Homeಅಂತರಾಷ್ಟ್ರೀಯಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಖಚಿತಗೊಂಡಿದೆ. ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ಶುಕ್ರವಾರ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚಿನ ಪದಕ ಗೆದ್ದಿರುವ 23 ವರ್ಷದ ಲವ್ಲಿನಾ ಅವರು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಅಸ್ಸಾಂ ರಾಜ್ಯದವರಾಗಿರುವ ಬಾಕ್ಸರ್ ಲವ್ಲಿನಾ ಅವರಿಗೆ ಚಿನ್ನದ ಪದಕ ಪಡೆಯಲು ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಸಮೀಫೈನಲ್‌ ಪ್ರವೇಶಿಸಿರುವ ಅವರು ಒಂದು ಪಂದ್ಯವನ್ನು ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಪಿವಿ ಸಿಂಧು, ಬಾಕ್ಸರ್‌‌ ಸತೀಶ್‌, ಪುರುಷರ ಹಾಕಿ ತಂಡ ಕ್ವಾಟರ್‌ ಫೈನಲ್‌ಗೆ

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಗುತ್ತಿರುವ ಮೂರನೇ ಪದಕ ಇದಾಗಿದೆ. ಭಾರತದ ಹಿಂದಿನ ಬಾಕ್ಸಿಂಗ್ ಪದಕಗಳು ವಿಜೇಂದರ್ ಸಿಂಗ್ (2008) ಮತ್ತು ಎಂಸಿ ಮೇರಿ ಕೋಮ್ (2012) ಮೂಲಕ ಬಂದಿವೆ. ಈ ಇಬ್ಬರೂ ಕಂಚಿನ ಪದಕಗಳನ್ನು ಗೆದ್ದಿದ್ದು, ಲವ್ಲೀನಾ ಅವರಿಗೆ ಅವಬ್ಬರಿಗಿಂತಲೂ ಉತ್ತಮ ಸಾಧನೆ ಮಾಡುವ ಅವಕಾಶವಿದೆ.

ಗುರುವಾರ ನಡೆದ ಬ್ಯಾಡ್ಮಿಂಟನ್‌‌ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ನೇರ ಪಂದ್ಯಗಳಲ್ಲಿ ಸೋಲಿಸಿದ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳಾ ಸಿಂಗಲ್ಸ್ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಇಂದು ಅವರು ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಕ್ವಾರ್ಟರ್‌ ಪೈನಲ್‌ನಲ್ಲಿ ಎದುರಿಸಲಿದ್ದಾರೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಜೊತೆಗೆ ಗುರುವಾರ ನಡೆದ ಪುರುಷರ ಹಾಕಿ ಪೂಲ್‌ ಎ ಪಂದ್ಯಾಟದಲ್ಲಿ ಅರ್ಜೆಂಟೀನ ವಿರುದ್ದ ಭಾರತ 3-1 ಅಂಕದಲ್ಲಿ ಗೆಲುವು ಸಾಧಿಸಿದೆ. ಇಂದು ಜಪಾನ್ ವಿರುದ್ದ ಭಾರತ ಸೆಣಸಲಿದೆ.

ಅಲ್ಲದೆ ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದಾರೆ. ಅವರ ಮುಂದಿನ ಪಂದ್ಯ ಶನಿವಾರ ಜಪಾನಿನ ತಕಹಾರು ಫುರುಕವ ಅವರ ವಿರುದ್ದ ನಡೆಯಲಿದೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...