Homeಚಳವಳಿಇಂದು ನಮ್ಮೀ ನಾಡು…

ಇಂದು ನಮ್ಮೀ ನಾಡು…

ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ?

- Advertisement -
- Advertisement -

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ನೆಲ ಶಿವರಾಮ ಕಾರಂತ, ಕೋ. ಲ. ಕಾರಂತ,  ಬಿ. ವಿ. ಕಾರಂತ, ಗೋಪಾಲಕೃಷ್ಣ ಅಡಿಗ, ಸೇಡಿಯಾಪು ಕೃಷ್ಣಭಟ್ಟ ಅವರ ತವರು ನೆಲ; ಪಂಜೆ ಮಂಗೇಶರಾಯರ ತವರು ಆ ನೆಲ; ಗೊಲ್ಗೊಥಾ ಮತ್ತು ವೈಶಾಖಿ ಖಂಡಕಾವ್ಯಗಳನ್ನು ಬರೆದ ಗೋವಿಂದ ಪೈ ಅವರ ನೆಲ; ಲಕ್ಷ್ಮೀಶ ತೋಳ್ಪಾಡಿಯವರ  ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ ಮತ್ತು ಬೆಳಕಿಗೆ ನೆರಳಿತ್ತ ಸಂಗಾತಿ ಪುಸ್ತಕಗಳಿಂದಾಗಿ ನನ್ನಂಥವರ ಮನಮೀಟಿದ ಪುತ್ತೂರಿನ ಅಜ್ಜಂದಿರು ರಾಮಚಂದ್ರ ಭಟ್ಟ ಮತ್ತು ಇಸ್ಮಾಯಿಲ್ ಕುಂಞಪ್ಪ ಅವರ ಕರುಳ ಬೇರಿನ ಬೀಡು.

ರಾಮಚಂದ್ರ ಭಟ್ಟರು ಮತ್ತು ಇಸ್ಮಾಯಿಲ್ ಕುಂಞಪ್ಪ
Photo Courtesy: mysorepoetWordPress.com

ಶಿವಮೊಗ್ಗ ಜಿಲ್ಲೆ ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಪಿ. ಲಂಕೇಶ್, ಯು.ಆರ್. ಅನಂತಮೂರ್ತಿ ಮತ್ತು ಕೆ. ವಿ. ಸುಬ್ಬಣ್ಣ ಅವರು ಹುಟ್ಟಿ, ಬೆಳಗಿದ ನೆಲ. ನಿತ್ಯೋತ್ಸವ ಎಂಬ ಹಾಡನ್ನು ಬರೆದು ಕರ್ನಾಟಕದ ನೆಲವನ್ನು ಕೀರ್ತಿಸಿದ ನಿಸಾರ್ ಅಹಮದ್ ಅವರು ನೆಲೆಸಿ, ಒಲಿದು, ಒಲಿಸಿಕೊಂಡ ನೆಲ ಅದು, ಬೆಣ್ಣೆ ಕದ್ದ ನಮ್ಮ ಕೃಷ್ಣದಂಥ ಮುಪ್ಪಿಲ್ಲದ ಹಾಡುಗಳನ್ನು ಅವರು ಬರೆದ ನೆಲೆವೀಡು. ಪ್ರಭುದೇವ ಅಲ್ಲಮ ಹುಟ್ಟಿ, ಸಿದ್ಧನಾದದ್ದು, ಮಹದೇವಿಯಕ್ಕ ಹುಟ್ಟಿ, ಸಿದ್ಧಳಾದದ್ದು, ಅಲ್ಲಿ.

ಧಾರವಾಡ ಎಂದರೆ ನನ್ನಂಥವರಿಗೆ ಬೇಂದ್ರೆ, ಬೇಂದ್ರೆ, ಬೇಂದ್ರೆಯೇ. ಜೊತೆಗೆ, ಸಾತ್ತ್ವಿಕ ಹರಿಹರಿತ ಸವಾಲಿಗೆ ನಿಂತ ಆ ಘನಘನ ಶಂಬಾ, ಶಂಬಾ ಜೋಷಿ. ಮತ್ತು, ಅಣ್ಣ ಬಸವಣ್ಣನ ಒಕ್ಕಲು ತಾವೆಂಬವರ ವಿದ್ಯಾಕಾಶಿ.

ಕೋಲಾರ ಎಂದರೆ ಮಾಗಿದ ಮಾತು: ಮಾಸ್ತಿಯ ಅಯ್ಯ, ಡಿವಿಜಿ. ಕೋಲಾರ ಎಂದರೆ ಎದೆಮೀಟೊ ಹಾಡು:  ಕೈವಾರ ತಾತಯ್ಯ.

ಇನ್ನು ಮೇಲುಕೋಟೆ ಎಂದರೆ, ಅದೇ… ಅಹಲ್ಯೆ, ಗೋಕುಲನಿರ್ಗಮನ, ಮಲೆದೇಗುಲ, ಯದುಗಿರಿಯ ಮೌನವಿಕಾಸ, ಶರ್ವರೀ ಸುಷಮೆ ಬರೆದ ಆರ್ದ್ರತೆ, ರಸಿಕತೆಯ ಮೂರುತಿ – ಪು. ತಿ. ನ.

 

ಆದರೆ ಈಗ, ಕಡಲ ತೀರದ ಆ ಜಿಲ್ಲೆಗಳಲ್ಲಿ, ಶಿವಮೊಗ್ಗ ಸುತ್ತಿನ ಊರೂರಲ್ಲಿ, ಧಾರವಾಡದ ನುಗ್ಗಿಕೇರಿಯಲ್ಲಿ, ಕೋಲಾರದ ಮುಳಬಾಗಿಲಲ್ಲಿ, ಮೇಲುಕೋಟೆಯ ಚೆಲುವನ ಗುಡಿಯ ಮಂದಿಯಲ್ಲಿ – ಎಲ್ಲೆಲ್ಲೂ, ಎಲ್ಲೆಲ್ಲೋ – ಆಗಿರುವುದು, ಆಗುತ್ತಿರುವುದು, ಮತ್ತು ಆಗಲಿರುವುದನ್ನು ಕಂಡು ಅಲ್ಲಿ, ಯಾವ ದಿವ್ಯಲೋಕದಲ್ಲೋ, ಗೋಷ್ಠಿ ನಡೆಸುತ್ತಿರಬಹುದಾದ ಆ ನಮ್ಮ ಹಿರಿಯರಿಗೆಲ್ಲ ಹೇಗಾಗುತ್ತಿರಬೇಕು, ಕೇಳಿಕೊಳ್ಳುವುದು ಬೇಡ: ಆ ಲೋಕದಲ್ಲೂ ವಿಲಿವಿಲಿ ಒದ್ದಾಡುತ್ತಿರಬೇಕು ಅವರು.

ಆ ಅಂಥವರನ್ನು ಓದಿ, ಮೆಚ್ಚಿಕೊಂಡ ಜನರಿದ್ದೇವಲ್ಲ ನಾವು, ನೀವು… ಮಾತುಮಾತಿಗೆ ಅವರನ್ನು ನೆನೆಯುವ… ಅವರು ಆಡಿದ್ದನ್ನು, ಮಾಡಿದ್ದನ್ನು, ಬರೆದದ್ದನ್ನು ಎತ್ತಿ ಆಡುವ, ನಮ್ಮನಮ್ಮಲ್ಲೇ ಗುನುಗಿಕೊಳ್ಳುವ, ಮೆಲುಕು ಹಾಕುವ, ಭಾಷಣ ಬಿಗಿಯುವ, ಬರೆಯುವ, ಪಾಠಮಾಡುವ, ಪರೀಕ್ಷೆ ಪಾಸುಮಾಡಲು ಓದುವ… ಅವರೆಲ್ಲ ಬೆಳೆಸಿದ ಜನ ನಾವು, ನಾವಿದ್ದೇವಲ್ಲ… ಅವರ ಹೆಸರುಗಳನ್ನು ಹೇಳಿ ಬೀಗುವ ನಾವು, ಈ ನಾನು, ಈ ನೀವು… ನಾವು  ಈಗ ಏನು ಮಾಡಬೇಕು, ಯೋಚಿಸೋಣ ಕನ್ನಡಿಗರೇ, ಕರುನಾಡಿಗರೇ…

ಜನಿವಾರ ಹಾಕಿಕೊಂಡೋ ಹಾಕಿಕೊಳ್ಳದೆಯೋ ಗಾಯತ್ರಿ ಮಂತ್ರವನ್ನು ಬಲುಶ್ರದ್ಧೆಯಿಂದ ಮನನ ಮಾಡುವ, ಮಣಮಣಿಸುವ ನಾವು; ಶಿವದಾರ, ಕರಡಿಗೆ ಹಾಕಿಯೋ ಹಾಕಿಕೊಳ್ಳದೆಯೋ ಬಸವ ಬಳಗ, ಅಕ್ಕನ ಬಳಗ ಎಂದೆಲ್ಲ ಕಟ್ಟಿಕೊಂಡು ಸ್ಥಾವರಕ್ಕಳಿವುಂಟು, ಜಂಗಮಕ್ಕಳಿವಿಲ್ಲ ಎಂದೆಲ್ಲ ಗಳಹುವ ನಾವು; ಆತ್ಮಶ್ರೀಗಾಗಿ ನಿರಂಕುಶಮತಿಗಳಾಗಿ, ವಿಚಾರ ಕ್ರಾಂತಿಗೆ ಆಹ್ವಾನ, ಸಂಸ್ಕೃತಿ ಕ್ರಾಂತಿಗೆ ಕಹಳೆ ನಾಂದಿ ಮುಂತಾದ್ದೆಲ್ಲ ಓದಿಕೊಂಡವರು, ಪಾಠ ಮಾಡುವವರು, ಹೇಳಿಸಿಕೊಂಡವರು ಎನ್ನುತ್ತ, ಎಂದುಕೊಳ್ಳುತ್ತ ಉಬ್ಬುವ ನಾವು; ಬಾಳ್ವೆಯೇ ಬೆಳಕು ಎಂದು ಒದರುವ ನಾವು; ವಿಶ್ವಮಾತೆಯ ಗರ್ಭಕಮಲಜಾತ ಪರಾಗ ಪರಮಾಣು ಕೀರ್ತಿ ನಾನು ಎಂದು ನಾಟಕೀಯವಾಗಿ ಹೇಳುವ, ಹೇಳಿಸುವ ನಾವು — ನಮ್ಮ ಈ ನಾಡಿನ ನಮ್ಮಣ್ಣತಮ್ಮಂದಿರಾದ ನಬೀ-ಅಲಿ-ಮುಸ್ತಾಫಾ ಅವರಮೇಲೆ, ಮೆಲ್ವಿನ್-ಆಲ್ವಿನ್-ನಾರ್ಬರ್ಟ್ ಅವರಮೇಲೆ, ನಮ್ಮಕ್ಕತಂಗಿಯರಾದ ಫರೀದಾ-ಫಾತಿಮಾ-ಆಯಿಷಾ ಅವರಮೇಲೆ, ಆನ್ನಾ- ಜಸಿಂಡಾ-ಎಲೀಜಾ಼ ಅವರಮೇಲೆ ಫ್ಯಾಶಿಸ್ಟ್ ದಾಳಿ ನಡೆಯುತ್ತಿರುವಾಗ ಈ ನಮ್ಮವರನ್ನು ತಬ್ಬಿ ನಿಲ್ಲಬೇಕೆ,  ಇಲ್ಲ ನಮ್ಮ ಈ ಮನೆಯ ಮೇಲೆ, ಮನೆಮಂದಿಯ ಮೇಲೆ ದಾಳಿ ಆಗುತ್ತಿರುವುದನ್ನು ಕಂಡೂ ಕಾಣದವರಂತೆ ಮುಖ ತಿರುಗಿಸಿ ಇದ್ದುಬಿಡಬೇಕೆ? ಈ ನಮ್ಮವರ ಕಣ್ಣಲ್ಲಿ ಕಣ್ಣಿಟ್ಟು ನೋಡಲು ಬೇಕಾದ ಧೈರ್ಯದ ಮಾತತ್ತಿರಲಿ, ಯೋಗ್ಯತೆಯನ್ನೂ ಕಳೆದುಕೊಳ್ಳುತ್ತಿದ್ದೇವಲ್ಲ ನಾವು…

ಅಡಿಗರ ಇಂದು ನಮ್ಮೀ ನಾಡು ಕವನ ಹೇಳುವಂತೆ, ಇಲ್ಲಿ:

ತೇರ ಹಿಡಿದೆಳೆದ ಕೈ, ಬಾಗಿ ಪೊಡಮಟ್ಟ ಮೈ
ಭಕ್ತಿ ತುಳುಕಾಡಿದ್ದ ಅಂತರಂಗ
ಈಗ ನರಕಕ್ಕೆ ಕೈಮರ, ಕರಡಿಗುಹೆ, ಘೋರ
ರಾಕ್ಷಸತೆ ಭೋರಿಡುವ ನಾಟ್ಯರಂಗ

ಅದು ಬೇಡ, ಬೇಡ. ಒಮ್ಮೆ ನಮ್ಮನಮ್ಮ ಮುಖವನ್ನು  ನಮ್ಮನಮ್ಮ ಒಳಗನ್ನಡಿಯಲ್ಲಿ ನಾವೇ ನೋಡಿಕೊಳ್ಳೋಣಲಂಕೇಶರ ದೇಶಭಕ್ತಗದ್ಯಗೀತೆ ಯನ್ನು ಉಸುರಿಕೊಳ್ಳುತ್ತ ನಮ್ಮನಮ್ಮ ಮುಸುಡಿಗೆ ನಾವೇ ಥೂ ಥೂ ಎನ್ನೋಣಚೊಕ್ಕವಾಗೋಣ. ಆಗಿ, ಮನೆಮಂದಿಯ ತಬ್ಬಿ ನಿಲ್ಲೋಣ.

ಕಡೆಯ ಮಾತು. ಕನ್ನಡಕ್ಕೆ ಎಂಟೆಂಟು ಜ್ಞಾನಪೀಠ ಪ್ರಶಸ್ತಿ ಬಂದಿದೆ, ಕರುನಾಡಿಗೆ ಸಂದ ಗೌರವ ಅದು, ಸವಿಗನ್ನಡಕ್ಕೆ ಸಂದ ಮನ್ನಣೆ ಎಂದೆಲ್ಲ ಹಿಗ್ಗುತ್ತೇವಲ್ಲ ನಾವು. ಯೋಚಿಸೋಣ, ಆ ಪ್ರಶಸ್ತಿ ಪಡೆದ ಮೊದಲ ಏಳು ಜನ ಈಗ ಇಲ್ಲಿ ಇದ್ದಿದ್ದರೆ ಒದ್ದಾಡುತ್ತಿದ್ದರು, ಆದರೆ ಖಂಡಿತಾ ಸುಮ್ಮನಿರುತ್ತಿರಲಿಲ್ಲ: ನಮ್ಮನಿಮ್ಮ ಆ ಮನೆಮಂದಿಯನ್ನು ಅಪ್ಪಿಕೊಂಡು, ಇಂದಿನ ಫ್ಯಾಶಿಸ್ಟರಿಗೆ ಖಂಡಿತಾ ಅಡ್ಡ ನಿಲ್ಲುತ್ತಿದ್ದರು ಅವರು.

ಈಗ ನಮ್ಮ ನಡುವೆ ಇರುವ ಜ್ಞಾನಪೀಠಸ್ಥರು ಒಬ್ಬರು ಮಾತ್ರ. ಆ ಹಿರಿಯರಿಂದ, ಮನೆಮಂದಿಯ ಕಾಯುವ ಸೊಲ್ಲೇ ಇಲ್ಲ, ಏಕೆ?

  • ರಘುನಂದನ

(ಲೇಖಕರು, ಕವಿ, ರಂಗನಿರ್ದೇಶಕರು, ಬೆಂಗಳೂರು)

*******


ಇದನ್ನೂ ಓದಿ: ಅಧ್ಯಾಪನದ ಧರ್ಮ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನೀವು ಹೇಳಿದ ಮಾತುಗಳು ೧೦೦ಕ್ಕೆ ೧೦೦%ಸತ್ಯ ಸರ್ ಇದರ ಬಗ್ಗೆ ನಾವೆಲ್ಲ ಯೋಚಿಸಲೇ ಬೇಕು, ತಡೆಯಬೇಕು

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....