Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ರವಿ ಕುಮಾರ್‌‌ ದಹಿಯಾ ಅವರು ರಷ್ಯಾ ಒಲಿಂಪಿಕ್ಸ್‌ ಸಮಿತಿಯ ಜೌರ್ ಉಗುವ್ ಅವರ ವಿರುದ್ದ 4-7 ಅಂತರದಲ್ಲಿ ಸೋಲುಂಡಿದ್ದಾರೆ. ಈ ಮೂಲಕ ಅವರು ಪಂದ್ಯದಲ್ಲಿ ಬೆಳ್ಳಿಗೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಬುಧವಾರ ನಡೆದ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ರವಿ ದಹಿಯಾ ಭರ್ಜರಿ ಜಯಗಳಿಸಿದ್ದರು.

ಸುಶೀಲ್ ಕುಮಾರ್ ನಂತರ ಒಲಿಂಪಿಕ್ ಬೆಳ್ಳಿ ಗೆದ್ದ 2 ನೇ ಭಾರತೀಯ ಎಂಬ ಗೌರವಕ್ಕೆ ಕುಸ್ತಿಪಟು ರವಿ ಕುಮಾರ್ ದಹಿಯಾ ಅವರು ಪಾತ್ರರಾಗಿದ್ದಾರೆ. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಬೆಳ್ಳಿಗೆ ತೃಪ್ತಿಪಟ್ಟಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇದು ಭಾರತದ ಎರಡನೇ ಬೆಳ್ಳಿ ಮತ್ತು ಐದನೇ ಪದಕವಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಒಲಿಂಪಿಕ್-ಭಾರತಕ್ಕೆ ಕೈಜಾರಿದ ಚಿನ್ನ; ಬೆಳ್ಳಿಗೆ ಸಮಾಧಾನ ಪಟ್ಟುಕೊಂಡ ರವಿ ದಹಿಯಾ | Naanu Gauri
PC: Reuters / Leah Millis

ಟೋಕಿಯೊ-2020 ಒಲಿಂಪಿಕ್ಸ್‌ನಲ್ಲಿ ಭಾರತವು ಪ್ರಸ್ತತ 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಇದುವರೆಗೂ ಗೆದ್ದುಕೊಂಡಿದೆ. ಒಲಿಂಪಿಕ್ಸ್‌ ಮುಗಿಯಲು ಇನ್ನೂ 3 ದಿನಗಳು ಬಾಕಿಯಿದೆ.

ಫೈನಲ್‌‌ ಪಂದ್ಯದಲ್ಲಿ ರವಿ ಕುಮಾರ್ ಮೊದಲ ಸುತ್ತಿನಲ್ಲಿ 0-2 ಹಿನ್ನಡೆಯಲ್ಲಿದ್ದರು. ಮೊದಲ ಸುತ್ತು ಮುಗಿಯುವ ಹೊತ್ತಿಗೆ ಅವರು ತನ್ನ ಅಂಕವನ್ನು 2-4 ಏರಿಸಿದ್ದರು.

ಜೌರ್ ಉಗುವ್ ನಂತರ 7-2 ರ ಮುನ್ನಡೆ ಸಾಧಿಸಿದರು, ಆದರೂ ರವಿಕುಮಾರ್ 2 ಪಾಯಿಂಟ್‌ಗಳನ್ನು ತನ್ನ ತೆಕ್ಕೆಗೆ ಸೇರಿಸಿದರು. ಆದರೆ ಮೂರು ಅಂಕಗಳ ಕೊರತೆಯನ್ನು ನೀಗಿಸಲು ಅವರು ವಿಫಲವಾದರು.

ಇಂದು ಬೆಳಿಗ್ಗೆ ಭಾರತೀಯ ಪುರುಷರ ಹಾಕಿ ತಂಡವು  ಜರ್ಮನಿಯನ್ನು 5-4 ಅಂತರದಲ್ಲಿ ಸೋಲಿಸಿ ಕಂಚನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...

ಜನಾಂಗೀಯ ದ್ವೇಷ: ಅಮೆರಿಕಾದ ಸ್ಯಾನ್ ಡಿಯಾಗೋ ಮಸೀದಿ ಸಂಕೀರ್ಣದಲ್ಲಿ ಗುಂಡಿನ ದಾಳಿ: ಮೂವರು ಸಾವು

ಸ್ಯಾನ್ ಡಿಯಾಗೋ: ಅಮೆರಿಕದ ಸ್ಯಾನ್ ಡಿಯಾಗೋ ನಗರದ ಇಸ್ಲಾಮಿಕ್ ಸೆಂಟರ್ ಆಫ್ ಸ್ಯಾನ್ ಡಿಯಾಗೋ (ICSD) ಮಸೀದಿ ಸಂಕೀರ್ಣದಲ್ಲಿ ಸೋಮವಾರ ನಡೆದ ಗುಂಡಿನ ದಾಳಿಯಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಈ ಘಟನೆಯನ್ನು ಸಂಭಾವ್ಯ...

ರಸ್ತೆಗಳಲ್ಲಿ ಮುಕ್ತವಾಗಿ ಓಡಾಡುವುದು ಜನರ ಹಕ್ಕು: ಬೀದಿ ನಾಯಿಗಳ ದಯಾಮರಣಕ್ಕೂ ಸುಪ್ರೀಂ ಅಸ್ತು

ಸುಪ್ರೀಂ ಕೋರ್ಟ್ ಇಂದು (ಮೇ 19, ಮಂಗಳವಾರ) ಬೀದಿ ನಾಯಿಗಳ ನಿಯಂತ್ರಣ ಮತ್ತು ನಿರ್ವಹಣೆಗೆ ಸಂಬಂಧಿಸಿದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬೀದಿ ನಾಯಿಗಳ ದಾಳಿಯಿಂದಾಗಿ ಸಾರ್ವಜನಿಕರು...

ಹರಿಯಾಣದ ಕಾರ್ಮಿಕ ನಾಯಕ ಅಜಿತ್ ಸಿಂಗ್ ಬಂಧನ ‘ಅಕ್ರಮ’ ಎಂದ ಕೋರ್ಟ್; ಜಾಮೀನು ಮಂಜೂರು

ಬೆಲ್ಸೋನಿಕಾ ಆಟೋ ಕಾಂಪೊನೆಂಟ್ ಇಂಡಿಯಾ ಎಂಪ್ಲಾಯೀಸ್ ಯೂನಿಯನ್‌ನ ಪ್ರಧಾನ ಕಾರ್ಯದರ್ಶಿ ಅಜಿತ್ ಸಿಂಗ್ ಅವರಿಗೆ ಗುರುಗ್ರಾಮ್ ಜಿಲ್ಲಾ ನ್ಯಾಯಾಲಯವು (ಮೇ 18) ಜಾಮೀನು ನೀಡಿದೆ. ಅವರು ಮಾನೇಸರ್ ಕೈಗಾರಿಕಾ ಪ್ರದೇಶದಲ್ಲಿ ಕಾರ್ಮಿಕರ ಪ್ರತಿಭಟನೆಗಳ...

ಉಮರ್, ಶಾರ್ಜೀಲ್‌ಗೆ ಜಾಮೀನು ನಿರಾಕರಿಸಿದ್ದಕ್ಕೆ ಆಕ್ಷೇಪ : ತನ್ನದೇ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ದೆಹಲಿ ಗಲಭೆ (2020ರ ಪ್ರಕರಣ) ಹಿಂದಿನ ದೊಡ್ಡ ಮಟ್ಟದ ಪಿತೂರಿ ಆರೋಪದಲ್ಲಿ ಬಂಧಿತರಾಗಿರುವ ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರಿಗೆ ಜಾಮೀನು ನಿರಾಕರಿಸಿ, 2026ರ ಜನವರಿಯಲ್ಲಿ ತನ್ನದೇ ಮತ್ತೊಂದು ದ್ವಿಸದಸ್ಯ ಪೀಠ...

ಮುತ್ತುರಾಜ್ ‘ರಾಜಕುಮಾರ್‍’ ಆದ ಕಥೆ

’ಬೇಡರ ಕಣ್ಣಪ್ಪ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದ್ದ ಸಮಯದಲ್ಲಿ ಒಂದು ದಿನ ನಾನು ಅಂದಿನ ಪತ್ರಿಕೆಯಲ್ಲಿ ಚಿತ್ರಸುದ್ದಿಯನ್ನು ಓದುತ್ತಿದ್ದಾಗ ಗುಬ್ಬಿ ಕರ್ಣಾಟಕ ಸಂಸ್ಥೆಯವರು ನಿರ್ಮಿಸುತ್ತಿರುವ ಬೇಡರ ಕಣ್ಣಪ್ಪ ಚಿತ್ರ ಎಂದು ಸುದ್ದಿ ಪ್ರಾರಂಭವಾಗಿ...

ಬಂಗಾಳ ಎಸ್‌ಐಆರ್ ಅವಾಂತರ ಹಕ್ಕು ಕಳೆದುಕೊಂಡ ಮತದಾರ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್ ಪೂರ್ಣಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...