Homeಚಳವಳಿಇಂದು ನಮ್ಮೀ ನಾಡು…

ಇಂದು ನಮ್ಮೀ ನಾಡು…

ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ?

- Advertisement -
- Advertisement -

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ನೆಲ ಶಿವರಾಮ ಕಾರಂತ, ಕೋ. ಲ. ಕಾರಂತ,  ಬಿ. ವಿ. ಕಾರಂತ, ಗೋಪಾಲಕೃಷ್ಣ ಅಡಿಗ, ಸೇಡಿಯಾಪು ಕೃಷ್ಣಭಟ್ಟ ಅವರ ತವರು ನೆಲ; ಪಂಜೆ ಮಂಗೇಶರಾಯರ ತವರು ಆ ನೆಲ; ಗೊಲ್ಗೊಥಾ ಮತ್ತು ವೈಶಾಖಿ ಖಂಡಕಾವ್ಯಗಳನ್ನು ಬರೆದ ಗೋವಿಂದ ಪೈ ಅವರ ನೆಲ; ಲಕ್ಷ್ಮೀಶ ತೋಳ್ಪಾಡಿಯವರ  ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ ಮತ್ತು ಬೆಳಕಿಗೆ ನೆರಳಿತ್ತ ಸಂಗಾತಿ ಪುಸ್ತಕಗಳಿಂದಾಗಿ ನನ್ನಂಥವರ ಮನಮೀಟಿದ ಪುತ್ತೂರಿನ ಅಜ್ಜಂದಿರು ರಾಮಚಂದ್ರ ಭಟ್ಟ ಮತ್ತು ಇಸ್ಮಾಯಿಲ್ ಕುಂಞಪ್ಪ ಅವರ ಕರುಳ ಬೇರಿನ ಬೀಡು.

ರಾಮಚಂದ್ರ ಭಟ್ಟರು ಮತ್ತು ಇಸ್ಮಾಯಿಲ್ ಕುಂಞಪ್ಪ
Photo Courtesy: mysorepoetWordPress.com

ಶಿವಮೊಗ್ಗ ಜಿಲ್ಲೆ ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಪಿ. ಲಂಕೇಶ್, ಯು.ಆರ್. ಅನಂತಮೂರ್ತಿ ಮತ್ತು ಕೆ. ವಿ. ಸುಬ್ಬಣ್ಣ ಅವರು ಹುಟ್ಟಿ, ಬೆಳಗಿದ ನೆಲ. ನಿತ್ಯೋತ್ಸವ ಎಂಬ ಹಾಡನ್ನು ಬರೆದು ಕರ್ನಾಟಕದ ನೆಲವನ್ನು ಕೀರ್ತಿಸಿದ ನಿಸಾರ್ ಅಹಮದ್ ಅವರು ನೆಲೆಸಿ, ಒಲಿದು, ಒಲಿಸಿಕೊಂಡ ನೆಲ ಅದು, ಬೆಣ್ಣೆ ಕದ್ದ ನಮ್ಮ ಕೃಷ್ಣದಂಥ ಮುಪ್ಪಿಲ್ಲದ ಹಾಡುಗಳನ್ನು ಅವರು ಬರೆದ ನೆಲೆವೀಡು. ಪ್ರಭುದೇವ ಅಲ್ಲಮ ಹುಟ್ಟಿ, ಸಿದ್ಧನಾದದ್ದು, ಮಹದೇವಿಯಕ್ಕ ಹುಟ್ಟಿ, ಸಿದ್ಧಳಾದದ್ದು, ಅಲ್ಲಿ.

ಧಾರವಾಡ ಎಂದರೆ ನನ್ನಂಥವರಿಗೆ ಬೇಂದ್ರೆ, ಬೇಂದ್ರೆ, ಬೇಂದ್ರೆಯೇ. ಜೊತೆಗೆ, ಸಾತ್ತ್ವಿಕ ಹರಿಹರಿತ ಸವಾಲಿಗೆ ನಿಂತ ಆ ಘನಘನ ಶಂಬಾ, ಶಂಬಾ ಜೋಷಿ. ಮತ್ತು, ಅಣ್ಣ ಬಸವಣ್ಣನ ಒಕ್ಕಲು ತಾವೆಂಬವರ ವಿದ್ಯಾಕಾಶಿ.

ಕೋಲಾರ ಎಂದರೆ ಮಾಗಿದ ಮಾತು: ಮಾಸ್ತಿಯ ಅಯ್ಯ, ಡಿವಿಜಿ. ಕೋಲಾರ ಎಂದರೆ ಎದೆಮೀಟೊ ಹಾಡು:  ಕೈವಾರ ತಾತಯ್ಯ.

ಇನ್ನು ಮೇಲುಕೋಟೆ ಎಂದರೆ, ಅದೇ… ಅಹಲ್ಯೆ, ಗೋಕುಲನಿರ್ಗಮನ, ಮಲೆದೇಗುಲ, ಯದುಗಿರಿಯ ಮೌನವಿಕಾಸ, ಶರ್ವರೀ ಸುಷಮೆ ಬರೆದ ಆರ್ದ್ರತೆ, ರಸಿಕತೆಯ ಮೂರುತಿ – ಪು. ತಿ. ನ.

 

ಆದರೆ ಈಗ, ಕಡಲ ತೀರದ ಆ ಜಿಲ್ಲೆಗಳಲ್ಲಿ, ಶಿವಮೊಗ್ಗ ಸುತ್ತಿನ ಊರೂರಲ್ಲಿ, ಧಾರವಾಡದ ನುಗ್ಗಿಕೇರಿಯಲ್ಲಿ, ಕೋಲಾರದ ಮುಳಬಾಗಿಲಲ್ಲಿ, ಮೇಲುಕೋಟೆಯ ಚೆಲುವನ ಗುಡಿಯ ಮಂದಿಯಲ್ಲಿ – ಎಲ್ಲೆಲ್ಲೂ, ಎಲ್ಲೆಲ್ಲೋ – ಆಗಿರುವುದು, ಆಗುತ್ತಿರುವುದು, ಮತ್ತು ಆಗಲಿರುವುದನ್ನು ಕಂಡು ಅಲ್ಲಿ, ಯಾವ ದಿವ್ಯಲೋಕದಲ್ಲೋ, ಗೋಷ್ಠಿ ನಡೆಸುತ್ತಿರಬಹುದಾದ ಆ ನಮ್ಮ ಹಿರಿಯರಿಗೆಲ್ಲ ಹೇಗಾಗುತ್ತಿರಬೇಕು, ಕೇಳಿಕೊಳ್ಳುವುದು ಬೇಡ: ಆ ಲೋಕದಲ್ಲೂ ವಿಲಿವಿಲಿ ಒದ್ದಾಡುತ್ತಿರಬೇಕು ಅವರು.

ಆ ಅಂಥವರನ್ನು ಓದಿ, ಮೆಚ್ಚಿಕೊಂಡ ಜನರಿದ್ದೇವಲ್ಲ ನಾವು, ನೀವು… ಮಾತುಮಾತಿಗೆ ಅವರನ್ನು ನೆನೆಯುವ… ಅವರು ಆಡಿದ್ದನ್ನು, ಮಾಡಿದ್ದನ್ನು, ಬರೆದದ್ದನ್ನು ಎತ್ತಿ ಆಡುವ, ನಮ್ಮನಮ್ಮಲ್ಲೇ ಗುನುಗಿಕೊಳ್ಳುವ, ಮೆಲುಕು ಹಾಕುವ, ಭಾಷಣ ಬಿಗಿಯುವ, ಬರೆಯುವ, ಪಾಠಮಾಡುವ, ಪರೀಕ್ಷೆ ಪಾಸುಮಾಡಲು ಓದುವ… ಅವರೆಲ್ಲ ಬೆಳೆಸಿದ ಜನ ನಾವು, ನಾವಿದ್ದೇವಲ್ಲ… ಅವರ ಹೆಸರುಗಳನ್ನು ಹೇಳಿ ಬೀಗುವ ನಾವು, ಈ ನಾನು, ಈ ನೀವು… ನಾವು  ಈಗ ಏನು ಮಾಡಬೇಕು, ಯೋಚಿಸೋಣ ಕನ್ನಡಿಗರೇ, ಕರುನಾಡಿಗರೇ…

ಜನಿವಾರ ಹಾಕಿಕೊಂಡೋ ಹಾಕಿಕೊಳ್ಳದೆಯೋ ಗಾಯತ್ರಿ ಮಂತ್ರವನ್ನು ಬಲುಶ್ರದ್ಧೆಯಿಂದ ಮನನ ಮಾಡುವ, ಮಣಮಣಿಸುವ ನಾವು; ಶಿವದಾರ, ಕರಡಿಗೆ ಹಾಕಿಯೋ ಹಾಕಿಕೊಳ್ಳದೆಯೋ ಬಸವ ಬಳಗ, ಅಕ್ಕನ ಬಳಗ ಎಂದೆಲ್ಲ ಕಟ್ಟಿಕೊಂಡು ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ ಎಂದೆಲ್ಲ ಗಳಹುವ ನಾವು; ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ, ವಿಚಾರ ಕ್ರಾಂತಿಗೆ ಆಹ್ವಾನ, ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಮುಂತಾದ್ದೆಲ್ಲ ಓದಿಕೊಂಡವರು, ಪಾಠ ಮಾಡುವವರು, ಹೇಳಿಸಿಕೊಂಡವರು ಎನ್ನುತ್ತ, ಎಂದುಕೊಳ್ಳುತ್ತ ಉಬ್ಬುವ ನಾವು; ಬಾಳ್ವೆಯೇ ಬೆಳಕು ಎಂದು ಒದರುವ ನಾವು; ವಿಶ್ವಮಾತೆಯ ಗರ್ಭಕಮಲಜಾತ ಪರಾಗ ಪರಮಾಣು ಕೀರ್ತಿ ನಾನು ಎಂದು ನಾಟಕೀಯವಾಗಿ ಹೇಳುವ, ಹೇಳಿಸುವ ನಾವು — ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ? ಈ ನಮ್ಮವರ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಬೇಕಾದ ಧೈರ್ಯದ ಮಾತತ್ತಿರಲಿ, ಯೋಗ್ಯತೆಯನ್ನೂ ಕಳೆದುಕೊಳ್ಳುತ್ತಿದ್ದೇವಲ್ಲ ನಾವು…

ಅಡಿಗರ ಇಂದು ನಮ್ಮೀ ನಾಡು ಕವನ ಹೇಳುವಂತೆ, ಇಲ್ಲಿ:

ತೇರ ಹಿಡಿದೆಳೆದ ಕೈ, ಬಾಗಿ ಪೊಡಮಟ್ಟ ಮೈ
ಭಕ್ತಿ ತುಳುಕಾಡಿದ್ದ ಅಂತರಂಗ
ಈಗ ನರಕಕ್ಕೆ ಕೈಮರ, ಕರಡಿಗುಹೆ, ಘೋರ
ರಾಕ್ಷಸತೆ ಭೋರಿಡುವ ನಾಟ್ಯರಂಗ

ಅದು ಬೇಡ, ಬೇಡ. ಒಮ್ಮೆ ನಮ್ಮನಮ್ಮ ಮುಖವನ್ನು  ನಮ್ಮನಮ್ಮ ಒಳಗನ್ನಡಿಯಲ್ಲಿ ನಾವೇ ನೋಡಿಕೊಳ್ಳೋಣಲಂಕೇಶರ ದೇಶಭಕ್ತಗದ್ಯಗೀತೆ ಯನ್ನು ಉಸುರಿಕೊಳ್ಳುತ್ತ ನಮ್ಮನಮ್ಮ ಮುಸುಡಿಗೆ ನಾವೇ ಥೂ ಥೂ ಎನ್ನೋಣಚೊಕ್ಕವಾಗೋಣ. ಆಗಿ, ಮನೆಮಂದಿಯ ತಬ್ಬಿ ನಿಲ್ಲೋಣ.

ಕಡೆಯ ಮಾತು. ಕನ್ನಡಕ್ಕೆ ಎಂಟೆಂಟು ಜ್ಞಾನಪೀಠ ಪ್ರಶಸ್ತಿ ಬಂದಿದೆ, ಕರುನಾಡಿಗೆ ಸಂದ ಗೌರವ ಅದು, ಸವಿಗನ್ನಡಕ್ಕೆ ಸಂದ ಮನ್ನಣೆ ಎಂದೆಲ್ಲ ಹಿಗ್ಗುತ್ತೇವಲ್ಲ ನಾವು. ಯೋಚಿಸೋಣ, ಆ ಪ್ರಶಸ್ತಿ ಪಡೆದ ಮೊದಲ ಏಳು ಜನ ಈಗ ಇಲ್ಲಿ ಇದ್ದಿದ್ದರೆ ಒದ್ದಾಡುತ್ತಿದ್ದರು, ಆದರೆ ಖಂಡಿತಾ ಸುಮ್ಮನಿರುತ್ತಿರಲಿಲ್ಲ: ನಮ್ಮನಿಮ್ಮ ಆ ಮನೆಮಂದಿಯನ್ನು ಅಪ್ಪಿಕೊಂಡು, ಇಂದಿನ ಫ್ಯಾಶಿಸ್ಟರಿಗೆ ಖಂಡಿತಾ ಅಡ್ಡ ನಿಲ್ಲುತ್ತಿದ್ದರು ಅವರು.

ಈಗ ನಮ್ಮ ನಡುವೆ ಇರುವ ಜ್ಞಾನಪೀಠಸ್ಥರು ಒಬ್ಬರು ಮಾತ್ರ. ಆ ಹಿರಿಯರಿಂದ, ಮನೆಮಂದಿಯ ಕಾಯುವ ಸೊಲ್ಲೇ ಇಲ್ಲ, ಏಕೆ?

  • ರಘುನಂದನ

(ಲೇಖಕರು, ಕವಿ, ರಂಗನಿರ್ದೇಶಕರು, ಬೆಂಗಳೂರು)

*******


ಇದನ್ನೂ ಓದಿ: ಅಧ್ಯಾಪನದ ಧರ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಹೇಳಿದ ಮಾತುಗಳು ೧೦೦ಕ್ಕೆ ೧೦೦%ಸತ್ಯ ಸರ್ ಇದರ ಬಗ್ಗೆ ನಾವೆಲ್ಲ ಯೋಚಿಸಲೇ ಬೇಕು, ತಡೆಯಬೇಕು

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...