Homeಕರ್ನಾಟಕಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

- Advertisement -
- Advertisement -

ಕೋಲಾರದ ಮುಳಬಾಗಿಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಲದ ಗುಂಡಿ ಸ್ವಚ್ಛತೆ ಹಾಗೂ ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಸ್ವಚ್ಛತೆ ಪ್ರಕರಣದ ಬಳಿಕ ಇದೀಗ ಶಿವಮೊಗ್ಗದಲ್ಲೂ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದ್ದು, ಭದ್ರಾವತಿಯ ನೇರಲೆಕೆರೆ ಶಾಲಾ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿದೆ. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ಮಾದರಿಯ ಅಮಾನವೀಯ ಘಟನೆ ಕಳೆದವಾರ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಬಹಿರಂಗವಾಗಿದೆ.

ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದ್ದು, ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಮುಖಂಡರು ಶಿವಮೊಗ್ಗದ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದ್ದಾರೆ. ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿರುವ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘಟನೆ ಮುಖಂಡರು ಮತ್ತು ಪೋಷಕರು ಆಗ್ರಹಿಸಿದ್ದಾರೆ.

ತಿಂಗಳೊಂದರಲ್ಲೇ ಇದು ಮೂರನೇ ಘಟನೆ!

ಕಳೆದ ವಾರ ರಾಜ್ಯ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಇದರಿಂದ ಆಕ್ರೋಶಗೊಂಡ ಪಾಲಕರು ಹಾಗೂ ಕಾರ್ಯಕರ್ತರು ನಗರದ ಅಂದ್ರಹಳ್ಳಿಯ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಅಂದ್ರಹಳ್ಳಿ ಪ್ರಕರಣದ ಕುರಿತು ಮಾತನಾಡಿದ್ದ ಮಧು ಬಂಗಾರಪ್ಪ, ‘ಅಮಾನವೀಯ’ ಎಂದು ಖಂಡಿಸಿದ್ದರು.

ಬೆಂಗಳೂರಿನಲ್ಲಿ ನಡೆದಿದ್ದ ಅಮಾನವೀಯ ಘಟನೆಯ ನಂತರ ಶಿಕ್ಷಣ ಇಲಾಖೆಯು ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳ ಸಭೆ ನಡೆಸಿ, ಮಕ್ಕಳನ್ನು ಅಂತಹ ಕೆಲಸಕ್ಕೆ ಒತ್ತಾಯಿಸುವವರಿಗೆ ಎಚ್ಚರಿಕೆ ನೀಡಿದರು.

‘ಎನ್ಎಸ್ಎಸ್ ಮತ್ತು ಸೇವಾದಳ ಶಿಬಿರಗಳಲ್ಲಿ ಉದ್ಯಾನವನ್ನು ಸ್ವಚ್ಛಗೊಳಿಸಲು ಅಥವಾ ಸಸಿಗಳನ್ನು ನೆಡಲು ಮಕ್ಕಳಿಗೆ ತರಬೇತಿ ನೀಡುತ್ತೇವೆ. ಆದರೆ, ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನಾವು ಮಕ್ಕಳಿಗೆ ಅನುಮತಿ ನೀಡಿರಲಿಲ್ಲ’ ಎಂದು ಹೇಳಿದ್ದರು.

ಬೆಂಗಳೂರು ಮತ್ತು ಶಿವಮೊಗ್ಗ ಘಟನೆಗಳ ಮೊದಲು, ಕೋಲಾರ ಜಿಲ್ಲೆಯ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಈಗಾಗಲೇ ಬಂಧಿಸಲಾಗಿದೆ. ನಾಲ್ವರು ಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಇದನ್ನೂ ಓದಿ; ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡ್ರಗ್ ದೊರೆ ‘ಎಲ್ ಮೆಂಚೊ’ ಹತ್ಯೆ : ಮೆಕ್ಸಿಕೋದಲ್ಲಿ ಭುಗಿಲೆದ್ದ ಹಿಂಸಾಚಾರ

'ಎಲ್ ಮೆಂಚೊ' ಎಂದೇ ಪರಿಚಿತನಾಗಿದ್ದ ಡ್ರಗ್ ದೊರೆ ನೆಮೆಸಿಯೊ ಒಸೆಗುಯೆರಾನನ್ನು ಕಾರ್ಯಾಚರಣೆಯೊಂದರಲ್ಲಿ ಕೊಂದಿರುವುದಾಗಿ ಮೆಕ್ಸಿಕನ್ ಸೇನೆ ಭಾನುವಾರ (ಫೆ.22) ಘೋಷಿಸಿದೆ. ಆ ಬಳಿಕ ದೇಶದ ವಿವಿಧ ಭಾಗಗಳಲ್ಲಿ ಭಾರೀ ಹಿಂಸಾಚಾರ ಭುಗಿಲೆದ್ದಿದೆ ಎಂದು...

ನೇಪಾಳ ಬಸ್ ಅಪಘಾತ: ಧಾಡಿಂಗ್‌ನಲ್ಲಿ ತ್ರಿಶೂಲಿ ನದಿಗೆ ಬಸ್ ಬಿದ್ದು 18 ಮಂದಿ ಸಾವು; ಮುಂದುವರಿದ ರಕ್ಷಣಾ ಕಾರ್ಯಾಚರಣೆ

ಧಾಡಿಂಗ್ (ನೇಪಾಳ): ಸೋಮವಾರ ಮುಂಜಾನೆ ನೇಪಾಳದ ಧಾಡಿಂಗ್‌ನಲ್ಲಿ ಪ್ರಯಾಣಿಕರ ಬಸ್ ತ್ರಿಶೂಲಿ ನದಿಗೆ ಉರುಳಿಬಿದ್ದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದಲ್ಲಿ 24 ಕ್ಕೂ ಹೆಚ್ಚು ಪ್ರಯಾಣಿಕರು...

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...