Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...