Homeಅಂತರಾಷ್ಟ್ರೀಯಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

ಟೋಕಿಯೋ ಒಲಂಪಿಕ್ಸ್: ಮೊದಲ ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆ

- Advertisement -
- Advertisement -

ವಿಶ್ವದ ಬೃಹತ್ ಕ್ರೀಡಾಕೂಟ ಒಲಂಪಿಕ್ಸ್ ಆರಂಭಕ್ಕೆ ಕೇವಲ ಆರು ದಿನಗಳಿರುವ ಸಂದರ್ಭದಲ್ಲಿ ಕ್ರೀಡಾಗ್ರಾಮದಲ್ಲಿ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿದೆ ಎಂದು ಸಂಘಟಕರು ತಿಳಿಸಿದ್ದಾರೆ. ಇದರಿಂದ ಜುಲೈ 23 ರಿಂದ ಆರಂಭವಾಗುವ ಒಲಂಪಿಕ್ಸ್ ಕ್ರೀಡಾಕೂಟದ ಮೇಲೆ ಆತಂಕದ ಛಾಯೆ ಉಂಟುಮಾಡಿದೆ.

2020ರಲ್ಲಿ ನಡೆಯಬೇಕಿದ್ದ ಒಲಂಪಿಕ್ಸ್ ಅನ್ನು ಜಾಗತಿಕ ಸಾಂಕ್ರಾಮಿಕದ ಕಾರಣದಿಂದ ಮುಂದೂಡಲಾಗಿತ್ತು. ಈಗಲೂ ಕಟ್ಟುನಿಟ್ಟಿನ ಕ್ವಾರಂಟೈನ್ ನಿಯಮಗಳನ್ನು ಅನುಸರಿಸುವ ಮೂಲಕ ನಡೆಸಲು ಯೋಜಿಸಲಾಗಿತ್ತು. ಆದರೆ ಕ್ರೀಡಾಗ್ರಾಮದಲ್ಲಿ ಮೊದಲ ಪ್ರಕರಣ ಪತ್ತೆಯಾಗಿರುವುದು ಸಂಘಟಕರಿಗೆ ಒತ್ತಡ ಹೆಚ್ಚಿಸಿದೆ.

ಕ್ರೀಡಾಕೂಟದ ಸಂಘಟನೆಯ ಭಾಗವಾಗಿ ಆಗಮಿಸಿದ್ದ ವ್ಯಕ್ತಿಯೊಬ್ಬರೂ ಕೊರೊನಾ ಪಾಸಿಟಿವ್ ಆಗಿದ್ದಾರೆ ಎಂದು ಟೋಕಿಯೋ ಒಲಂಪಿಕ್ಸ್ 2020ರ ಸಿಇಓ ತೊಶಿರೊ ಮುಟೋ ದೃಢಪಡಿಸಿದ್ದಾರೆ. ಖಾಸಗಿತನದ ಕಾರಣಗಳಿಂದಾಗಿ ಆ ವ್ಯಕ್ತಿ ಯಾವ ದೇಶದವರು ಎಂಬುದನ್ನು ಬಹಿರಂಗಪಡಿಸಿಲ್ಲ.

ಯಾವುದೇ ಕಾರಣಕ್ಕೂ ಕೋವಿಡ್ ಉಲ್ಬಣಿಸದಂತೆ ತಡೆಯಲು ಯತ್ನಿಸುತ್ತಿದ್ದೇವೆ. ಒಂದು ವೇಳೆ ಉಲ್ಬಣಿಸಿದರೂ ಕೂಡ ಅದನ್ನು ಹೇಗೆ ಎದುರಿಸಬೇಕು ಎಂಬ ಯೋಜನೆ ನಮ್ಮಲ್ಲಿದೆ ಎಂದು ಟೋಕಿಯೋ 2020 ಕ್ರೀಡಾಕೂಟದ ಮುಖ್ಯ ಸಂಘಟಕರಾದ ಸೈಕೊ ಹಶಿಮೊಟೊ ಹೇಳಿದ್ದಾರೆ.

ಜಪಾನ್‌ನಲ್ಲಿ ಒಲಂಪಿಕ್ಸ್ ನಡೆಸುತ್ತಿರುವುದಕ್ಕೆ ಅಲ್ಲಿನ ಜನರು ವಿರೋಧ ವ್ಯಕ್ತಪಡಿಸಿದ್ದಾರೆ. ಇದು ಜಪಾನ್‌ನಲ್ಲಿ ಮತ್ತೊಂದು ಅಲೆಗೆ ಕಾರಣವಾಗಬಹುದು ಎಂಬ ಆತಂಕ ಅವರದ್ದಾಗಿದೆ.

ಕ್ರೀಡಾಕೂಟವು ಜಪಾನಿನ ಜನರಿಗೆ ಯಾವುದೇ ಅಪಾಯವನ್ನು ತರುವುದಿಲ್ಲ ಎಂದು ಐಒಸಿ ಅಧ್ಯಕ್ಷ ಥಾಮಸ್ ಬಾಚ್ ಭರವಸೆ ನೀಡಿದ ಒಂದು ದಿನದ ನಂತರ ಕೊರೊನಾ ಪ್ರಕರಣ ಬೆಳಕಿಗೆ ಬಂದಿದೆ.

“ನಾವು ನಮ್ಮ ಎಲ್ಲಾ ಪ್ರಯತ್ನಗಳನ್ನು ಮಾಡುತ್ತಿದ್ದೇವೆ ಮತ್ತು ಜಪಾನಿನ ಜನರು ಈ ವೈರಸ್ ವಿರುದ್ಧ ಹೋರಾಡಲು ಮತ್ತು ಜಪಾನಿನ ಜನರಿಗೆ ಯಾವುದೇ ಅಪಾಯವನ್ನುಂಟುಮಾಡದಂತೆ ಉತ್ತಮ ರೀತಿಯಲ್ಲಿ ಕೊಡುಗೆ ನೀಡಲು ನಾವು ಬದ್ಧತೆಯನ್ನು ಹೊಂದಿದ್ದೇವೆ. ಕ್ರೀಡಾಗ್ರಾಮದ ಬಹುತೇಕರು ಲಸಿಕೆ ಪಡೆದಿದ್ದಾರೆ. ಹಾಗಾಗಿ ಜಗತ್ತಿನ ಎಲ್ಲಾ ಅಥ್ಲಿಟ್‌ಗಳನ್ನು ಪ್ರೀತಿಯಿಂದ ಸ್ವಾಗತಿಸಿ” ಎಂದು ಪ್ರಧಾನಿ ಯೋಶಿಹೈಡ್ ಸುಗಾ ಅವರನ್ನು ಭೇಟಿಯಾದ ನಂತರ ಬಾಚ್ ಸುದ್ದಿಗಾರರಿಗೆ ತಿಳಿಸಿದ್ದರು.


ಇದನ್ನೂ ಓದಿ: ಒಲಂಪಿಕ್ ಅಂಗಳಕ್ಕೆ ಟಿಕೆಟ್‌ ಕಲೆಕ್ಟರ್‌ : ಬಡತನದ ಕುಲುಮೆಯಲ್ಲರಳಿದ ಕ್ರೀಡಾರತ್ನ ರೇವತಿ ವೀರಮಣಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...