Homeಕರ್ನಾಟಕಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

- Advertisement -
- Advertisement -

ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೈಯ್ಯಲ್ಲಿ ಶೌಚಾಲಯ ಸ್ವಚ್ಛತೆ ಮತ್ತು ಶೌಚಗುಂಡಿಯ ಸ್ವಚ್ಛತೆ ಮಾಡಿಸುತ್ತಿರುವ ಘಟನೆ ಒಂದರ ಹಿಂದೆ ಒಂದರಂತೆ ಬೆಳಕಿಗೆ ಬರುತ್ತಿರುವ ಹಿನ್ನೆಲೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ವಿದ್ಯಾರ್ಥಿಗಳಿಂದ ಶೌಚಾಲಯ ಸ್ವಚ್ಛತೆ ಮಾಡಿಸದಂತೆ ಸುತ್ತೋಲೆ ಹೊರಡಿಸಿದೆ.

ಶಿಕ್ಷಣ ಇಲಾಖೆ ಆಯುಕ್ತರಾದ ಬಿ.ಬಿ.ಕಾವೇರಿ ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಶಿಕ್ಷಣ ಇಲಾಖೆಯ ಅಧಿಕಾರಿಗಳು, ಶಾಲಾ ಮುಖ್ಯ ಶಿಕ್ಷಕರು ಮತ್ತು ಸಿಬ್ಬಂದಿಗಳು ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯ ಸ್ವಚ್ಛತೆಗೆ ಬಳಸಿಕೊಂಡಲ್ಲಿ ಎಫ್‍ಐಆರ್ ದಾಖಲಿಸುವುದಾಗಿ ಹೇಳಿದ್ದಾರೆ.

ಇಲಾಖೆಯಿಂದ ಹೊರಡಿಸಲಾಗುವ ಸೂಚನೆ, ನಿರ್ದೇಶನಗಳನ್ನು ಕಟ್ಟು ನಿಟ್ಟಾಗಿ ಪಾಲಿಸಬೇಕು.  ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಲ್ಲಿ ತೊಡಗಿಸಿಕೊಳ್ಳುವಂತಹ ಪ್ರಕರಣಗಳು ಮರುಕಳಿಸದಂತೆ ಸೂಕ್ತ ಎಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಶಾಲೆಗಳಲ್ಲಿ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಚಟುವಟಿಕೆಗಳಲ್ಲಿ ಹಾಗೂ ಕ್ರೀಡಾ ಚಟುವಟಿಕೆಗಳಲ್ಲಿ ಮಾತ್ರ ತೊಡಗಿಸಿಕೊಳ್ಳಬೇಕಾಗುತ್ತದೆ. ವಿದ್ಯಾರ್ಥಿಗಳನ್ನು ಶೌಚಾಲಯಗಳ ಸ್ವಚ್ಛತೆಯಂತಹ ಕಾರ್ಯಗಳಿಂದ ದೂರವಿರಿಸುವುದು ಅಧಿಕಾರಿಗಳ, ಮುಖ್ಯ ಶಿಕ್ಷಕರ, ಸಿಬ್ಬಂದಿಯ ಕರ್ತವ್ಯ. ಸರ್ಕಾರಿ ಮಾತ್ರವಲ್ಲದೆ ಖಾಸಗಿ ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ ಸಹ ಇಂತಹ ಯಾವುದೇ ಪ್ರಕರಣಗಳು ನಡೆಯಬಾರದು ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

ಶಾಲೆಗೆ ನೀಡುತ್ತಿರುವ ಅನುದಾನವನ್ನು ಪ್ರಥಮ ಪ್ರಾಶಸ್ತ್ರದಲ್ಲಿ ಶೌಚಾಲಯಗಳ ಸ್ವಚ್ಛತಾ ಕಾರ್ಯಗಳಿಗೆ ಬಳಸಿಕೊಂಡು ಆಯಾ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ(ಎಸ್‌ಡಿಎಂಸಿ) ಸಹಕಾರದೊಂದಿಗೆ, ಸ್ಥಳೀಯವಾಗಿ ಲಭ್ಯವಿರುವ ಸಂಪನ್ಮೂಲಗಳನ್ನು ಬಳಸಿಕೊಂಡು ಶೌಚಾಲಯಗಳ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಬೇಕು .ಶಾಲೆಗಳಿಗೆ ಕಾಲ-ಕಾಲಕ್ಕೆ ಖುದ್ದು ಭೇಟಿ ನೀಡಿ ಶಾಲೆಗಳಲ್ಲಿ ಹೆಣ್ಣು ಮತ್ತು ಗಂಡು ಮಕ್ಕಳಿಗೆ ಪ್ರತ್ಯೇಕವಾದ ಬಳಕೆಗೆ ಯೋಗ್ಯವಾದ ಶೌಚಾಲಯಗಳು ಲಭ್ಯವಿರುವುದನ್ನು ಪರಿಶೀಲಿಸಬೇಕು. ಶಾಲಾ ಅವಧಿಯಲ್ಲಿ  ಶೌಚಾಲಯಗಳಿಗೆ ಬೀಗ ಹಾಕದೆ ವಿದ್ಯಾರ್ಥಿಗಳ ಉಪಯೋಗಕ್ಕೆ ಅವಕಾಶ ಕಲ್ಪಿಸಿರುವುದನ್ನು ಖುದ್ದಾಗಿ ಪರಿಶೀಲಿಸಿ ಖಚಿತಪಡಿಸಿಕೊಳ್ಳಿ ಎಂದು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳಿಗೂ ಕೂಡ ಸೂಚಿಸಲಾಗಿದೆ.

ಶಾಲೆಯಲ್ಲಿ ಪರಿಶೀಲನೆ ವೇಳೆ ವಿದ್ಯಾರ್ಥಿಗಳನ್ನು ಶಾಲಾ ಶೌಚಾಲಯಗಳ ಸ್ವಚ್ಛತೆಯಲ್ಲಿ ಬಳಸಿಕೊಂಡಿರುವುದು ಗಮನಕ್ಕೆ ಬಂದಲ್ಲಿ ತಕ್ಷಣವೇ ಕ್ರಮವಹಿಸಲು ಅನುವಾಗುವಂತೆ ಸಂಬಂಧಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಹಾಗೂ ಉಪನಿರ್ದೇಶಕರಿಗೆ(ಆಡಳಿತ) ತಕ್ಷಣ ವರದಿ ಮಾಡಲು ಶಾಲಾ ಉಸ್ತುವಾರಿ ಹಾಗೂ ಮೇಲ್ವಿಚಾರಣೆಗೆ ಸಂಬಂಧಿಸಿದ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ತಿಳಿಸಲಾಗಿದೆ.

ಕಳೆದ ಕೆಲವು ದಿನಗಳ ಹಿಂದೆ ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಯಲುವಳ್ಳಿ ಮೊರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳನ್ನು ಶೌಚಗುಂಡಿಗೆ ಇಳಿಸಿದ ಪ್ರಕರಣ ಬೆಳಕಿಗೆ ಬಂದಿತ್ತು.  ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಾಂಶುಪಾಲೆ ಭಾರತಮ್ಮ, ಸಹ ಶಿಕ್ಷಕ ಮುನಿಯಪ್ಪ ಅವರನ್ನು ಕೋಲಾರ ಪೊಲೀಸರು ಬಂಧಿಸಿದ್ದರು.

ಇದರ ಬೆನ್ನಲ್ಲೆ ಬೆಂಗಳೂರಿನ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಂದ್ರಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿಕೊಂಡಿರುವ ಘಟನೆ ಬಯಲಾಗಿತ್ತು. ಕಲಿಯುವುದಕ್ಕೆಂದು ಶಾಲೆಗೆ ಬರುವ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸುವುದು ಹೇಯ ಕೃತ್ಯ ಎಂದು ಸಾರ್ವಜನಿಕರು ಶಾಲಾ ಸಿಬ್ಬಂದಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು.

ಇದಾದ ಬಳಿಕ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆ ಶಿವಮೊಗ್ಗದ ಭದ್ರಾವತಿಯ ನೇರಲೆಕೆರೆ ಶಾಲೆಯಲ್ಲಿ ಮಕ್ಕಳು ಶೌಚಾಲಯಗಳನ್ನು ಸ್ವಚ್ಛಗೊಳಿಸುತ್ತಿರುವ ವೀಡಿಯೊ ಆನ್‌ಲೈನ್‌ನಲ್ಲಿ ವ್ಯಾಪಕವಾಗಿ ಹರಡಿತ್ತು. ವಿಡಿಯೋ ನೋಡಿ ಆಕ್ರೋಶಗೊಂಡ ಪೋಷಕರು ಪ್ರತಿಭಟನೆ ನಡೆಸಿದ್ದರು. ಇದೀಗ ಒಂದರ ಹಿಂದೆ ಒಂದರಂತೆ ಘಟನೆಗಳು ಬಯಲಾಗುತ್ತಿದ್ದಂತೆ ರಾಜ್ಯ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಸುತ್ತೋಲೆ ಹೊರಡಿಸಿದೆ.

ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ:

ಈ ಮೊದಲು ಮಾತನಾಡಿದ್ದ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಪ್ರಸ್ತುತ ವರ್ಷದಿಂದ ಶಾಲೆಗಳಿಗೆ ಹೆಚ್ಚಿನ ಅನುದಾನ ನೀಡಲಾಗುವುದು. ಅದನ್ನು ಶೌಚಾಲಯದ ಶುಚಿತ್ವ ಹಾಗೂ ನಿರ್ವಹಣೆಗೆ ಬಳಸಬೇಕೆಂದು ಶೀಘ್ರ ಆದೇಶ ಹೊರಡಿಸಲಾಗುವುದು. ಶಾಲೆಗಳಲ್ಲಿ ಮಕ್ಕಳು ಶೌಚಾಲಯ ಶುಚಿಗೊಳಿಸುವುದನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ಇದರ ನಿಯಂತ್ರಣಕ್ಕೆ ಶಾಲಾಭಿವೃದ್ಧಿ ಸಮಿತಿ ಮತ್ತು ಶಾಲೆ ಜಂಟಿಯಾಗಿ ಕಾರ್ಯನಿರ್ವಹಿಸಲು ಹೊಸ ಆದೇಶ ಹೊರಡಿಸಲಾಗುವುದು ಎಂದು ಹೇಳಿದ್ದರು.

ಇದನ್ನು ಓದಿ: ಮರಗಳ್ಳತನ ಪ್ರಕರಣ: ಬಿಜೆಪಿ ಸಂಸದ ಪ್ರತಾಪ್ ಸಿಂಹ ಸಹೋದರನ ಬಂಧನ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನ್ ಗಡಿಯಲ್ಲಿ ಪಾಕಿಸ್ತಾನ ವೈಮಾನಿಕ ದಾಳಿ : 20ಕ್ಕೂ ಹೆಚ್ಚು ಜನರು ಸಾವನ್ನಪ್ಪಿರುವ ಶಂಕೆ

ಅಫ್ಘಾನಿಸ್ತಾನದ ಗಡಿ ಪ್ರದೇಶಗಳಲ್ಲಿ ಪಾಕಿಸ್ತಾನ ಭಾನುವಾರ (ಫೆ.22) ಭಾರೀ ವೈಮಾನಿಕ ದಾಳಿ ನಡೆಸಿರುವುದಾಗಿ ವರದಿಯಾಗಿದೆ. ಪಾಕಿಸ್ತಾನದ ವಾಯುಪಡೆಯು ಅಫ್ಘಾನಿಸ್ತಾನದ ಪಕ್ತಿಕಾ ಮತ್ತು ನಂಗರ್ಹಾರ್ ಪ್ರಾಂತ್ಯಗಳಲ್ಲಿರುವ ಏಳು ಸಶಸ್ತ್ರ ಗುಂಪುಗಳ ಅಡಗುತಾಣಗಳ ಮೇಲೆ ದಾಳಿ ನಡೆಸಿದೆ...

ಹೊಸ ಜಾಗತಿಕ ಸುಂಕವನ್ನು ಶೇ.15ಕ್ಕೆ ಏರಿಸಿದ ಟ್ರಂಪ್

ಪ್ರತಿ ಸುಂಕ ನೀತಿಯನ್ನು ರದ್ದುಗೊಳಿಸಿದ್ದ ಸುಪ್ರೀಂ ಕೋರ್ಟ್ ಆದೇಶಕ್ಕೆ ಸೆಡ್ಡು ಹೊಡೆದು, ಎಲ್ಲಾ ದೇಶಗಳ ಆಮದಿನ ಮೇಲೆ ಹೊಸದಾಗಿ 10 ಶೇಕಡ ಜಾಗತಿಕ ಸುಂಕ ಘೋಷಿಸಿದ್ದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಶನಿವಾರ...

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...