Homeಕ್ರೀಡೆಒಲಂಪಿಕ್ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಅಂತಿಮ ಪ್ರಯತ್ನದಲ್ಲಿ 75 ಮೀಟರ್ ಮಾತ್ರ ಎಸೆದರು. ಆ ಮೂಲಕ ಅತಿ ದೂರ ಎಸೆದು ಮೊದಲಿಗರಾಗಿದ್ದಾರೆ.

ಚೆಕ್ ರಿಪಬ್ಲಿಕ್‌ನ ಜೆ.ವಡ್ಲೆಚ್ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಅದೇ ದೇಶದ ವಿ.ವೆಸ್ಲಿ 85.44ಮೀಟರ್ ಎಸೆದು ಕಂಚು ತನ್ನದಾಗಿಸಿಕೊಂಡರು.

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು.

ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಭಾರತ ಇದುವರೆಗೂ ಒಲಿಂಪಿಕ್ಸ್‌ನಲ್ಲಿ 9 ಚಿನ್ನ, 9ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಅರ್ಹತಾ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ 86.65 ಮೀಟರ್ ದೂರ ಎಸೆಯುವ ಮೂಲಕ ಮೊದಲಿಗರಾಗಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿದ್ದರು.

ಇನ್ನೊಂದೆಡೆ ಟೋಕಿಯೊ ಒಲಿಂಪಿಕ್ಸ್‌ ಮುಗಿಯಲು ಇನ್ನು ಒಂದೇ ದಿನ ಬಾಕಿದೆ. ಈ ನಡುವೆ ಭಾರತದ ಕೊರಳಿಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ. 65 ಕೆಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ 8-0 ಅಂತರದಲ್ಲಿ ಭರ್ಜರಿಯಾಗಿ ಗೆದ್ದಿದ್ದಾರೆ.

ಸೆಮಿಫೈನಲ್‌ಗೆ ತಲುಪಿದ್ದ ಬಜರಂಗ್ ಪೂನಿಯಾ ಅವರು ಶುಕ್ರವಾರಂದು ಅಝರ್‌ಬೈಜಾನ್‌ ಹಾಜಿ ಅಲಿಯೇವ್ ಅವರ ವಿರುದ್ದ 5-12 ಅಂಕದಲ್ಲಿ ಸೋಲುಂಡಿದ್ದರು. ಇದರ ನಂತರ ಅವರು ಇಂದು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ ಹೋರಾಡಿ ಕಂಚು ಗೆದ್ದುಕೊಂಡಿದ್ದಾರೆ.

ಈ ಮಧ್ಯೆ, ಗಾಲ್ಫ್ ಕ್ರೀಡೆಯಲ್ಲಿ ಕರ್ನಾಟಕ ಮೂಲದ ಗಾಲ್ಫರ್ ಅದಿತಿ ಅಶೋಕ್ ಅವರು ನಾಲ್ಕನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಶ್ಲಾಘನೆ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ; ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದತ್ತಾಂಶ ಸಂರಕ್ಷಣಾ ಕಾನೂನಿನಡಿಯಲ್ಲಿ ಆರ್‌ಟಿಐ ತಿದ್ದುಪಡಿಗೆ ತಡೆ ನೀಡಲು ನಿರಾಕರಿಸಿದ ಸುಪ್ರೀಂ ಕೋರ್ಟ್

ಡಿಜಿಟಲ್ ವೈಯಕ್ತಿಕ ದತ್ತಾಂಶ ಸಂರಕ್ಷಣಾ ಕಾಯ್ದೆಯ ಮೂಲಕ ಪರಿಚಯಿಸಲಾದ ಮಾಹಿತಿ ಹಕ್ಕು ಕಾಯ್ದೆಗೆ ತಿದ್ದುಪಡಿಯನ್ನು ತಡೆಹಿಡಿಯಲು ಸುಪ್ರೀಂ ಕೋರ್ಟ್ ಸೋಮವಾರ ನಿರಾಕರಿಸಿದೆ ಎಂದು 'ಬಾರ್ ಮತ್ತು ಬೆಂಚ್' ವರದಿ ಮಾಡಿದೆ. ಸಾರ್ವಜನಿಕ ಹಿತಾಸಕ್ತಿಯ ಆಧಾರದ...

ಅಜಿತ್ ಪವಾರ್ ಸಾವು : ಎರಡೂ ಫ್ಲೈಟ್ ರೆಕಾರ್ಡರ್‌ಗಳು ಹಾನಿಗೊಳಗಾಗಿವೆ ಎಂದ ವಿಮಾನಯಾನ ಸಚಿವಾಲಯ

ಬಾರಾಮತಿಯಲ್ಲಿ ಜನವರಿ 28 ರಂದು ಅಜಿತ್ ಪವಾರ್ ಅವರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತಕ್ಕೀಡಾದ ಬಗ್ಗೆ ನಾಗರಿಕ ವಿಮಾನಯಾನ ಸಚಿವಾಲಯವು ಮಂಗಳವಾರ (ಫೆ.17) ಅಧಿಕೃತ ಹೇಳಿಕೆ ಬಿಡುಗಡೆ ಮಾಡಿದ್ದು, ವಿಮಾನದ ಎರಡೂ ಸ್ವತಂತ್ರ ಫ್ಲೈಟ್...

ರಾಜಸ್ಥಾನ| ಮೊದಲ ಬಜೆಟ್‌ನಲ್ಲಿ ಪಕ್ಷವು ‘ಗಂಡು ಮಗುವಿಗೆ ಜನ್ಮ ನೀಡಿದೆ’ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ಶಾಸಕ

ರಾಜಸ್ಥಾನದ ಬಿಜೆಪಿ ಶಾಸಕ ಬಹದ್ದೂರ್ ಸಿಂಗ್ ಕೋಲಿ, ತಮ್ಮ ಪಕ್ಷ ಮತ್ತು ಕಾಂಗ್ರೆಸ್ ಮಂಡಿಸಿದ ಬಜೆಟ್‌ಗಳನ್ನು ಗಂಡು ಮತ್ತು ಹೆಣ್ಣು ಮಗುವಿನ ಜನನಕ್ಕೆ ಹೋಲಿಸಿದ ಬಳಿಕ ವಿಧಾನಸಭೆಯಲ್ಲಿ ವಿವಾದ ಭುಗಿಲೆದ್ದಿತು. ರಾಜ್ಯ ಬಜೆಟ್ ಮೇಲಿನ...

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ತಾರಿಖ್ ರೆಹಮಾನ್ ಪ್ರಮಾಣವಚನ ಸ್ವೀಕಾರ

ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ ಬಾಂಗ್ಲಾದೇಶ್ ನ್ಯಾಷನಲಿಸ್ಟ್ ಪಾರ್ಟಿ (ಬಿಎನ್‌ಪಿ) ನಾಯಕ ತಾರಿಖ್ ರೆಹಮಾನ್ ಅವರು ಮಂಗಳವಾರ (ಫೆ.17) ಪ್ರಮಾಣ ವಚನ ಸ್ವೀಕರಿಸಿದರು. ಪದಗ್ರಹಣ ಕಾರ್ಯಕ್ರಮವು ಸಂಪ್ರದಾಯದಂತೆ ಅಧ್ಯಕ್ಷೀಯ ಅರಮನೆಯಲ್ಲಿ ನಡೆಯುವ ಬದಲು, ಢಾಕಾದ ರಾಷ್ಟ್ರೀಯ...

ಮಹಾರಾಷ್ಟ್ರ| ಪರೀಕ್ಷೆಯ ಸಮಯದಲ್ಲಿ ಸಾಮೂಹಿಕ ನಕಲಿಗೆ ಬೆಂಬಲಿಸಿದ 5 ಜನ ಶಿಕ್ಷಕರ ಅಮಾನತು

ಮಹಾರಾಷ್ಟ್ರದ ಬೀಡ್ ಜಿಲ್ಲೆಯ ಕೇಂದ್ರವೊಂದರಲ್ಲಿ ನಡೆದ 12 ನೇ ತರಗತಿಯ ಹೆಚ್‌ಎಸ್‌ಸಿ ಪರೀಕ್ಷೆಯ ಪ್ರಶ್ನೆ ಪತ್ರಿಕೆಯ ಸಮಯದಲ್ಲಿ ದೊಡ್ಡ ಪ್ರಮಾಣದಲ್ಲಿ ನಕಲು ಮಾಡಲು ಅನುಕೂಲ ಮಾಡಿಕೊಟ್ಟ ಆರೋಪದ ಮೇಲೆ ಸಿಕ್ಕಿಬಿದ್ದ ಐದು ಶಿಕ್ಷಕರನ್ನು...

ಬಿಜೆಪಿ ವಿರುದ್ಧ 40% ಕಮಿಷನ್ ಜಾಹೀರಾತು : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಪ್ರಕರಣ ರದ್ದುಗೊಳಿಸಿದ ಹೈಕೋರ್ಟ್‌

ಜಾಹೀರಾತಿಗೆ ಸಂಬಂಧಿಸಿದಂತೆ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ದಾಖಲಿಸಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯನ್ನು ಹೈಕೋರ್ಟ್ ಮಂಗಳವಾರ (ಫೆ.17) ರದ್ದುಗೊಳಿಸಿದೆ ಎಂದು ಕಾನೂನು ಸುದ್ದಿ ಸಂಸ್ಥೆ ಬಾರ್ & ಬೆಂಚ್ ವರದಿ ಮಾಡಿದೆ. ಪ್ರಕರಣ ರದ್ದುಕೋರಿ...

‘ನಾವು ಎಐ ಯುಗದಲ್ಲಿದ್ದೇವೆ..’; ಸೋನಮ್ ವಾಂಗ್‌ಚುಕ್ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಅಸಮಾಧಾನ

ಲಡಾಖ್ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ವಿರುದ್ಧ ಸಲ್ಲಿಸಿದ ವೀಡಿಯೊ ಪ್ರತಿಗಳ ಅನುವಾದದ ಬಗ್ಗೆ ಸುಪ್ರೀಂ ಕೋರ್ಟ್ ಸೋಮವಾರ ಕೇಂದ್ರವನ್ನು ಪ್ರಶ್ನಿಸಿದೆ. ಕೃತಕ ಬುದ್ಧಿಮತ್ತೆ (ಎಐ) ಕಾಲದಲ್ಲಿ ಅನುವಾದ ನಿಖರವಾಗಿರಬೇಕು ಎಂದು ಹೇಳಿದೆ. ನ್ಯಾಯಮೂರ್ತಿಗಳಾದ...

ಬಜೆಟ್ ಅಧಿವೇಶನದಲ್ಲಿ ‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ದೌರ್ಜನ್ಯವನ್ನು ತಡೆಯುವ ಸಲುವಾಗಿ ತುರ್ತಾಗಿ 'ರೋಹಿತ್ ವೇಮುಲ ಕಾಯ್ದೆ'ಯನ್ನು ಜಾರಿಗೊಳಿಸಬೇಕು ಎಂದು 'ರೋಹಿತ್ ವೇಮುಲ ಕಾಯ್ದೆಗಾಗಿ ಜನಾಂದೋಲನ' ತಂಡ ರಾಜ್ಯ ಸರ್ಕಾರವನ್ನು ಆಗ್ರಹಿಸಿತು. ಮಂಗಳವಾರ (ಫೆ.17) ಬೆಂಗಳೂರಿನ ಪ್ರೆಸ್‌...

ಖಾಸಗಿ ಜಾಗದಲ್ಲಿ ನಮಾಝ್ ತಡೆದ ಅಧಿಕಾರಿಗಳು: ನ್ಯಾಯಾಂಗ ನಿಂದನೆ ನೋಟಿಸ್ ನೀಡಿದ ಅಲಹಾಬಾದ್ ಹೈಕೋರ್ಟ್

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮೊಹಮ್ಮದ್‌ಗಂಜ್ ಗ್ರಾಮದ ಖಾಲಿ ಮನೆಯೊಂದರಲ್ಲಿ ಮುಸ್ಲಿಂ ಸಮುದಾಯದವರು ನಮಾಝ್ ಮಾಡುವುದನ್ನು ತಡೆದ ಜಿಲ್ಲಾಧಿಕಾರಿ ಅವಿನಾಶ್ ಸಿಂಗ್ ಮತ್ತು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಅನುರಾಗ್ ಆರ್ಯ ಅವರಿಗೆ ಅಲಹಾಬಾದ್...

ರೂ. 80 ಸಾವಿರ ಕೋಟಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ಎನ್‌ಜಿಟಿ ಹಸಿರು ನಿಶಾನೆ

ತೀವ್ರ ವಿರೋಧಗಳ ನಡುವೆಯೇ 80 ಸಾವಿರ ಕೋಟಿ ರೂಪಾಯಿ ವೆಚ್ಚದ ವಿವಾದಾತ್ಮಕ ಗ್ರೇಟ್ ನಿಕೋಬಾರ್ ಯೋಜನೆಗೆ ರಾಷ್ಟ್ರೀಯ ಹಸಿರು ನ್ಯಾಯಾಧಿಕರಣ (ಎನ್‌ಜಿಟಿ) ಸೋಮವಾರ (ಫೆ.16) ಹಸಿರು ನಿಶಾನೆ ತೋರಿದೆ. ಆರು ಸದಸ್ಯರ ಎನ್‌ಜಿಟಿಯ ವಿಶೇಷ...