Homeಸಿನಿಮಾಕ್ರೀಡೆಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಉತ್ತಮವಾಗಿ ಆಡುತ್ತಿದ್ದು, ಶುಕ್ರವಾರ(ಇಂದು) ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ.

ಈ ಮೂಲಕ ಅವರು ಸೆಮಿಫೈನಲ್‌ಗೆ  ಲಗ್ಗೆ ಇಟ್ಟಿದ್ದಾರೆ. ಗುರುವಾರ ನಡೆದ ಬ್ಯಾಡ್ಮಿಂಟನ್‌‌ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ಸೋಲಿಸಿದ್ದರು.

ಇಂದು ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಅವರಿಗೆ ಚಿನ್ನದ ಪದಕ ಪಡೆಯಲು ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಸಮೀಫೈನಲ್‌ ಪ್ರವೇಶಿಸಿರುವ ಅವರು ಒಂದು ಪಂದ್ಯವನ್ನು ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ 2 ನೇ ಪದಕ ಖಚಿತ!

ಏತನ್ಮಧ್ಯೆ, ಭಾರತದ ಮನು ಭಾಕರ್ ಮತ್ತು ರಾಹಿ ಸರ್ನೋಬತ್ ಅವರು 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸ್ಪರ್ಧೆಯಿಂದ ಹೊರಬಿದ್ದರು. ಇವರಿಬ್ಬರು ಸ್ಪರ್ಧೆಯಲ್ಲಿ ಅರ್ಹತೆ ಪಡೆಯಲು ವಿಫಲರಾದರು.

ಮಹಿಳಾ ಬಿಲ್ಲುಗಾರಿಕೆ ವೈಯಕ್ತಿಕ ಸ್ಪರ್ಧೆಯಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದ್ದ ದೀಪಿಕಾ ಕುಮಾರಿ, ದಕ್ಷಿಣ ಕೊರಿಯಾದ ಆನ್ ಸ್ಯಾನ್ ವಿರುದ್ಧ ಸೋತರು. ಗುರುವಾರ ಅವರು ಆರ್‌ಒಸಿಯ ಕ್ಸ್ನಿಯಾ ಪೆರೋವಾ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ನಲ್ಲಿ ಸ್ಥಾನ ಗಳಿಸಿದ್ದರು.

ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಗೆಲುವನ್ನು ದಾಖಲಿಸಿದೆ. ಐರ್ಲೆಂಡ್ ವಿರುದ್ಧ 1-0 ಅಂತರದ ಗೆಲುವನ್ನು ತಂಡವು ಸಾಧಿಸಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಜೊತೆಗೆ ಗುರುವಾರ ನಡೆದ ಪುರುಷರ ಹಾಕಿ ಪೂಲ್‌ ಎ ಪಂದ್ಯಾಟದಲ್ಲಿ ಅರ್ಜೆಂಟೀನ ವಿರುದ್ದ ಭಾರತ 3-1 ಅಂಕದಲ್ಲಿ ಗೆಲುವು ಸಾಧಿಸಿದೆ. ಇಂದು ಜಪಾನ್ ವಿರುದ್ದ ಭಾರತ ಸೆಣಸುತ್ತಿದ್ದು, ಆಟದ ಮೊದಲಾರ್ಧ ಮುಗಿದಿದ್ದು, ಭಾರತವು 2-0 ಅಂಕ ಗಳಿಸಿ ಮುನ್ನಡೆಯಲ್ಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದಾರೆ. ಅವರ ಮುಂದಿನ ಪಂದ್ಯ ಶನಿವಾರ ಜಪಾನಿನ ತಕಹಾರು ಫುರುಕವ ಅವರ ವಿರುದ್ದ ನಡೆಯಲಿದೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...