Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ರವಿ ಕುಮಾರ್‌‌ ದಹಿಯಾ ಅವರು ರಷ್ಯಾ ಒಲಿಂಪಿಕ್ಸ್‌ ಸಮಿತಿಯ ಜೌರ್ ಉಗುವ್ ಅವರ ವಿರುದ್ದ 4-7 ಅಂತರದಲ್ಲಿ ಸೋಲುಂಡಿದ್ದಾರೆ. ಈ ಮೂಲಕ ಅವರು ಪಂದ್ಯದಲ್ಲಿ ಬೆಳ್ಳಿಗೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಬುಧವಾರ ನಡೆದ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ರವಿ ದಹಿಯಾ ಭರ್ಜರಿ ಜಯಗಳಿಸಿದ್ದರು.

ಸುಶೀಲ್ ಕುಮಾರ್ ನಂತರ ಒಲಿಂಪಿಕ್ ಬೆಳ್ಳಿ ಗೆದ್ದ 2 ನೇ ಭಾರತೀಯ ಎಂಬ ಗೌರವಕ್ಕೆ ಕುಸ್ತಿಪಟು ರವಿ ಕುಮಾರ್ ದಹಿಯಾ ಅವರು ಪಾತ್ರರಾಗಿದ್ದಾರೆ. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಬೆಳ್ಳಿಗೆ ತೃಪ್ತಿಪಟ್ಟಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇದು ಭಾರತದ ಎರಡನೇ ಬೆಳ್ಳಿ ಮತ್ತು ಐದನೇ ಪದಕವಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಒಲಿಂಪಿಕ್-ಭಾರತಕ್ಕೆ ಕೈಜಾರಿದ ಚಿನ್ನ; ಬೆಳ್ಳಿಗೆ ಸಮಾಧಾನ ಪಟ್ಟುಕೊಂಡ ರವಿ ದಹಿಯಾ | Naanu Gauri
PC: Reuters / Leah Millis

ಟೋಕಿಯೊ-2020 ಒಲಿಂಪಿಕ್ಸ್‌ನಲ್ಲಿ ಭಾರತವು ಪ್ರಸ್ತತ 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಇದುವರೆಗೂ ಗೆದ್ದುಕೊಂಡಿದೆ. ಒಲಿಂಪಿಕ್ಸ್‌ ಮುಗಿಯಲು ಇನ್ನೂ 3 ದಿನಗಳು ಬಾಕಿಯಿದೆ.

ಫೈನಲ್‌‌ ಪಂದ್ಯದಲ್ಲಿ ರವಿ ಕುಮಾರ್ ಮೊದಲ ಸುತ್ತಿನಲ್ಲಿ 0-2 ಹಿನ್ನಡೆಯಲ್ಲಿದ್ದರು. ಮೊದಲ ಸುತ್ತು ಮುಗಿಯುವ ಹೊತ್ತಿಗೆ ಅವರು ತನ್ನ ಅಂಕವನ್ನು 2-4 ಏರಿಸಿದ್ದರು.

ಜೌರ್ ಉಗುವ್ ನಂತರ 7-2 ರ ಮುನ್ನಡೆ ಸಾಧಿಸಿದರು, ಆದರೂ ರವಿಕುಮಾರ್ 2 ಪಾಯಿಂಟ್‌ಗಳನ್ನು ತನ್ನ ತೆಕ್ಕೆಗೆ ಸೇರಿಸಿದರು. ಆದರೆ ಮೂರು ಅಂಕಗಳ ಕೊರತೆಯನ್ನು ನೀಗಿಸಲು ಅವರು ವಿಫಲವಾದರು.

ಇಂದು ಬೆಳಿಗ್ಗೆ ಭಾರತೀಯ ಪುರುಷರ ಹಾಕಿ ತಂಡವು  ಜರ್ಮನಿಯನ್ನು 5-4 ಅಂತರದಲ್ಲಿ ಸೋಲಿಸಿ ಕಂಚನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...

ಇಂಡಿಗೋ ಹಾರಾಟದಲ್ಲಿ ಐದನೇ ದಿನವೂ ವ್ಯತ್ಯಯ: ವಿಮಾನ ದರಕ್ಕೆ ತಾತ್ಕಾಲಿಕ ಮಿತಿ ವಿಧಿಸಿದ ಕೇಂದ್ರ

ಇಂಡಿಗೋದ ದೇಶೀಯ ಕಾರ್ಯಾಚರಣೆಗಳು ಸತತ ಐದನೇ ದಿನವೂ ಅಸ್ತವ್ಯಸ್ತಗೊಂಡಿದ್ದರಿಂದ ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ಶನಿವಾರ (ಡಿಸೆಂಬರ್ 6) ವಿಮಾನ ಟಿಕೆಟ್ ದರಗಳ ಮೇಲೆ ತಾತ್ಕಾಲಿಕ ಮಿತಿಯನ್ನು ವಿಧಿಸಿದೆ. ನಿಗದಿತ ಮಾನದಂಡಗಳ ಯಾವುದೇ...

ಪಶ್ಚಿಮ ಬಂಗಾಳ| ಎಸ್‌ಐಆರ್‌ನಲ್ಲಿ ಹೆಸರು ನೋಂದಾಯಿಸಲು ನಿರಾಕರಿಸಿದ 79 ಬುಡಕಟ್ಟು ಜನಾಂಗಗಳು

ಪಶ್ಚಿಮ ಬಂಗಾಳದ ಬಂಕುರಾದ ಮುಚಿಕಟಾ ಮತ್ತು ವೆದುವಾಶೋಲ್ ಗ್ರಾಮಗಳ ಬುಡಕಟ್ಟು ಜನಾಂಗದವರು 'ಸಮಾಜ್ವಾದ್ ಅಂತರ-ರಾಜ್ಯ ಮಾಝಿ ಸರ್ಕಾರ್'ಗೆ ನಿಷ್ಠೆಯನ್ನು ಉಲ್ಲೇಖಿಸಿ, ಚುನಾವಣಾ ಆಯೋಗ್ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯಲ್ಲಿ ಭಾಗವಹಿಸಲು ನಿರಾಕರಿಸಿದ್ದಾರೆ...

ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧಿಸುವಂತೆ ಪತ್ರ ಬರೆದ ‘ಜಾತ್ಯತೀತ ಜನತಾದಳ’ ನಾಯಕ ಕುಮಾರಸ್ವಾಮಿ

ಭಗವದ್ಗೀತೆಯನ್ನು 'ಪವಿತ್ರ ಗ್ರಂಥ' ಎಂದಿರುವ ಜಾತ್ಯತೀತ ಜನತಾದಳ ಪಕ್ಷದ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಕೈಗಾರಿಕಾ ಸಚಿವ ಎಚ್‌.ಡಿ. ಕುಮಾರಸ್ವಾಮಿ, ವಿದ್ಯಾರ್ಥಿಗಳಿಗೆ ಪಠ್ಯದಲ್ಲಿ ಭಗವದ್ಗೀತೆ ಬೋಧಿಸಬೇಕು ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಕೇಂದ್ರ ಶಿಕ್ಷಣ...

‘ಲವ್ ಜಿಹಾದ್’ ಕಾರ್ಯಕ್ರಮಗಳನ್ನು ತೆಗೆದು ಹಾಕಲು ಐದು ಚಾನೆಲ್‌ಗಳಿಗೆ ಎನ್‌ಬಿಡಿಎಸ್‌ಎ ಆದೇಶ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿಯ (ಎನ್‌ಸಿಆರ್‌ಟಿ) ಪಠ್ಯಪುಸ್ತಕವನ್ನು 'ಲವ್ ಜಿಹಾದ್' ಪಿತೂರಿಯೊಂದಿಗೆ ಜೋಡಿಸುವ ಎಂಟು ಕಾರ್ಯಕ್ರಮಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಮಂಗಳವಾರ (ಡಿಸೆಂಬರ್...

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ಗೆ ಪ್ರಪ್ರಥಮ ‘ಫಿಫಾ ಶಾಂತಿ’ ಪ್ರಶಸ್ತಿ

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರಿಗೆ ಹೊಸ ಫಿಫಾ ಶಾಂತಿ ಪ್ರಶಸ್ತಿಯನ್ನು ಶುಕ್ರವಾರ ನೀಡಲಾಯಿತು. ನೊಬೆಲ್ ಶಾಂತಿ ಪ್ರಶಸ್ತಿಗಾಗಿ ಬಹಿರಂಗವಾಗಿ ಆಸೆ ವ್ಯಕ್ತಪಡಿಸಿದ್ದ ಅವರಿಗೆ, ಹೊಸದಾಗಿ ರಚಿಸಲಾದ ಫಿಫಾ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಟ್ರಂಪ್...

ಬಾಬಾ ಸಾಹೇಬರ ಪರಿನಿಬ್ಬಾಣ ಜಗತ್ತಿನ ಕವಲುದಾರಿಗೊಂದು ಕೈಮರದಂತೆ ಕಾಣಿಸುತ್ತಿದೆ

ಬುದ್ಧನ ತತ್ವಗಳು, ಬಸವ- ಅಲ್ಲಮರ ಚಿಂತನೆಗಳು, ಬಾಬಾ ಸಾಹೇಬರ ವಿಚಾರಗಳು , ನಮ್ಮ ಸಂವಿಧಾನದ ದಿಕ್ಸೂಚಿಗಳು ಹಾಗೂ ಕಳೆದ 75 ವರ್ಷಗಳಿಂದ ಸ್ಕ್ಯಾಂಡಿನೇವಿಯನ್ ದೇಶಗಳು ಒಂದು ಮಟ್ಟಿಗೆ ಸಾಧಿಸಿದ ಆಧುನಿಕ‌ ಮಾನವೀಯ‌- ವೈಜ್ಞಾನಿಕ...

ಮಧ್ಯಪ್ರದೇಶ| ಕುನೋ ರಾಷ್ಟ್ರೀಯ ಉದ್ಯಾನವನಕ್ಕೆ ಬಿಟ್ಟ ಚಿರತೆ ಮರಿ ಸಾವು

ಮಧ್ಯಪ್ರದೇಶದ ಕುನೋ ರಾಷ್ಟ್ರೀಯ ಉದ್ಯಾನವನದಲ್ಲಿ ಕಾಡಿಗೆ ಬಿಟ್ಟ ಒಂದು ದಿನದ ನಂತರ ಚಿರತೆ ಮರಿ ಸಾವನ್ನಪ್ಪಿದೆ ಎಂದು ಅರಣ್ಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ ಎಂದು ರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಗುರುವಾರ ಅಂತರರಾಷ್ಟ್ರೀಯ ಚಿರತೆ ದಿನದ...

ಕೆಂಪು ಕೋಟೆ ಸ್ಫೋಟಕ್ಕೆ ಜಮಾತೆ-ಇ-ಇಸ್ಲಾಮ್ ಗುಂಪನ್ನು ಸಂಪರ್ಕಿಸುವ ಹೇಳಿಕೆ: ಬಿಜೆಪಿ ನಾಯಕನಿಗೆ ಲೀಗಲ್‌ ನೋಟಿಸ್

ಜಮಾತೆ-ಇ-ಇಸ್ಲಾಮಿ ಹಿಂದ್ (ಜೆಐಎಚ್) ಕೇರಳವು, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್, ಮನೋರಮಾ ನ್ಯೂಸ್ ಸಂಪಾದಕ, ಕಾರ್ಯಕ್ರಮಕ್ಕೆ ಸಂಬಂಧಿಸಿದ ಸಂದರ್ಶಕರಿಗೆ ಕಾನೂನು ನೋಟಿಸ್ ಜಾರಿ ಮಾಡಿದೆ. ಸಂಸ್ಥೆಯನ್ನು ಕೆಂಪು ಕೋಟೆ ಬಾಂಬ್...

ಅತ್ಯಾಚಾರ ಆರೋಪ : ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನಕ್ಕೆ ಹೈಕೋರ್ಟ್ ತಡೆ

ಮಹಿಳೆ ಮೇಲೆ ಅತ್ಯಾಚಾರ ಎಸಗಿ ಗರ್ಭಪಾತ ಮಾಡಿಸಲು ಒತ್ತಾಯಿಸಿದ ಆರೋಪ ಪ್ರಕರಣದಲ್ಲಿ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಡಿಸೆಂಬರ್ 15ರವರೆಗೆ ಬಂಧಿಸದಂತೆ ಕೇರಳ ಹೈಕೋರ್ಟ್ ಶನಿವಾರ (ಡಿಸೆಂಬರ್ 6) ಪೊಲೀಸರಿಗೆ ನಿರ್ಬಂಧ ವಿಧಿಸಿದೆ. ನಿರೀಕ್ಷಣಾ...