Homeಸಿನಿಮಾಕ್ರೀಡೆಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

ಟೋಕಿಯೊ ಒಲಿಂಪಿಕ್ಸ್‌‌: ಬ್ಯಾಡ್ಮಿಂಟನ್‌ ತಾರೆ ‘ಪಿವಿ ಸಿಂಧು’ ಸೆಮಿಫೈನಲ್‌ಗೆ ಲಗ್ಗೆ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಉತ್ತಮವಾಗಿ ಆಡುತ್ತಿದ್ದು, ಶುಕ್ರವಾರ(ಇಂದು) ನಡೆದ ಮಹಿಳಾ ಬ್ಯಾಡ್ಮಿಂಟನ್ ಸಿಂಗಲ್ಸ್‌ನ ಕ್ವಾರ್ಟರ್ ಫೈನಲ್‌ನಲ್ಲಿ ಜಪಾನ್‌ನ ಅಕಾನೆ ಯಮಗುಚಿಯನ್ನು 21-13, 22-20 ಅಂತರದಲ್ಲಿ ಸೋಲಿಸಿದ್ದಾರೆ.

ಈ ಮೂಲಕ ಅವರು ಸೆಮಿಫೈನಲ್‌ಗೆ  ಲಗ್ಗೆ ಇಟ್ಟಿದ್ದಾರೆ. ಗುರುವಾರ ನಡೆದ ಬ್ಯಾಡ್ಮಿಂಟನ್‌‌ ಸ್ಪರ್ಧೆಯಲ್ಲಿ ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಡ್ ಅವರನ್ನು ಸೋಲಿಸಿದ್ದರು.

ಇಂದು ಭಾರತದ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಅವರು ಈ ಹಿಂದಿನ ವಿಶ್ವ ಚಾಂಪಿಯನ್‌ ಚೀನಾದ ತೈಪೆಯ ಚೆನ್ ನಿಯೆನ್ ಚಿನ್ ಅವರನ್ನು ಸೋಲಿಸಿ ಮಹಿಳಾ ವೆಲ್ಟರ್‌ವೈಟ್ (69 ಕೆಜಿ) ವಿಭಾಗದ ಸೆಮಿಫೈನಲ್‌ಗೆ ತಲುಪಿದ್ದಾರೆ. ಈ ಮೂಲಕ ಅವರು ಭಾತರಕ್ಕೆ ಕಂಚಿನ ಪದಕವನ್ನು ಖಾತ್ರಿ ಪಡಿಸಿದ್ದಾರೆ. ಲವ್ಲಿನಾ ಅವರಿಗೆ ಚಿನ್ನದ ಪದಕ ಪಡೆಯಲು ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಸಮೀಫೈನಲ್‌ ಪ್ರವೇಶಿಸಿರುವ ಅವರು ಒಂದು ಪಂದ್ಯವನ್ನು ಗೆದ್ದರೆ ಚಿನ್ನಕ್ಕಾಗಿ ಸೆಣಸಲಿದ್ದಾರೆ.

ಇದನ್ನೂ ಓದಿ: ಟೋಕಿಯೊ ಒಲಿಂಪಿಕ್ಸ್‌: ಭಾರತಕ್ಕೆ 2 ನೇ ಪದಕ ಖಚಿತ!

ಏತನ್ಮಧ್ಯೆ, ಭಾರತದ ಮನು ಭಾಕರ್ ಮತ್ತು ರಾಹಿ ಸರ್ನೋಬತ್ ಅವರು 25 ಮೀಟರ್ ಪಿಸ್ತೂಲ್ ಮಹಿಳಾ ಅರ್ಹತಾ ಸ್ಪರ್ಧೆಯಿಂದ ಹೊರಬಿದ್ದರು. ಇವರಿಬ್ಬರು ಸ್ಪರ್ಧೆಯಲ್ಲಿ ಅರ್ಹತೆ ಪಡೆಯಲು ವಿಫಲರಾದರು.

ಮಹಿಳಾ ಬಿಲ್ಲುಗಾರಿಕೆ ವೈಯಕ್ತಿಕ ಸ್ಪರ್ಧೆಯಲ್ಲಿ ಕ್ವಾರ್ಟರ್‌ ಫೈನಲ್‌ ತಲುಪಿದ್ದ ದೀಪಿಕಾ ಕುಮಾರಿ, ದಕ್ಷಿಣ ಕೊರಿಯಾದ ಆನ್ ಸ್ಯಾನ್ ವಿರುದ್ಧ ಸೋತರು. ಗುರುವಾರ ಅವರು ಆರ್‌ಒಸಿಯ ಕ್ಸ್ನಿಯಾ ಪೆರೋವಾ ಅವರನ್ನು ಸೋಲಿಸಿ ಕ್ವಾರ್ಟರ್‌ಫೈನಲ್‌ನಲ್ಲಿ ಸ್ಥಾನ ಗಳಿಸಿದ್ದರು.

ಭಾರತೀಯ ಮಹಿಳಾ ಹಾಕಿ ತಂಡವು ಮೊದಲ ಗೆಲುವನ್ನು ದಾಖಲಿಸಿದೆ. ಐರ್ಲೆಂಡ್ ವಿರುದ್ಧ 1-0 ಅಂತರದ ಗೆಲುವನ್ನು ತಂಡವು ಸಾಧಿಸಿದೆ.

ಪುರುಷರ ಸೂಪರ್‌ ಹೆವಿ ವೈಟ್‌ ಬಾಕ್ಸಿಂಗ್‌ನಲ್ಲಿ ಗುರುವಾರದಂದು ಭಾರತದ ಸತೀಶ್ ಕುಮಾರ್ ಅವರು ಜಮೈಕಾದ ರಿಕಾರ್ಡೊ ಬ್ರೌನ್ ವಿರುದ್ಧ 4: 1 ರ ಸುತ್ತಿನಲ್ಲಿ ಗೆದ್ದು, ಕ್ವಾರ್ಟರ್ ಫೈನಲ್ ತಲುಪಿದ್ದಾರೆ. ಭಾನುವಾರದಂದು ಉಜ್ಬೇಕಿಸ್ತಾನದ ಬಾಖೋದಿರ್‌ ಜಲಾಲೋವ್ ಅವರನ್ನು ಎದುರಿಸಲಿದ್ದಾರೆ.

ಇದನ್ನೂ ಓದಿ: ಒಂದಿಡೀ ಸಮುದಾಯ ಮತ್ತು ದೇಶ ಸಂಭ್ರಮಿಸುವ ಕ್ರೀಡಾಸ್ಪೂರ್ತಿ ರಾಷ್ಟ್ರೀಯತೆಯ ಒಲಿಂಪಿಕ್ಸ್

ಜೊತೆಗೆ ಗುರುವಾರ ನಡೆದ ಪುರುಷರ ಹಾಕಿ ಪೂಲ್‌ ಎ ಪಂದ್ಯಾಟದಲ್ಲಿ ಅರ್ಜೆಂಟೀನ ವಿರುದ್ದ ಭಾರತ 3-1 ಅಂಕದಲ್ಲಿ ಗೆಲುವು ಸಾಧಿಸಿದೆ. ಇಂದು ಜಪಾನ್ ವಿರುದ್ದ ಭಾರತ ಸೆಣಸುತ್ತಿದ್ದು, ಆಟದ ಮೊದಲಾರ್ಧ ಮುಗಿದಿದ್ದು, ಭಾರತವು 2-0 ಅಂಕ ಗಳಿಸಿ ಮುನ್ನಡೆಯಲ್ಲಿದೆ.

ಇನ್ನು, ಗುರುವಾರ ಪುರುಷರ ವೈಯಕ್ತಿಕ ಬಿಲ್ಲುಗಾರಿಕೆಯಲ್ಲಿ ಅತನು ದಾಸ್ ಅವರು 2012 ರ ಚಾಂಪಿಯನ್‌ ದಕ್ಷಣ ಕೊರಿಯಾದ ಓಹ್ ಜಿನ್ ಹೈಕಿನ್ ಅವರನ್ನು ಸೋಲಿಸಿ ಪ್ರೀ ಕ್ವಾಟರ್‌ ಫೈನಲ್‌ಗೆ ತಲುಪಿದ್ದಾರೆ. ಅವರ ಮುಂದಿನ ಪಂದ್ಯ ಶನಿವಾರ ಜಪಾನಿನ ತಕಹಾರು ಫುರುಕವ ಅವರ ವಿರುದ್ದ ನಡೆಯಲಿದೆ.

ಟೋಕಿಯೊ ಒಲಿಂಪಿಕ್‌ನಲ್ಲಿ 49 ಕೆಜಿ ವೈಟ್‌ಲಿಫ್ಟಿಂಗ್‌ ವಿಭಾಗದಲ್ಲಿ ಮಣಿಪುರ ಮೂಲದ ಮಿರಾಬಾಯಿ ಚಾನು ಅವರು ಬೆಳ್ಳಿ ಗೆದ್ದುಕೊಂಡಿದ್ದರು. ಇದರ ನಂತರ ಭಾರತಕ್ಕೆ ಬಾಕ್ಸರ್‌‌‌ ಲವ್ಲಿನಾ ಬೊರ್ಗೊಹೈನ್‌ ಮೂಲಕ ಎರಡನೆ ಪದಕ ಖಚಿತಗೊಂಡಿದೆ.

ಇದನ್ನೂ ಓದಿ: ಒಲಿಂಪಿಕ್ಸ್‌ನಲ್ಲಿ ಭಾರತದ ಪ್ರಾತಿನಿಧ್ಯ; ಅಂದು-ಇಂದು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...