Homeಸಿನಿಮಾಕ್ರೀಡೆಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌: ಬೆಳ್ಳಿ ಪದಕ ಗೆದ್ದು ಇತಿಹಾಸ ಬರೆದ ಭವಿನಾ ಪಟೇಲ್

- Advertisement -
- Advertisement -

ಟೋಕಿಯೋದಲ್ಲಿ ನಡೆದ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಭವಿನಾ ಪಟೇಲ್ ಬೆಳ್ಳಿ ಪದಕ ಗೆಲ್ಲುವ ಮೂಲಕ ಐತಿಹಾಸಿಕ ಸಾಧನೆ ಮಾಡಿದ್ದಾರೆ.ಈ ಮೂಲಕ ಪ್ಯಾರಾಲಿಂಪಿಕ್ಸ್ ಟೇಬಲ್‌ ಟೆನ್ನಿಸ್‌ನಲ್ಲಿ ಪದಕ ಗೆದ್ದ ಭಾರತೀಯ ಟೇಬಲ್ ಟೆನಿಸ್ ಆಟಗಾರ್ತಿ ಎಂಬ ದಾಖಲೆ ಸೃಷ್ಟಿಸಿದ್ದಾರೆ.

ಭಾನುವಾರ ನಡೆದ ಮಹಿಳೆಯರ ಟೇಬಲ್ ಟೆನಿಸ್ ಕ್ಲಾಸ್ 4 ಫೈನಲ್‌ನಲ್ಲಿ ಚೀನಾದ ವಿಶ್ವ ನಂ.1 ಯಿಂಗ್ ಜ್ಸಾವು ವಿರುದ್ಧ 7-11 5-11 6-11ರಲ್ಲಿ ಪರಾಭವಗೊಂಡರು. ಈ ಮೂಲಕ ಬೆಳ್ಳಿ ಪದಕಕ್ಕೆ ಮುತ್ತಿಟ್ಟಿದ್ದಾರೆ.

ಭವಿನಾ ಪಟೇಲ್ ಅವರು ಶನಿವಾರ ಟೋಕಿಯೊದಲ್ಲಿ ನಡೆದ ಮಹಿಳಾ ಸಿಂಗಲ್ಸ್ ಕ್ಲಾಸ್ 4 ಈವೆಂಟ್‌ನಲ್ಲಿ, ವಿಶ್ವದ 3 ನೇ ಶ್ರೇಯಾಂಕಿತ ಚೀನಾದ ಜಾಂಗ್ ಮಿಯಾವೊ ವಿರುದ್ಧ ಗೆಲುವು ಸಾಧಿಸಿದ್ದರು.

ಸಾಮಾಜಿಕ ಜಾಲತಾಣದಲ್ಲಿ ಅಂಕಣಕಾರ, ಲೇಖಕ ಸುರೇಶ್ ಕಂಜರ್ಪಣೆ ಭವಿನಾ ಪಟೇಲ್‌ ಮತ್ತು ದೇಶದಲ್ಲಿ ನಡೆದ ಪಲ್ಸ್‌ ಪೋಲಿಯೋ ಅಭಿಯಾನದ ಕುರಿತು ವಿವರವಾಗಿ ಬರೆದಿದ್ದಾರೆ.

ಇದನ್ನೂ ಓದಿ: ಗ್ಯಾಂಗ್‌ ರೇಪ್‌: ಮಹಿಳೆಯರ ಮೇಲಿನ ಅಪರಾಧಗಳಿಗೆ ಕುರುಡಾಗದಿರಿ, ದನಿ ಎತ್ತಿ- ನಟಿ ರಮ್ಯಾ ಆಕ್ರೋಶ

“ಈಕೆ ಭವಿನಾ ಪಟೇಲ್ …‌ ಪ್ಯಾರಾ ಒಲಿಂಪಿಕ್ಸನ ಟೇಬಲ್‌ ಟೆನ್ನಿಸ್‌ ಸ್ಪರ್ಧೆಯಲ್ಲಿ ಫೈನಲ್‌ ತಲುಪಿದ ಮೊದಲ ಭಾರತೀಯ. ಈಕೆ ಹುಟ್ಟಿದ್ದು 1986ರಲ್ಲಿ. ಈಕೆ ಹುಟ್ಟಿದಾಗ ಅಂಗ ವೈಕಲ್ಯ ಇರಲಿಲ್ಲ. ಒಂದು ವರ್ಷದ ಹಸುಳೆಯಾಗಿದ್ದಾಗ ಈಕೆಗೆ ಪೋಲಿಯೋ ತಗುಲಿತು. ಭಾರತದಲ್ಲಿ ಲಕ್ಷಾಂತರ ಮಕ್ಕಳು ಪೋಲಿಯೋ ದವಡೆಗೆ ಸಿಲುಕುತ್ತಿದ್ದ ಕಾಲವಿತ್ತು. ಮೇಲುಕೋಟೆಯ ದಿ. ಸುರೇಂದ್ರ ಕೌಲಗಿಯವರು ಆರಂಭಿಸಿದ್ದ ಕರುಣಾ ಗೃಹದಲ್ಲಿ ಬಹುತೇಕ ಪೋಲಿಯೋ ಬಾಧಿತ ಮಕ್ಕಳೇ ಇದ್ದರು. ಅವರ ಆಶ್ರಯದಲ್ಲಿ ಕಲಿತು ಆತ್ಮವಿಶ್ವಾಸದಲ್ಲಿ ಜೀವನ ನಡೆಸುತ್ತಿರುವ ನೂರಾರು ಮಕ್ಕಳನ್ನು ನಾನು ನೋಡಿದ್ದೇನೆ (ಮಕ್ಕಳೇನು ಬಂತು, ಈಗ ಅವರೆಲ್ಲಾ ಮಧ್ಯವಯಸ್ಕರು)”.

’ಭಾರತ ಸರಕಾರ ಪಲ್ಸ್‌ ಪೋಲಿಯೋ ಲಸಿಕಾ ನೀಡಿಕೆ ಕಾರ್ಯಕ್ರಮವನ್ನು ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಪರಮ ಬದ್ಧತೆಯೊಂದಿಗೆ ಆರಂಭಿಸಿದ್ದರ ಪರಿಣಾಮವಾಗಿ 2014 ರಲ್ಲಿ ಭಾರತವನ್ನು ಪೋಲಿಯೋ ಮುಕ್ತ ದೇಶವೆಂದು ಘೋಷಿಸಲಾಯಿತು. ಅಂದರೆ 2009ರಿಂದ ದೇಶದಲ್ಲಿ ಒಂದೇ ಒಂದು ಪೋಲಿಯೋ ಪ್ರಕರಣ ವರದಿಯಾಗಲಿಲ್ಲ. ಈಗ ಪ್ರತಿಯೊಂದು ಮಗುವೂ ಕುಣಿದಾಡಿ ಓಡಾಡುವುದು ನೋಡುವಾಗ ಒಂದು ಧನ್ಯತಾ ಭಾವ ಆವರಿಸುತ್ತದೆ. ಸರಕಾರವೊಂದು ಬದ್ಧತೆಯಲ್ಲಿ, ಪ್ರಚಾರದ ಗೀಳಿಲ್ಲದೇ ಮಾಡಿದ ಕೆಲಸ ಇದು. ಅಮಿತಾಭ್‌ ಬಚ್ಚನ್‌ ಅವರ ಎರಡು ಹನಿ, ಜೀವ ಉಳಿಸಲು ಎಂಬ ಘೋಷ ವಾಕ್ಯದ ಜಾಹೀರಾತು ನೆನಪಿಸಿಕೊಳ್ಳಿ!’.

’ಆರೋಗ್ಯ ಕಾರ್ಯಕರ್ತರು ಪಲ್ಸ್‌ ಪೋಲಿಯೋ ಅಭಿಯಾನದಲ್ಲಿ ಸಂತೆ, ಬಸ್‌ ಸ್ಟಾಂಡ್‌ ಹೀಗೆ ಎಲ್ಲೂ ಬಿಡದೇ ಅಲ್ಲಿ ಕಂಡ ಮಕ್ಕಳಿಗೆ ಎರಡು ಬಿಂದು ಬಾಯಿಗೆ ಲಸಿಕೆ ಹಾಕುವ ಶ್ರದ್ಧೆ ಈಗಲೂ ಕಣ್ಣಿಗೆ ಕಂಡಂತಿದೆ.
ಆಗಿನ ಸರಕಾರದವರು ಫೋಟೋ ಹಾಕಿಸಿಕೊಳ್ಳಲಿಲ್ಲ. ಅದು ಜನರದ್ದೇ ಕಾರ್ಯಕ್ರಮ ಎಂಬಂತೆ ಅನುಷ್ಠಾನಗೊಳಿಸಿದರು’.

’ಈ ಭವಿನಾ ಪಟೇಲ್ ಎಂಬ ಭರಪೂರ ಸ್ಥೈರ್ಯದ ಹೆಣ್ಣು ಮಗಳ ಸಾಧನೆ ಕಂಡಾಗ, ಇದು ನೆನಪಾಯಿತು. ನಮ್ಮಲ್ಲಿ ಜಗತ್ತಿನಲ್ಲೇ ಅತ್ಯಧಿಕ ಸಂಖ್ಯೆಯ ರಕ್ತಹೀನತೆ, ಕುಪೋಶಣೆಯಲ್ಲಿ ಬಳಲುತ್ತಿರುವ ಮಕ್ಕಳು, ಹೆಣ್ಣು ಮಕ್ಕಳಿದ್ದಾರೆ. ವಿದ್ಯಾಭ್ಯಾಸದಲ್ಲಿ ಹೈಸ್ಕೂಲು ತಲುಪುವ ಮೊದಲೇ ಡ್ರಾಪ್‌ ಔಟ್‌ ಆಗುವ ಕೋಟ್ಯಂತರ ಮಕ್ಕಳಿದ್ದಾರೆ. ( ಇವರಲ್ಲಿ ಹಿಂದೂಗಳೇ ಹೆಚ್ಚು!!). ನಮ್ಮ ಈಗಿನ ಸರಕಾರಕ್ಕೆ ಇದೆಲ್ಲಾ ಮನಸ್ಸಿನೊಳಗೆ ಇಳಿದಿದ್ದರೆ ಈ ಆರೋಗ್ಯ, ಪೋಷಣೆ, ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿತ್ತು. ಮಕ್ಕಳು ನೀರಿಲ್ಲದ ಗಿಡದ ಎಲೆಗಳಂತೆ ಒಣಗಿ ಬೀಳುವ ಪರಿ ತಟ್ಟಬೇಕಿತ್ತು. ಇರಲಿ… ಈ ಭವಿನಾ ಬೆಳ್ಳಿ ಗೆದ್ದಿದ್ದಾಳೆ. ಈಕೆಯ ಆತ್ಮವಿಶ್ವಾಸ ಈ ದೇಶದ ಅವಕಾಶ ವಂಚಿತರಲ್ಲಿ ಕನಸು ಚಿಗುರೊಡೆಯುವಂತೆ ಮಾಡಲಿ” ಎಂದಿದ್ದಾರೆ.


ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...