Homeಮುಖಪುಟಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

ಬಿಜೆಪಿ ಸೇರ್ಪಡೆಗೊಳ್ಳಿ ಅಥವಾ ಬಂಧನಕ್ಕೆ ಸಿದ್ಧರಾಗಿ: ದೆಹಲಿ ಸಚಿವೆ ಅತಿಶಿಗೆ ಬೆದರಿಕೆ!

- Advertisement -
- Advertisement -

ತನ್ನ ರಾಜಕೀಯ ಬದುಕನ್ನು ಉಳಿಸಿಕೊಳ್ಳಲು ಕೇಸರಿ ಪಕ್ಷಕ್ಕೆ ಸೇರಿ ಅಥವಾ ಬಂಧನಕ್ಕೆ ಸಿದ್ಧರಾಗಿ ಎಂದು ಬಿಜೆಪಿಯು ತನ್ನ ಆಪ್ತರ ಮೂಲಕ ತನ್ನನ್ನು ಸಂಪರ್ಕಿಸಿದೆ ಎಂದು ದೆಹಲಿ ಸಚಿವೆ ಅತಿಶಿ ಮಂಗಳವಾರ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅತಿಶಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಎಎಪಿಯನ್ನು ನಾಶಮಾಡಲು ಬಯಸಿದೆ ಮತ್ತು ಇನ್ನೆರಡು ತಿಂಗಳಲ್ಲಿ ನನ್ನನ್ನು, ಸೌರಭ್ ಭಾರದ್ವಾಜ್, ದುರ್ಗೇಶ್ ಪಾಠಕ್ ಮತ್ತು ರಾಘವ್ ಚಡ್ಡಾ ಅವರನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ. ನನ್ನ ರಾಜಕೀಯ ಬದುಕನ್ನು ಉಳಿಸಲು ಬಿಜೆಪಿ ಪಕ್ಷಕ್ಕೆ ಸೇರಲು ನನ್ನ ಆಪ್ತ ವ್ಯಕ್ತಿಯ ಮೂಲಕ ನನ್ನನ್ನು ಸಂಪರ್ಕಿಸಲಾಗಿದೆ. ನಾನು ಸೇರದಿದ್ದರೆ, ಜಾರಿ ನಿರ್ದೇಶನಾಲಯ ಒಂದು ತಿಂಗಳಲ್ಲಿ ನನ್ನನ್ನು ಬಂಧಿಸಲಾಗುವುದು ಎಂದು ಹೇಳಲಾಗಿದೆ ಎಂದು ಅವರು ಹೇಳಿದ್ದಾರೆ.

ತನ್ನ ಪ್ರಮುಖ ನಾಲ್ಕು ನಾಯಕರಾದ ಅರವಿಂದ್ ಕೇಜ್ರಿವಾಲ್, ಮನೀಶ್ ಸಿಸೋಡಿಯಾ, ಸತ್ಯೇಂದ್ರ ಜೈನ್ ಮತ್ತು ಸಂಜಯ್ ಸಿಂಗ್ ಅವರನ್ನು ಬಂಧಿಸಿದ ನಂತರ ಎಎಪಿ ವಿಭಜನೆಯಾಗುತ್ತದೆ ಎಂದು ಬಿಜೆಪಿ ನಿರೀಕ್ಷಿಸುತ್ತಿದೆ. ಲೋಕಸಭೆ ಚುನಾವಣೆಯ ಇನ್ನೆರಡು ತಿಂಗಳಲ್ಲಿ ಇನ್ನೂ ನಾಲ್ವರು ನಾಯಕರನ್ನು ಬಂಧಿಸಲಾಗುವುದು, ಹಿರಿಯ ನಾಲ್ಕು ನಾಯಕರನ್ನು ಬಂಧಿಸಿದ ನಂತರ ಎಎಪಿ ಕುಸಿಯುತ್ತದೆ, ನೈತಿಕತೆ ಕುಸಿಯುತ್ತದೆ ಎಂದು ಅವರು ಭಾವಿಸಿದ್ದರು ಎಂದು ಅತಿಶಿ ಹೇಳಿದ್ದಾರೆ.

ಆದರೆ ಭಾನುವಾರ ರಾಮಲೀಲಾ ಮೈದಾನದಲ್ಲಿ ನಡೆದ ರ್ಯಾಲಿ ಮತ್ತು ಕಳೆದ 10 ದಿನಗಳಲ್ಲಿ ಎಎಪಿ ನಡೆಸಿದ ಬೀದಿ ಪ್ರತಿಭಟನೆಯು ಕೇವಲ ನಾಲ್ವರು ನಾಯಕರ ಬಂಧನವು ಅವರಿಗೆ ಸಹಾಯ ಮಾಡುವುದಿಲ್ಲ ಎಂದು ಮನವರಿಕೆ ಮಾಡಿದೆ. ಇಡಿ ನನ್ನ ಖಾಸಗಿ ನಿವಾಸದ ಮೇಲೆ ಮಾತ್ರವಲ್ಲದೆ ತನ್ನ ಕುಟುಂಬ ಸದಸ್ಯರು ಮತ್ತು ಸಂಬಂಧಿಕರ ಮನೆಗಳ ಮೇಲೂ ದಾಳಿ ನಡೆಸಲಿದೆ. ನಂತರ ಇಡಿ ಸಮನ್ಸ್ ಜಾರಿ ಮಾಡಿ ಅವರನ್ನು ಬಂಧಿಸಲಿದೆ ಎಂದು ನನಗೆ ಬೆದರಿಸಲಾಗಿದೆ. ಅವರ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ ಎಂಬುದನ್ನು ಬಿಜೆಪಿಯವರು ತಿಳಿದುಕೊಳ್ಳಬೇಕು. ನಾವು ಕೇಜ್ರಿವಾಲ್ ಅವರ ಸಿಪಾಹಿಗಳು, ಭಗತ್ ಸಿಂಗ್ ಅವರ ಅನುಯಾಯಿಗಳು. ನಮ್ಮ ಕೊನೆಯ ಉಸಿರು ಇರುವವರೆಗೂ ನಾವು ಕೇಜ್ರಿವಾಲ್ ನೇತೃತ್ವದಲ್ಲಿ ಸಂವಿಧಾನವನ್ನು ಉಳಿಸಲು ಹೋರಾಡುತ್ತೇವೆ ಎಂದು ಹೇಳಿದ್ದಾರೆ.

ಎಎಪಿ ಶಾಸಕ ರಿತುರಾಜ್ ಝಾ ಅವರಿಗೆ ಪಕ್ಷಕ್ಕೆ ಸೇರಲು ಬಿಜೆಪಿ 25 ಕೋಟಿ ರೂ. ಆಫರ್‌ ನೀಡಿದೆ ಎಂದು ನಿನ್ನೆ ಅವರು ಆರೋಪಿಸಿದ್ದರು. ಈ ಹಿಂದೆ ಎಎಪಿ ಶಾಸಕರನ್ನು ಸೆಳೆಯಲು ಬಿಜೆಪಿ ಹಣ ನೀಡುತ್ತಿದೆ ಎಂದು ಕೇಜ್ರಿವಾಲ್ ಮತ್ತು ಅತಿಶಿ ಆರೋಪಿಸಿದಾಗ, ದೆಹಲಿ ಪೊಲೀಸರು ಅವರ ಆರೋಪಗಳಿಗೆ ವಿವರಗಳು ಮತ್ತು ಪುರಾವೆಗಳನ್ನು ನೀಡುವಂತೆ ನೋಟಿಸ್ ನೀಡಿದ್ದರು.

ಇದನ್ನು ಓದಿ: ಗಾಝಾ ನೆಲದ ವಾಸ್ತವತೆ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದ ‘ಅಲ್‌ ಜಝೀರಾ’ಗೆ ನಿರ್ಬಂಧ ವಿಧಿಸಿದ ಇಸ್ರೇಲ್‌

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...