Homeಕರ್ನಾಟಕಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛತೆ; ಶಿಕ್ಷಣ ಸಚಿವರ ತವರಿನಲ್ಲೇ ಬೆಳಕಿಗೆ ಬಂತು ಮತ್ತೊಂದು ಪ್ರಕರಣ!

- Advertisement -
- Advertisement -

ಕೋಲಾರದ ಮುಳಬಾಗಿಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಲದ ಗುಂಡಿ ಸ್ವಚ್ಛತೆ ಹಾಗೂ ಬೆಂಗಳೂರಿನ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶೌಚಾಲಯ ಸ್ವಚ್ಛತೆ ಪ್ರಕರಣದ ಬಳಿಕ ಇದೀಗ ಶಿವಮೊಗ್ಗದಲ್ಲೂ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿರುವ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೇ ಈ ಘಟನೆ ನಡೆದಿದ್ದು, ಭದ್ರಾವತಿಯ ನೇರಲೆಕೆರೆ ಶಾಲಾ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿದೆ. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ಮಾದರಿಯ ಅಮಾನವೀಯ ಘಟನೆ ಕಳೆದವಾರ ಬೆಂಗಳೂರಿನಲ್ಲಿ ನಡೆದಿತ್ತು. ಇದೀಗ ಶಿವಮೊಗ್ಗದಲ್ಲಿ ನಡೆದಿರುವ ಘಟನೆ ಬಹಿರಂಗವಾಗಿದೆ.

ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ ಎನ್ನಲಾಗಿದ್ದು, ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಮುಖಂಡರು ಶಿವಮೊಗ್ಗದ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದ್ದಾರೆ. ಮಕ್ಕಳನ್ನು ದುರ್ಬಳಕೆ ಮಾಡಿಕೊಂಡಿರುವ ಶಿಕ್ಷಕರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಸಂಘಟನೆ ಮುಖಂಡರು ಮತ್ತು ಪೋಷಕರು ಆಗ್ರಹಿಸಿದ್ದಾರೆ.

ತಿಂಗಳೊಂದರಲ್ಲೇ ಇದು ಮೂರನೇ ಘಟನೆ!

ಕಳೆದ ವಾರ ರಾಜ್ಯ ರಾಜಧಾನಿ ಬೆಂಗಳೂರಿನ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವುದು ಕಂಡುಬಂದಿದೆ. ಇದರಿಂದ ಆಕ್ರೋಶಗೊಂಡ ಪಾಲಕರು ಹಾಗೂ ಕಾರ್ಯಕರ್ತರು ನಗರದ ಅಂದ್ರಹಳ್ಳಿಯ ಶಾಲೆಯ ಮುಂದೆ ಪ್ರತಿಭಟನೆ ನಡೆಸಿದ್ದರು. ಅಂದ್ರಹಳ್ಳಿ ಪ್ರಕರಣದ ಕುರಿತು ಮಾತನಾಡಿದ್ದ ಮಧು ಬಂಗಾರಪ್ಪ, ‘ಅಮಾನವೀಯ’ ಎಂದು ಖಂಡಿಸಿದ್ದರು.

ಬೆಂಗಳೂರಿನಲ್ಲಿ ನಡೆದಿದ್ದ ಅಮಾನವೀಯ ಘಟನೆಯ ನಂತರ ಶಿಕ್ಷಣ ಇಲಾಖೆಯು ಶಾಲಾ ಮುಖ್ಯೋಪಾಧ್ಯಾಯರನ್ನು ಅಮಾನತುಗೊಳಿಸಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಧಿಕಾರಿಗಳ ಸಭೆ ನಡೆಸಿ, ಮಕ್ಕಳನ್ನು ಅಂತಹ ಕೆಲಸಕ್ಕೆ ಒತ್ತಾಯಿಸುವವರಿಗೆ ಎಚ್ಚರಿಕೆ ನೀಡಿದರು.

‘ಎನ್ಎಸ್ಎಸ್ ಮತ್ತು ಸೇವಾದಳ ಶಿಬಿರಗಳಲ್ಲಿ ಉದ್ಯಾನವನ್ನು ಸ್ವಚ್ಛಗೊಳಿಸಲು ಅಥವಾ ಸಸಿಗಳನ್ನು ನೆಡಲು ಮಕ್ಕಳಿಗೆ ತರಬೇತಿ ನೀಡುತ್ತೇವೆ. ಆದರೆ, ಶೌಚಾಲಯಗಳನ್ನು ಸ್ವಚ್ಛಗೊಳಿಸಲು ನಾವು ಮಕ್ಕಳಿಗೆ ಅನುಮತಿ ನೀಡಿರಲಿಲ್ಲ’ ಎಂದು ಹೇಳಿದ್ದರು.

ಬೆಂಗಳೂರು ಮತ್ತು ಶಿವಮೊಗ್ಗ ಘಟನೆಗಳ ಮೊದಲು, ಕೋಲಾರ ಜಿಲ್ಲೆಯ ವಸತಿ ಶಾಲೆಯ ಪ್ರಾಂಶುಪಾಲರು ಮತ್ತು ಶಿಕ್ಷಕರನ್ನು ಈಗಾಗಲೇ ಬಂಧಿಸಲಾಗಿದೆ. ನಾಲ್ವರು ಗುತ್ತಿಗೆ ಸಿಬ್ಬಂದಿಯನ್ನು ವಜಾಗೊಳಿಸಲಾಗಿದೆ.

ಇದನ್ನೂ ಓದಿ; ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿ 22 ಕಾರು ಖರೀದಿಸಿ ಅಡಗಿಸಿಟ್ಟಿದ್ದ ಕೆಸಿಆರ್: ರೇವಂತ್ ರೆಡ್ಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...

ಬಹುತೇಕ ಧರ್ಮಗಳು ಲಿಂಗ ಸಮಾನತೆಯನ್ನು ಗುರುತಿಸಲು ಹಿಂಜರಿಯುತ್ತವೆ: ಎಂ. ಎ. ಬೇಬಿ

ಸಾರ್ವಜನಿಕ ಸ್ಥಳಗಳಲ್ಲಿ ಮಹಿಳೆಯರ ಉಪಸ್ಥಿತಿಯ ಮೇಲೆ ನಿರ್ಬಂಧಗಳನ್ನು ಹೇರಬೇಕೆಂದು ಪ್ರತಿಪಾದಿಸಿದ್ದ ಇಸ್ಲಾಮಿಕ್ ಪಂಡಿತ ಕಾಂತಪುರಂ ಎ.ಪಿ. ಅಬೂಬಕರ್ ಮುಸ್ಲಿಯಾರ್ ಅವರ ಹೇಳಿಕೆಯನ್ನು ಸಿಪಿಐ(ಎಂ) ಪ್ರಧಾನ ಕಾರ್ಯದರ್ಶಿ ಎಂ. ಎ. ಬೇಬಿ ಅವರು ತೀವ್ರವಾಗಿ...

ಭಾಗವತ್ ಕಾರ್ಯಕ್ರಮಕ್ಕೆ ಅಮೆರಿಕದ ಧಾರ್ಮಿಕ ನಾಯಕರ ತೀವ್ರ ಆಕ್ಷೇಪ: ‘ನಮ್ಮನ್ನು ತಪ್ಪುದಾರಿಗೆಳೆದು ಆರ್‌ಎಸ್‌ಎಸ್ ಕಾರ್ಯಕ್ರಮಕ್ಕೆ ಕರೆಸಲಾಗಿತ್ತು’ ಎಂದು ಆರೋಪ

ನ್ಯೂಯಾರ್ಕ್: ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ನ್ಯೂಯಾರ್ಕ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಕಾಣಿಸಿಕೊಂಡಿದ್ದ ಇಬ್ಬರು ಅಮೆರಿಕದ ಧಾರ್ಮಿಕ ಮುಖಂಡರು, ಕಾರ್ಯಕ್ರಮದ ನೈಜ ಉದ್ದೇಶ ಮತ್ತು ಭಾಗವತ್ ಅವರ ಭಾಗವಹಿಸುವಿಕೆ...

ನೈತಿಕ ಹೊಣೆ ಹೊತ್ತು ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡಲಿ: ಎಚ್.ಡಿ. ಕುಮಾರಸ್ವಾಮಿ

ಕೆಪಿಎಸ್‌ಸಿ (KPSC) ಸಹಾಯಕ ಕಾರ್ಯಪಾಲಕ ಅಭಿಯಂತರ (AEE) ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಗೆ ತೀವ್ರ ಒತ್ತಡ ಹೇರಿರುವ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ, ಈ...