Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ರವಿ ಕುಮಾರ್‌‌ ದಹಿಯಾ ಅವರು ರಷ್ಯಾ ಒಲಿಂಪಿಕ್ಸ್‌ ಸಮಿತಿಯ ಜೌರ್ ಉಗುವ್ ಅವರ ವಿರುದ್ದ 4-7 ಅಂತರದಲ್ಲಿ ಸೋಲುಂಡಿದ್ದಾರೆ. ಈ ಮೂಲಕ ಅವರು ಪಂದ್ಯದಲ್ಲಿ ಬೆಳ್ಳಿಗೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಬುಧವಾರ ನಡೆದ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ರವಿ ದಹಿಯಾ ಭರ್ಜರಿ ಜಯಗಳಿಸಿದ್ದರು.

ಸುಶೀಲ್ ಕುಮಾರ್ ನಂತರ ಒಲಿಂಪಿಕ್ ಬೆಳ್ಳಿ ಗೆದ್ದ 2 ನೇ ಭಾರತೀಯ ಎಂಬ ಗೌರವಕ್ಕೆ ಕುಸ್ತಿಪಟು ರವಿ ಕುಮಾರ್ ದಹಿಯಾ ಅವರು ಪಾತ್ರರಾಗಿದ್ದಾರೆ. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಬೆಳ್ಳಿಗೆ ತೃಪ್ತಿಪಟ್ಟಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇದು ಭಾರತದ ಎರಡನೇ ಬೆಳ್ಳಿ ಮತ್ತು ಐದನೇ ಪದಕವಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಒಲಿಂಪಿಕ್-ಭಾರತಕ್ಕೆ ಕೈಜಾರಿದ ಚಿನ್ನ; ಬೆಳ್ಳಿಗೆ ಸಮಾಧಾನ ಪಟ್ಟುಕೊಂಡ ರವಿ ದಹಿಯಾ | Naanu Gauri
PC: Reuters / Leah Millis

ಟೋಕಿಯೊ-2020 ಒಲಿಂಪಿಕ್ಸ್‌ನಲ್ಲಿ ಭಾರತವು ಪ್ರಸ್ತತ 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಇದುವರೆಗೂ ಗೆದ್ದುಕೊಂಡಿದೆ. ಒಲಿಂಪಿಕ್ಸ್‌ ಮುಗಿಯಲು ಇನ್ನೂ 3 ದಿನಗಳು ಬಾಕಿಯಿದೆ.

ಫೈನಲ್‌‌ ಪಂದ್ಯದಲ್ಲಿ ರವಿ ಕುಮಾರ್ ಮೊದಲ ಸುತ್ತಿನಲ್ಲಿ 0-2 ಹಿನ್ನಡೆಯಲ್ಲಿದ್ದರು. ಮೊದಲ ಸುತ್ತು ಮುಗಿಯುವ ಹೊತ್ತಿಗೆ ಅವರು ತನ್ನ ಅಂಕವನ್ನು 2-4 ಏರಿಸಿದ್ದರು.

ಜೌರ್ ಉಗುವ್ ನಂತರ 7-2 ರ ಮುನ್ನಡೆ ಸಾಧಿಸಿದರು, ಆದರೂ ರವಿಕುಮಾರ್ 2 ಪಾಯಿಂಟ್‌ಗಳನ್ನು ತನ್ನ ತೆಕ್ಕೆಗೆ ಸೇರಿಸಿದರು. ಆದರೆ ಮೂರು ಅಂಕಗಳ ಕೊರತೆಯನ್ನು ನೀಗಿಸಲು ಅವರು ವಿಫಲವಾದರು.

ಇಂದು ಬೆಳಿಗ್ಗೆ ಭಾರತೀಯ ಪುರುಷರ ಹಾಕಿ ತಂಡವು  ಜರ್ಮನಿಯನ್ನು 5-4 ಅಂತರದಲ್ಲಿ ಸೋಲಿಸಿ ಕಂಚನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ ಕರಾವಳಿಯಲ್ಲಿ ಇರಾನ್ ಯುದ್ಧನೌಕೆ ಮೇಲೆ ಜಲಾಂತರ್ಗಾಮಿ ದಾಳಿ: ಸಮುದ್ರದಲ್ಲಿ ಶವಗಳು ಪತ್ತೆ

ಶ್ರೀಲಂಕಾದ ದಕ್ಷಿಣ ಕರಾವಳಿಯಲ್ಲಿ ಬುಧವಾರ ಜಲಾಂತರ್ಗಾಮಿ ದಾಳಿಯ ನಂತರ ಇರಾನ್ ನೌಕಾ ಯುದ್ಧನೌಕೆ ಐರಿಸ್ ದೇನಾ ಮುಳುಗಿದೆ ಎಂದು ವರದಿಯಾಗಿದೆ.  ಈ ದಾಳಿಯಲ್ಲಿ ಕನಿಷ್ಠ 101 ಜನರು ಕಾಣೆಯಾಗಿದ್ದಾರೆ ಮತ್ತು 78 ಜನರು ಗಾಯಗೊಂಡಿದ್ದಾರೆ,...

ಹೆದ್ದಾರಿಯಲ್ಲಿ ದ್ವೇಷ ಬರಹ : ಮುಸ್ಲಿಮರು ಭಾರತದಲ್ಲಿ ‘ಬಾಡಿಗೆದಾರರು’ ಅವರು ಹಾಗೆಯೇ ಬದುಕಬೇಕು ಎಂದ ಹಿಂದೂ ರಕ್ಷಾ ದಳದ ಸದಸ್ಯರು

2026ರ ಫೆಬ್ರವರಿ 26 ಮತ್ತು 27ರ ನಡುವಿನ ಮಧ್ಯರಾತ್ರಿ ಉತ್ತರ ಪ್ರದೇಶದ ದೆಹಲಿ–ಡೆಹ್ರಾಡೂನ್ ರಾಷ್ಟ್ರೀಯ ಹೆದ್ದಾರಿಯ ತಡೆಗೋಡೆಯ ಮೇಲೆ ಹಿಂದೂ ರಕ್ಷಾ ದಳಕ್ಕೆ (ಹೆಚ್‌ಆರ್‌ಡಿ) ಸೇರಿದ ಮಹಿಳೆಯರು ಹಿಂದಿಯಲ್ಲಿ “मुसलमान के लिए...

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಹತ್ಯೆಗೆ ಗುರಿಯಾಗುತ್ತಾನೆ: ಇಸ್ರೇಲ್ ರಕ್ಷಣಾ ಸಚಿವನಿಂದ ಬೆದರಿಕೆ

ದುಬೈ: ‘ಅಯತೊಲ್ಲಾ ಅಲಿ ಖಮೇನಿ ಉತ್ತರಾಧಿಕಾರಿಯಾಗಿ ಯಾರೇ ಆಯ್ಕೆಯಾದರೂ ಅವರನ್ನು ಹತ್ಯೆ ಮಾಡುತ್ತೇವೆ’ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಬುಧವಾರ ಪರೋಕ್ಷವಾಗಿ ಬೆದರಿಕೆ ಹಾಕಿದ್ದಾರೆ. ಈ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿರುವ...

ಇರಾನ್ ಮೇಲಿನ ಇಸ್ರೇಲ್-ಅಮೆರಿಕ ದಾಳಿಗಳು ಅಂತರರಾಷ್ಟ್ರೀಯ ಕಾನೂನಿಗೆ ಸರಿ ಹೊಂದುವುದಿಲ್ಲ: ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ

ಸಿಡ್ನಿ: ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲ್ ದಾಳಿಗಳನ್ನು "ವಿಷಾದದಿಂದ" ಬೆಂಬಲಿಸುವುದಾಗಿ ಕೆನಡಾ ಪ್ರಧಾನಿ ಮಾರ್ಕ್ ಕಾರ್ನಿ ಹೇಳಿದ್ದಾರೆ. ಆದರೆ ಈ ಸಂಘರ್ಷವು ಅಂತರರಾಷ್ಟ್ರೀಯ ಕ್ರಮದ ವೈಫಲ್ಯವನ್ನು ಪ್ರತಿಬಿಂಬಿಸುತ್ತದೆ ಎಂದು ಅವರು...

ಉತ್ತರ ಪ್ರದೇಶ | ಅತ್ಯಾಚಾರ ಸಂತ್ರಸ್ತೆಯನ್ನು ಗುಂಡಿಕ್ಕಿ ಕೊಂದ ಆರೋಪಿ

ಸುಮಾರು 17 ವರ್ಷದ ಅತ್ಯಾಚಾರ ಸಂತ್ರಸ್ತೆಯನ್ನು 22 ವರ್ಷದ ಆರೋಪಿ ಗುಂಡಿಕ್ಕಿ ಕೊಂದು ಪರಾರಿಯಾಗಿರುವ ಘಟನೆ ಉತ್ತರ ಪ್ರದೇಶದ ಬಸ್ತಿ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ತಲೆಮರೆಸಿಕೊಂಡಿರುವ ಆರೋಪಿಯ ಹುಡುಕಾಟ ನಡೆಯುತ್ತಿದೆ ಎಂದು ಪೊಲೀಸರು...

ಹಾರ್ಮುಜ್ ಜಲಸಂಧಿ ಮುಚ್ಚಿದ ಇರಾನ್; ಪರ್ಷಿಯನ್ ಕೊಲ್ಲಿಯಲ್ಲಿ ಸಿಲುಕಿಸಿದ 37 ಭಾರತೀಯ ಹಡಗುಗಳು

ಇಸ್ರೇಲ್-ಯುಎಸ್ ಜಂಟಿ ದಾಳಿಯ ನಂತರ, ಇರಾನ್ ಹಾರ್ಮುಜ್ ಜಲಸಂಧಿಯನ್ನು ಮುಚ್ಚಿರುವುದರಿಂದ ಭಾರತೀಯ ಹಡಗುಗಳು ಬಿಕ್ಕಟ್ಟಿನಲ್ಲಿ ಸಿಲುಕಿಕೊಂಡಿವೆ. ಭಾರತೀಯ ಧ್ವಜ ಹೊಂದಿರುವ 37 ಹಡಗುಗಳು ಪರ್ಷಿಯನ್ ಕೊಲ್ಲಿ ಮತ್ತು ಒಮಾನ್ ನೀರಿನಲ್ಲಿ ಸಿಲುಕಿಕೊಂಡಿವೆ. 37 ಹಡಗುಗಳು...

ಪಾಲ್ಘರ್: ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಹೊತ್ತಿ ಉರಿದ ಟೆಂಪೋ: 28 ವರ್ಷದ ಚಾಲಕ ಸಜೀವ ದಹನ, ಕ್ಲೀನರ್ ಗೆ ಗಾಯ

ಪಾಲ್ಘರ್: ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ಮುಂಬೈ-ಅಹಮದಾಬಾದ್ ಹೆದ್ದಾರಿಯಲ್ಲಿ ಟೆಂಪೋಗೆ ಬೆಂಕಿ ಹೊತ್ತಿಕೊಂಡ ಪರಿಣಾಮ ಪಂಜಾಬ್‌ನ 28 ವರ್ಷದ ಚಾಲಕ ಸುಟ್ಟು ಕರಕಲಾಗಿದ್ದು, ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ಜನನಿಬಿಡ...

ಗುಜರಾತ್| ಅಂತರ್ಧರ್ಮೀಯ ದಂಪತಿಗೆ ಪೊಲೀಸರ ರಕ್ಷಣೆ; ‘ಲವ್ ಜಿಹಾದ್’ ಎಂದು ಕೂಗಿದ ವಿಎಚ್‌ಪಿ

ಮಾರ್ಚ್ 3 ರಂದು ಗುಜರಾತ್‌ನ ಅಹಮದಾಬಾದ್‌ನ ಮೆಟ್ರೋ ನ್ಯಾಯಾಲಯದ ಸಂಕೀರ್ಣದೊಳಗಿನ ವಿವಾಹ ನೋಂದಣಿ ಕಚೇರಿಯು ಅವ್ಯವಸ್ಥೆಯ ತಾಣವಾಯಿತು. ಗಾಂಧಿನಗರದ ಹಿಂದೂ ಮಹಿಳೆಯೊಬ್ಬರು ನಗರದ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಲು ಬಂದ ನಂತರ ಹಿಂದುತ್ವ ಸಂಘಟನೆಯ...

ಖಮೇನಿ ಹತ್ಯೆ ಕುರಿತು ಪೋಸ್ಟ್‌ : ನ್ಯಾಷನಲ್ ಕಾನ್ಫರೆನ್ಸ್ ಸಂಸದ, ಶ್ರೀನಗರದ ಮಾಜಿ ಮೇಯರ್ ವಿರುದ್ಧ ಎಫ್‌ಐಆರ್

ದಾರಿತಪ್ಪಿಸುವ ಆನ್‌ಲೈನ್ ವಿಷಯವನ್ನು ಹಂಚಿಕೊಂಡ ಆರೋಪದ ಮೇಲೆ ಜಮ್ಮು ಕಾಶ್ಮೀರದ ಆಡಳಿತಾರೂಢ ನ್ಯಾಷನಲ್ ಕಾನ್ಫರೆನ್ಸ್ ಸಂಸದ ಅಗಾ ಸೈಯದ್ ರೂಹುಲ್ಲಾ ಮೆಹದಿ ಮತ್ತು ಶ್ರೀನಗರದ ಮಾಜಿ ಮೇಯರ್ ಜುನೈದ್ ಅಝೀಂ ಮಟ್ಟು ವಿರುದ್ಧ...

ಒಡಿಶಾ| ಮೇಕೆ ಕಳ್ಳತನ ಶಂಕೆಯಿಂದ 14 ವರ್ಷದ ಬಾಲಕನನ್ನು ಹೊಡೆದು ಕೊಂದ ಗುಂಪು; 12 ಜನರ ಬಂಧನ

ಒಡಿಶಾದ ಮಯೂರ್‌ಭಂಜ್ ಜಿಲ್ಲೆಯಲ್ಲಿ ಮೇಕೆ ಕಳ್ಳತನದ ಶಂಕೆಯಿಂದ ಗ್ರಾಮಸ್ಥರು ಥಳಿಸಿದರಿಂದ 14 ವರ್ಷದ ಬಾಲಕನೊಬ್ಬ ಸಾವನ್ನಪ್ಪಿ, ಇನ್ನೊಬ್ಬ ಬಾಲಕ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಟಿರಿಂಗ್ ಪೊಲೀಸ್ ಠಾಣೆ ವ್ಯಾಪ್ತಿಯ ಇಂಡೋಖೋಲಿ...