Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...