Homeಕ್ರೀಡೆಒಲಂಪಿಕ್ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

ಟೋಕಿಯೊ ಒಲಿಂಪಿಕ್ಸ್‌‌- ಭಾರತಕ್ಕೆ ಮತ್ತೊಂದು ‘ಬೆಳ್ಳಿ’ ಗೆದ್ದುಕೊಟ್ಟ ರವಿ ದಹಿಯಾ

- Advertisement -
- Advertisement -

ಟೋಕಿಯೋ ಒಲಿಂಪಿಕ್ಸ್‌ನಲ್ಲಿ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಫೈನಲ್ ಪಂದ್ಯದಲ್ಲಿ ಭಾರತದ ರವಿ ಕುಮಾರ್‌‌ ದಹಿಯಾ ಅವರು ರಷ್ಯಾ ಒಲಿಂಪಿಕ್ಸ್‌ ಸಮಿತಿಯ ಜೌರ್ ಉಗುವ್ ಅವರ ವಿರುದ್ದ 4-7 ಅಂತರದಲ್ಲಿ ಸೋಲುಂಡಿದ್ದಾರೆ. ಈ ಮೂಲಕ ಅವರು ಪಂದ್ಯದಲ್ಲಿ ಬೆಳ್ಳಿಗೆ ಸಮಾಧಾನ ಪಟ್ಟುಕೊಂಡಿದ್ದಾರೆ.

ಬುಧವಾರ ನಡೆದ ಪುರುಷರ ಫ್ರೀಸ್ಟೈಲ್ ಕುಸ್ತಿಯ 57 ಕೆಜಿ ವಿಭಾಗದ ಸೆಮಿ ಫೈನಲ್ ಪಂದ್ಯದಲ್ಲಿ ಕಜಕಿಸ್ತಾನದ ನುರಿಸ್ಲಾಮ್ ಸನಾಯೆವ್ ಎದುರು ರವಿ ದಹಿಯಾ ಭರ್ಜರಿ ಜಯಗಳಿಸಿದ್ದರು.

ಸುಶೀಲ್ ಕುಮಾರ್ ನಂತರ ಒಲಿಂಪಿಕ್ ಬೆಳ್ಳಿ ಗೆದ್ದ 2 ನೇ ಭಾರತೀಯ ಎಂಬ ಗೌರವಕ್ಕೆ ಕುಸ್ತಿಪಟು ರವಿ ಕುಮಾರ್ ದಹಿಯಾ ಅವರು ಪಾತ್ರರಾಗಿದ್ದಾರೆ. 2012 ರ ಲಂಡನ್ ಒಲಿಂಪಿಕ್ಸ್‌ನಲ್ಲಿ ಸುಶೀಲ್ ಬೆಳ್ಳಿಗೆ ತೃಪ್ತಿಪಟ್ಟಿದ್ದರು. ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಇದು ಭಾರತದ ಎರಡನೇ ಬೆಳ್ಳಿ ಮತ್ತು ಐದನೇ ಪದಕವಾಗಿದೆ.

ಇದನ್ನೂ ಓದಿ: ಮುರಿದ ಹಾಕಿ ಸ್ಟಿಕ್, ಸೆಲ್ವಾರ್ ಕಮೀಜ್‌ನಲ್ಲಿ ಅಭ್ಯಾಸ ನಡೆಸಿದ್ದೆ: ಸಾಧನೆ ಹಿಂದಿನ ನೋವಿನ ಕಥನ 

ಒಲಿಂಪಿಕ್-ಭಾರತಕ್ಕೆ ಕೈಜಾರಿದ ಚಿನ್ನ; ಬೆಳ್ಳಿಗೆ ಸಮಾಧಾನ ಪಟ್ಟುಕೊಂಡ ರವಿ ದಹಿಯಾ | Naanu Gauri
PC: Reuters / Leah Millis

ಟೋಕಿಯೊ-2020 ಒಲಿಂಪಿಕ್ಸ್‌ನಲ್ಲಿ ಭಾರತವು ಪ್ರಸ್ತತ 2 ಬೆಳ್ಳಿ ಮತ್ತು 3 ಕಂಚಿನ ಪದಕಗಳನ್ನು ಇದುವರೆಗೂ ಗೆದ್ದುಕೊಂಡಿದೆ. ಒಲಿಂಪಿಕ್ಸ್‌ ಮುಗಿಯಲು ಇನ್ನೂ 3 ದಿನಗಳು ಬಾಕಿಯಿದೆ.

ಫೈನಲ್‌‌ ಪಂದ್ಯದಲ್ಲಿ ರವಿ ಕುಮಾರ್ ಮೊದಲ ಸುತ್ತಿನಲ್ಲಿ 0-2 ಹಿನ್ನಡೆಯಲ್ಲಿದ್ದರು. ಮೊದಲ ಸುತ್ತು ಮುಗಿಯುವ ಹೊತ್ತಿಗೆ ಅವರು ತನ್ನ ಅಂಕವನ್ನು 2-4 ಏರಿಸಿದ್ದರು.

ಜೌರ್ ಉಗುವ್ ನಂತರ 7-2 ರ ಮುನ್ನಡೆ ಸಾಧಿಸಿದರು, ಆದರೂ ರವಿಕುಮಾರ್ 2 ಪಾಯಿಂಟ್‌ಗಳನ್ನು ತನ್ನ ತೆಕ್ಕೆಗೆ ಸೇರಿಸಿದರು. ಆದರೆ ಮೂರು ಅಂಕಗಳ ಕೊರತೆಯನ್ನು ನೀಗಿಸಲು ಅವರು ವಿಫಲವಾದರು.

ಇಂದು ಬೆಳಿಗ್ಗೆ ಭಾರತೀಯ ಪುರುಷರ ಹಾಕಿ ತಂಡವು  ಜರ್ಮನಿಯನ್ನು 5-4 ಅಂತರದಲ್ಲಿ ಸೋಲಿಸಿ ಕಂಚನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಇತಿಹಾಸ ನಿರ್ಮಿಸಿದ ಭಾರತೀಯ ಮಹಿಳಾ ಹಾಕಿ ತಂಡ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...

‘ಜಿಡಿಪಿ ಬಿಟ್ಟು ನಿಮ್ಮ ಮುಖದ ಸೌಂದರ್ಯದ ರಹಸ್ಯ ತಿಳಿಸಿ..’; ಪ್ರಧಾನಿ ಮೋದಿ ಕಾಲೆಳೆದ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ

ಇತ್ತೀಚೆಗೆ ಬಿಡುಗಡೆಯಾದ ಭಾರತದ ತ್ರೈಮಾಸಿಕ ಜಿಡಿಪಿ ಅಂಕಿಅಂಶಗಳ ಕುರಿತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ವ್ಯಂಗ್ಯವಾಡಿದ್ದಾರೆ. 2026-27ರ ಹಣಕಾಸು ವರ್ಷದ ಮೊದಲ...

ರಾಜಕೀಯ ಪಕ್ಷಗಳ ಬಿಎಲ್‌ಎಗಳು ಎಸ್‌ಐಆರ್‌ನ ಎಲ್ಲ ಮಾಹಿತಿಗಳನ್ನೂ ಪರಿಶೀಲಿಸಲು ಜವಾಬ್ದಾರರಲ್ಲ : ದೆಹಲಿ ಹೈಕೋರ್ಟ್

ರಾಜಕೀಯ ಪಕ್ಷಗಳ ಬೂತ್ ಮಟ್ಟದ ಏಜೆಂಟ್‌ಗಳು (ಬಿಎಲ್‌ಎ) ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಸಂದರ್ಭದಲ್ಲಿ ಎಣಿಕೆ ನಮೂನೆಗಳಲ್ಲಿರುವ (ಎನ್ಯುಮರೇಷನ್ ಫಾರಂ) ಎಲ್ಲ ವಿವರಗಳನ್ನು ಪರಿಶೀಲಿಸಲು ಜವಾಬ್ದಾರರಲ್ಲ ಎಂದು ದೆಹಲಿ ಹೈಕೋರ್ಟ್...

‘ಕೈಯಿಂದ ಮಲ ಹೊರುವ ಪದ್ಧತಿ ಇಲ್ಲ’ ಎಂದ ಸರ್ಕಾರ: ‘ಹಾಗಾದರೆ ನಾವು ಇನ್ನೂ ಏಕೆ ಈ ಕೆಲಸ ಮಾಡುತ್ತಿದ್ದೇವೆ?’ ಎಂದು ಪ್ರಶ್ನಿಸಿದ ಮಹಿಳಾ ಕಾರ್ಮಿಕರು

ನವದೆಹಲಿ: ದೇಶದಲ್ಲಿ ಕೈಯಿಂದ ಮಲ ಹೊರುವ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಿದೆ ಎಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಹೇಳಿರುವ ಬೆನ್ನಲ್ಲೇ, ಉತ್ತರ ಪ್ರದೇಶ, ಮಧ್ಯಪ್ರದೇಶ, ಬಿಹಾರ ಮತ್ತು ಜಮ್ಮು ಮತ್ತು ಕಾಶ್ಮೀರದ ಮಹಿಳಾ ನೈರ್ಮಲ್ಯ...

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಜರುಗಿಸುವ ಅಧಿಕಾರ ಬಾರ್ ಕೌನ್ಸಿಲ್‌ಗಳಿಗೆ ಇಲ್ಲ; ನಲ್ಸಾರ್ ವಿವಿ ವಿರುದ್ಧದ ಬಿಸಿಐ ಅಧ್ಯಕ್ಷರ ಆದೇಶ ಕಾನೂನುಬಾಹಿರ : ಸುಪ್ರೀಂ ಕೋರ್ಟ್

ಕಾನೂನು ವಿದ್ಯಾರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಬಾರ್ ಕೌನ್ಸಿಲ್ ಆಫ್ ಇಂಡಿಯಾ (ಬಿಸಿಐ) ಮತ್ತು ರಾಜ್ಯ ಬಾರ್ ಕೌನ್ಸಿಲ್‌ಗಳಿಗೆ ಯಾವುದೇ ಶಾಸನಬದ್ಧ ಅಧಿಕಾರವಿಲ್ಲ ಎಂದು ಸುಪ್ರೀಂ ಕೋರ್ಟ್ ಗುರುವಾರ (ಸೆ.3) ಮಹತ್ವದ...

ದೇಶದ ಆರ್ಥಿಕ ಸ್ಥಿರತೆಯ ಬಗ್ಗೆ ಕೇಂದ್ರ ಸರ್ಕಾರದಿಂದ ಸುಳ್ಳು ನಿರೂಪಣೆ ಸೃಷ್ಟಿ: ಶರದ್ ಪವಾರ್

ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಮತ್ತು ಸಂಕಷ್ಟದಲ್ಲಿರುವ ನೈಜ ಆರ್ಥಿಕತೆಯನ್ನು ಮರೆಮಾಚಲು ಕೇಂದ್ರ ಸರ್ಕಾರವು 'ಸಂಖ್ಯಾಶಾಸ್ತ್ರೀಯ ವಿಧಾನಗಳನ್ನು ತಿರುಚುತ್ತಿದೆ' ಎಂದು ನ್ಯಾಷನಲ್ ಕಾಂಗ್ರೆಸ್ ಪಾರ್ಟಿ (ಎಸ್‌ಪಿ) ಮುಖ್ಯಸ್ಥ ಶರದ್ ಪವಾರ್ ಆರೋಪಿಸಿದ್ದಾರೆ. "ಏಪ್ರಿಲ್-ಜೂನ್ ತ್ರೈಮಾಸಿಕದಲ್ಲಿ ಶೇಕಡಾ...

ಮಹದೇವಪುರ, ಗಾಂಧಿನಗರ ವೋಟರ್ ಲಿಸ್ಟ್ ಹಗರಣ: ಇಸಿಐ ತನಿಖೆಗೆ ರಾಜ್ಯ ಚುನಾವಣಾ ಆಯೋಗ ಶಿಫಾರಸು

ಮಹದೇವಪುರ ಮತ್ತು ಗಾಂಧಿನಗರ ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಸಂಸದ ಮನ್ಸೂರ್ ಅಲಿ ಖಾನ್ ನೀಡಿದ್ದ ದೂರನ್ನು ಕರ್ನಾಟಕ ರಾಜ್ಯ ಚುನಾವಣಾ ಆಯೋಗವು ಕೇಂದ್ರ ಚುನಾವಣಾ ಆಯೋಗಕ್ಕೆ...