Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...