Homeಅಂತರಾಷ್ಟ್ರೀಯಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ ಮತ್ತೊಂದು ಪದಕ ಖಚಿತ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಎರಡನೇ ಪದಕ ಖಚಿತಗೊಂಡಿದೆ. ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ಶುಕ್ರವಾರ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ.

ವಿಶ್ವ ಚಾಂಪಿಯನ್‌ಶಿಪ್‌ನಲ್ಲಿ ಎರಡು ಬಾರಿ ಕಂಚಿನ ಪದಕ ಗೆದ್ದಿರುವ 23 ವರ್ಷದ ಲವ್ಲಿನಾ ಅವರು ಇದೇ ಮೊದಲ ಬಾರಿಗೆ ಒಲಿಂಪಿಕ್ಸ್‌ನಲ್ಲಿ ಭಾಗವಹಿಸಿದ್ದಾರೆ. ಅಸ್ಸಾಂ ರಾಜ್ಯದವರಾಗಿರುವ ಬಾಕ್ಸರ್ ಲವ್ಲಿನಾ ಅವರಿಗೆ ಚಿನ್ನದ ಪದಕ ಪಡೆಯಲು ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಸಮೀಫೈನಲ್‌ ಪ್ರವೇಶಿಸಿರುವ ಅವರು ಒಂದು ಪಂದ್ಯವನ್ನು ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಪಿವಿ ಸಿಂಧು, ಬಾಕ್ಸರ್‌‌ ಸತೀಶ್‌, ಪುರುಷರ ಹಾಕಿ ತಂಡ ಕ್ವಾಟರ್‌ ಫೈನಲ್‌ಗೆ

ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಸಿಗುತ್ತಿರುವ ಮೂರನೇ ಪದಕ ಇದಾಗಿದೆ. ಭಾರತದ ಹಿಂದಿನ ಬಾಕ್ಸಿಂಗ್ ಪದಕಗಳು ವಿಜೇಂದರ್ ಸಿಂಗ್ (2008) ಮತ್ತು ಎಂಸಿ ಮೇರಿ ಕೋಮ್ (2012) ಮೂಲಕ ಬಂದಿವೆ. ಈ ಇಬ್ಬರೂ ಕಂಚಿನ ಪದಕಗಳನ್ನು ಗೆದ್ದಿದ್ದು, ಲವ್ಲೀನಾ ಅವರಿಗೆ ಅವಬ್ಬರಿಗಿಂತಲೂ ಉತ್ತಮ ಸಾಧನೆ ಮಾಡುವ ಅವಕಾಶವಿದೆ.

ಗುರುವಾರ ನಡೆದ ಬ್ಯಾಡ್ಮಿಂಟನ್‌‌ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ನೇರ ಪಂದ್ಯಗಳಲ್ಲಿ ಸೋಲಿಸಿದ ವಿಶ್ವ ಚಾಂಪಿಯನ್ ಪಿ.ವಿ. ಸಿಂಧು ಮಹಿಳಾ ಸಿಂಗಲ್ಸ್ ಕ್ವಾರ್ಟರ್‌ ಫೈನಲ್‌ಗೆ ಲಗ್ಗೆಯಿಟ್ಟಿದ್ದಾರೆ. ಇಂದು ಅವರು ಜಪಾನ್‌ನ ಅಕಾನೆ ಯಮಗುಚಿ ಅವರನ್ನು ಕ್ವಾರ್ಟರ್‌ ಪೈನಲ್‌ನಲ್ಲಿ ಎದುರಿಸಲಿದ್ದಾರೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಜೊತೆಗೆ ಗುರುವಾರ ನಡೆದ ಪುರುಷರ ಹಾಕಿ ಪೂಲ್‌ ಎ ಪಂದ್ಯಾಟದಲ್ಲಿ ಅರ್ಜೆಂಟೀನ ವಿರುದ್ದ ಭಾರತ 3-1 ಅಂಕದಲ್ಲಿ ಗೆಲುವು ಸಾಧಿಸಿದೆ. ಇಂದು ಜಪಾನ್ ವಿರುದ್ದ ಭಾರತ ಸೆಣಸಲಿದೆ.

ಅಲ್ಲದೆ ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದಾರೆ. ಅವರ ಮುಂದಿನ ಪಂದ್ಯ ಶನಿವಾರ ಜಪಾನಿನ ತಕಹಾರು ಫುರುಕವ ಅವರ ವಿರುದ್ದ ನಡೆಯಲಿದೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...