Homeಕ್ರೀಡೆಒಲಂಪಿಕ್ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

ಟೋಕಿಯೋ ಒಲಿಂಪಿಕ್ಸ್: ಭಾರತಕ್ಕೆ ಮೊದಲ ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ನೀರಜ್ ಚೋಪ್ರಾ!

- Advertisement -
- Advertisement -

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಬರೋಬ್ಬರಿ 87.65 ಮೀ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಭಾರತಕ್ಕೆ ಮೊದಲ ಚಿನ್ನ ತಂದು ಕೊಟ್ಟು ಇತಿಹಾಸ ನಿರ್ಮಿಸಿದ್ದಾರೆ.

ಮೊದಲ ಪ್ರಯತ್ನದಲ್ಲಿಯೇ 87.03 ಮೀಟರ್ ಎಸೆದ ಅವರು ಎರಡನೇ ಪ್ರಯತ್ನದಲ್ಲಿ 87.65 ಮೀ ದೂರ ಎಸೆದು ದಾಖಲೆ ನಿರ್ಮಿಸಿದರು. ಅಂತಿಮ ಪ್ರಯತ್ನದಲ್ಲಿ 75 ಮೀಟರ್ ಮಾತ್ರ ಎಸೆದರು. ಆ ಮೂಲಕ ಅತಿ ದೂರ ಎಸೆದು ಮೊದಲಿಗರಾಗಿದ್ದಾರೆ.

ಚೆಕ್ ರಿಪಬ್ಲಿಕ್‌ನ ಜೆ.ವಡ್ಲೆಚ್ 86.67 ಮೀಟರ್ ದೂರ ಎಸೆದು ಬೆಳ್ಳಿ ಗೆದ್ದರೆ, ಅದೇ ದೇಶದ ವಿ.ವೆಸ್ಲಿ 85.44ಮೀಟರ್ ಎಸೆದು ಕಂಚು ತನ್ನದಾಗಿಸಿಕೊಂಡರು.

2008ರ ಬೀಜಿಂಗ್ ಒಲಿಂಪಿಕ್ಸ್‌ನಲ್ಲಿ 10ಮೀ ಏರ್ ರೈಫಲ್ ವಿಭಾಗದಲ್ಲಿ ಭಾರತದ ಅಭಿನವ್ ಬಿಂದ್ರಾ ಚಿನ್ನ ಗೆದ್ದದ್ದೆ ಭಾರತಕ್ಕೆ ಕಡೆಯ ಚಿನ್ನವಾಗಿತ್ತು.

ಒಂದೇ ಒಲಿಂಪಿಕ್ಸ್‌ನಲ್ಲಿ ಅತಿ ಹೆಚ್ಚು ಪದಕ ಗೆದ್ದಿದ್ದು 2012 ರ ಲಂಡನ್‌ನಲ್ಲಾಗಿತ್ತು. ಆಗ ಭಾರತ 6 ಪದಕಗಳನ್ನು ತನ್ನದಾಗಿಸಿಕೊಂಡಿತ್ತು. ಆಗ ಎರಡು ಬೆಳ್ಳಿ ಮತ್ತು ನಾಲ್ಕು ಕಂಚು ಭಾರತದ ಪಾಲಿಗಿತ್ತು. ಆದರೆ ಟೋಲಿಯೋ ಒಲಿಂಪಿಕ್ಸ್‌ನಲ್ಲಿ ಭಾರತ ಮೊದಲ ಬಾರಿಗೆ 7 ಪದಕ ಗೆದ್ದಿದೆ. ಒಂದು ಚಿನ್ನ, ಎರಡು ಬೆಳ್ಳಿ, ನಾಲ್ಕು ಕಂಚು ತನ್ನದಾಗಿಸಿ ದಾಖಲೆ ನಿರ್ಮಿಸಿದೆ.

ಭಾರತ ಇದುವರೆಗೂ ಒಲಿಂಪಿಕ್ಸ್‌ನಲ್ಲಿ 9 ಚಿನ್ನ, 9ಬೆಳ್ಳಿ ಮತ್ತು 16 ಕಂಚಿನ ಪದಕಗಳನ್ನು ಗೆದ್ದಿದೆ.

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಪುರುಷರ ಜಾವಲಿನ್ ಥ್ರೋ ಅರ್ಹತಾ ಪಂದ್ಯದಲ್ಲಿ ಭಾರತದ ನೀರಜ್ ಚೋಪ್ರಾ 86.65 ಮೀಟರ್ ದೂರ ಎಸೆಯುವ ಮೂಲಕ ಮೊದಲಿಗರಾಗಿ ಫೈನಲ್‌ಗೆ ಅರ್ಹತೆ ಗಿಟ್ಟಿಸಿದ್ದರು.

ಇನ್ನೊಂದೆಡೆ ಟೋಕಿಯೊ ಒಲಿಂಪಿಕ್ಸ್‌ ಮುಗಿಯಲು ಇನ್ನು ಒಂದೇ ದಿನ ಬಾಕಿದೆ. ಈ ನಡುವೆ ಭಾರತದ ಕೊರಳಿಗೆ ಮತ್ತೊಂದು ಪದಕ ಸೇರ್ಪಡೆಯಾಗಿದೆ. 65 ಕೆಜಿ ವಿಭಾಗದ ಫ್ರೀಸ್ಟೈಲ್ ಕುಸ್ತಿಯಲ್ಲಿ ಭಾರತದ ಕುಸ್ತಿ ಪಟು ಬಜರಂಗ್ ಪೂನಿಯಾ ಅವರು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ 8-0 ಅಂತರದಲ್ಲಿ ಭರ್ಜರಿಯಾಗಿ ಗೆದ್ದಿದ್ದಾರೆ.

ಸೆಮಿಫೈನಲ್‌ಗೆ ತಲುಪಿದ್ದ ಬಜರಂಗ್ ಪೂನಿಯಾ ಅವರು ಶುಕ್ರವಾರಂದು ಅಝರ್‌ಬೈಜಾನ್‌ ಹಾಜಿ ಅಲಿಯೇವ್ ಅವರ ವಿರುದ್ದ 5-12 ಅಂಕದಲ್ಲಿ ಸೋಲುಂಡಿದ್ದರು. ಇದರ ನಂತರ ಅವರು ಇಂದು ಕಝಕ್‌ಸ್ತಾನದ ದೌಲೆತ್‌ ನಿಯಾಜ್‌ಕೋವ್ ವಿರುದ್ದ ಹೋರಾಡಿ ಕಂಚು ಗೆದ್ದುಕೊಂಡಿದ್ದಾರೆ.

ಈ ಮಧ್ಯೆ, ಗಾಲ್ಫ್ ಕ್ರೀಡೆಯಲ್ಲಿ ಕರ್ನಾಟಕ ಮೂಲದ ಗಾಲ್ಫರ್ ಅದಿತಿ ಅಶೋಕ್ ಅವರು ನಾಲ್ಕನೇ ಸ್ಥಾನ ಪಡೆದು ಸಾಧನೆ ಮಾಡಿದ್ದಾರೆ. ಅವರ ಸಾಧನೆಗೆ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಶ್ಲಾಘನೆ ಮಾಡಿದ್ದು ಅಭಿನಂದನೆ ಸಲ್ಲಿಸಿದ್ದಾರೆ.


ಇದನ್ನೂ ಓದಿ; ಟೋಕಿಯೊ ಒಲಿಂಪಿಕ್ಸ್‌: ಫ್ರೀಸ್ಟೈಲ್ ಕುಸ್ತಿಯಲ್ಲಿ ಕಂಚು ಗೆದ್ದ ಬಜರಂಗ್ ಪೂನಿಯಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...

ಅಸ್ಸಾಂ ಪ್ರವಾಹದ ಭೀಕರತೆ: 78 ಬಲಿ, 3 ಲಕ್ಷ ಜನರ ಬದುಕು ಸಂಕಷ್ಟಕ್ಕೆ: ವ್ಯವಸ್ಥೆಯ ವೈಫಲ್ಯಕ್ಕೆ ಬೆಲೆ ತೆತ್ತುತ್ತಿರುವ ನಾಗರಿಕರು

ಈಶಾನ್ಯ ಭಾರತದ ಗೇಟ್‌ವೇ ಎಂದೇ ಕರೆಯಲ್ಪಡುವ ಅಸ್ಸಾಂನಲ್ಲಿ ಪ್ರವಾಹದ ಅಟ್ಟಹಾಸ ಮುಂದುವರಿದಿದ್ದು, ಸಾವಿನ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಇತ್ತೀಚಿನ ಅಧಿಕೃತ ವರದಿಗಳ ಪ್ರಕಾರ, ಶಿವಸಾಗರ್ ಜಿಲ್ಲೆಯಲ್ಲಿ ಇಬ್ಬರು ಹಾಗೂ ಗೋಲಾಘಾಟ್‌ನಲ್ಲಿ ಒಬ್ಬರು ನೀರಿನಲ್ಲಿ...