Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...