾವು  ಈಗ ಏನು ಮಾಡಬೇಕು, ಯೋಚಿಸೋಣ ಕನ್ನಡಿಗರೇ, ಕರುನಾಡಿಗರೇ…

ಜನಿವಾರ ಹಾಕಿಕೊಂಡೋ ಹಾಕಿಕೊಳ್ಳದೆಯೋ ಗಾಯತ್ರಿ ಮಂತ್ರವನ್ನು ಬಲುಶ್ರದ್ಧೆಯಿಂದ ಮನನ ಮಾಡುವ, ಮಣಮಣಿಸುವ ನಾವು; ಶಿವದಾರ, ಕರಡಿಗೆ ಹಾಕಿಯೋ ಹಾಕಿಕೊಳ್ಳದೆಯೋ ಬಸವ ಬಳಗ, ಅಕ್ಕನ ಬಳಗ ಎಂದೆಲ್ಲ ಕಟ್ಟಿಕೊಂಡು ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ ಎಂದೆಲ್ಲ ಗಳಹುವ ನಾವು; ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ, ವಿಚಾರ ಕ್ರಾಂತಿಗೆ ಆಹ್ವಾನ, ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಮುಂತಾದ್ದೆಲ್ಲ ಓದಿಕೊಂಡವರು, ಪಾಠ ಮಾಡುವವರು, ಹೇಳಿಸಿಕೊಂಡವರು ಎನ್ನುತ್ತ, ಎಂದುಕೊಳ್ಳುತ್ತ ಉಬ್ಬುವ ನಾವು; ಬಾಳ್ವೆಯೇ ಬೆಳಕು ಎಂದು ಒದರುವ ನಾವು; ವಿಶ್ವಮಾತೆಯ ಗರ್ಭಕಮಲಜಾತ ಪರಾಗ ಪರಮಾಣು ಕೀರ್ತಿ ನಾನು ಎಂದು ನಾಟಕೀಯವಾಗಿ ಹೇಳುವ, ಹೇಳಿಸುವ ನಾವು — ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ? ಈ ನಮ್ಮವರ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಬೇಕಾದ ಧೈರ್ಯದ ಮಾತತ್ತಿರಲಿ, ಯೋಗ್ಯತೆಯನ್ನೂ ಕಳೆದುಕೊಳ್ಳುತ್ತಿದ್ದೇವಲ್ಲ ನಾವು…

ಅಡಿಗರ ಇಂದು ನಮ್ಮೀ ನಾಡು ಕವನ ಹೇಳುವಂತೆ, ಇಲ್ಲಿ:

ತೇರ ಹಿಡಿದೆಳೆದ ಕೈ, ಬಾಗಿ ಪೊಡಮಟ್ಟ ಮೈ
ಭಕ್ತಿ ತುಳುಕಾಡಿದ್ದ ಅಂತರಂಗ
ಈಗ ನರಕಕ್ಕೆ ಕೈಮರ, ಕರಡಿಗುಹೆ, ಘೋರ
ರಾಕ್ಷಸತೆ ಭೋರಿಡುವ ನಾಟ್ಯರಂಗ

ಅದು ಬೇಡ, ಬೇಡ. ಒಮ್ಮೆ ನಮ್ಮನಮ್ಮ ಮುಖವನ್ನು  ನಮ್ಮನಮ್ಮ ಒಳಗನ್ನಡಿಯಲ್ಲಿ ನಾವೇ ನೋಡಿಕೊಳ್ಳೋಣಲಂಕೇಶರ ದೇಶಭಕ್ತಗದ್ಯಗೀತೆ ಯನ್ನು ಉಸುರಿಕೊಳ್ಳುತ್ತ ನಮ್ಮನಮ್ಮ ಮುಸುಡಿಗೆ ನಾವೇ ಥೂ ಥೂ ಎನ್ನೋಣಚೊಕ್ಕವಾಗೋಣ. ಆಗಿ, ಮನೆಮಂದಿಯ ತಬ್ಬಿ ನಿಲ್ಲೋಣ.

ಕಡೆಯ ಮಾತು. ಕನ್ನಡಕ್ಕೆ ಎಂಟೆಂಟು ಜ್ಞಾನಪೀಠ ಪ್ರಶಸ್ತಿ ಬಂದಿದೆ, ಕರುನಾಡಿಗೆ ಸಂದ ಗೌರವ ಅದು, ಸವಿಗನ್ನಡಕ್ಕೆ ಸಂದ ಮನ್ನಣೆ ಎಂದೆಲ್ಲ ಹಿಗ್ಗುತ್ತೇವಲ್ಲ ನಾವು. ಯೋಚಿಸೋಣ, ಆ ಪ್ರಶಸ್ತಿ ಪಡೆದ ಮೊದಲ ಏಳು ಜನ ಈಗ ಇಲ್ಲಿ ಇದ್ದಿದ್ದರೆ ಒದ್ದಾಡುತ್ತಿದ್ದರು, ಆದರೆ ಖಂಡಿತಾ ಸುಮ್ಮನಿರುತ್ತಿರಲಿಲ್ಲ: ನಮ್ಮನಿಮ್ಮ ಆ ಮನೆಮಂದಿಯನ್ನು ಅಪ್ಪಿಕೊಂಡು, ಇಂದಿನ ಫ್ಯಾಶಿಸ್ಟರಿಗೆ ಖಂಡಿತಾ ಅಡ್ಡ ನಿಲ್ಲುತ್ತಿದ್ದರು ಅವರು.

ಈಗ ನಮ್ಮ ನಡುವೆ ಇರುವ ಜ್ಞಾನಪೀಠಸ್ಥರು ಒಬ್ಬರು ಮಾತ್ರ. ಆ ಹಿರಿಯರಿಂದ, ಮನೆಮಂದಿಯ ಕಾಯುವ ಸೊಲ್ಲೇ ಇಲ್ಲ, ಏಕೆ?

  • ರಘುನಂದನ

(ಲೇಖಕರು, ಕವಿ, ರಂಗನಿರ್ದೇಶಕರು, ಬೆಂಗಳೂರು)

*******


ಇದನ್ನೂ ಓದಿ: ಅಧ್ಯಾಪನದ ಧರ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಹೇಳಿದ ಮಾತುಗಳು ೧೦೦ಕ್ಕೆ ೧೦೦%ಸತ್ಯ ಸರ್ ಇದರ ಬಗ್ಗೆ ನಾವೆಲ್ಲ ಯೋಚಿಸಲೇ ಬೇಕು, ತಡೆಯಬೇಕು

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...