Homeಮುಖಪುಟಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

ಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು ಮತ್ತು ಸಹಿಸಿಕೊಳ್ಳುವುದು ಎಂದರೆ ದ್ವೇಷದ ಮಾತುಗಳನ್ನು ಸಹ ಒಪ್ಪಿಕೊಳ್ಳಬೇಕು ಎಂದಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.

ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ (ಜಿಎನ್‌ಎಲ್‌ಯು) ಅವರು ಮಾಡಿದ ಘಟಿಕೋತ್ಸವ ಭಾಷಣದಲ್ಲಿ, ಪದವೀಧರ ವಿದ್ಯಾರ್ಥಿಗಳು ತಮ್ಮ ಸ್ವಂತ ಮಾರ್ಗದರ್ಶನ ಹಾಗೂ ಸಮಾನತೆಯ ಆಶಯದಲ್ಲಿ ಮುನ್ನಡೆಯಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಹೇಳುವುದನ್ನು ನಾನು ಒಪ್ಪುದಿರಬಹುದು, ಆದರೆ ನಿಮ್ಮ ಅಭಿವ್ಯಕ್ತಿಯನ್ನು ರಕ್ಷಿಸುತ್ತೇನೆ” ಎಂದ ವಾಲ್ಟೈರ್‌ನ ಮಾತನ್ನು ನಾವು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಮಾಡುವುದು, ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು, ಸಹಿಸಿಕೊಳ್ಳುವುದು ಎಂದರೆ ಕರುಡಾಗಿ ಅನುಸರಿಸುವುದೂ ಅಲ್ಲ. ದ್ವೇಷ ಭಾಷಣದ ಪರ ಇರುತ್ತೇವೆ ಎಂದರ್ಥವಲ್ಲ” ಎಂದು ವಿವರಿಸಿದ್ದಾರೆ.

“ಬಹುಮತದ ರಾಜಕೀಯ, ಸಾಮಾಜಿಕ, ನೈತಿಕ ಘರ್ಷಣೆಗಳ ಹೆಚ್ಚುತ್ತಿರುವ ಗದ್ದಲ ಮತ್ತು ಗೊಂದಲದ ನಡುವೆ ವಿದ್ಯಾರ್ಥಿಗಳು ಹೊರ ಜಗತ್ತಿಗೆ ಕಾಲಿಡುತ್ತಿದ್ದೀರಿ. ನೀವು ತಮ್ಮ ಸ್ವಂತ ಆತ್ಮಸಾಕ್ಷಿ ಮತ್ತು ಸಮಾನತೆ ಆಶಯಗಳ ಮಾರ್ಗದಿಂದ ಮುನ್ನಡೆಯಬೇಕು’’ ಎಂದು ಆಶಿಸಿದ್ದಾರೆ.

ಹಲವು ತೀರ್ಪುಗಳ ಮೂಲಕ ಗಮನ ಸೆಳೆದಿರುವ ಜಸ್ಟೀಸ್ ಚಂದ್ರಚೂಡ್ ಅವರು ಇತ್ತೀಚೆಗೆ ಲಂಡನ್‌ನಲ್ಲಿ ಮಾತನಾಡುತ್ತಾ, ಅನೇಕ ಕಟುವಾದ ಪ್ರಶ್ನೆಗಳನ್ನು ಎದುರಿಸಿದ್ದರು.

ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಹಲವು ಪ್ರಶ್ನೆಗಳನ್ನು ಚಂದ್ರಚೂಡ್ ಅವರಿಗೆ ಕೇಳಲಾಗಿತ್ತು.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಪ್ರತಿಕ್ರಿಯಿಸಿದ್ದರು.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಸಾರ್ವತ್ರಿಕ ಮುಷ್ಕರ | ಕೆಲ ರಾಜ್ಯಗಳಲ್ಲಿ ಸಾಮಾನ್ಯ ಜನಜೀವನ ಅಸ್ತವ್ಯಸ್ತ; ಬ್ಯಾಂಕಿಂಗ್, ಸಾರಿಗೆ ವ್ಯವಸ್ಥೆಯಲ್ಲಿ ವ್ಯತ್ಯಯ

ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ 'ಕಾರ್ಮಿಕ, ರೈತ ವಿರೋಧಿ ಹಾಗೂ ಕಾರ್ಪೊರೇಟ್ ಪರ ನೀತಿಗಳ' ವಿರುದ್ಧ ಕಾರ್ಮಿಕ ಸಂಘಟನೆಗಳು ಗುರುವಾರ (ಫೆ.12) ಕರೆ ನೀಡಿದ್ದ ರಾಷ್ಟ್ರವ್ಯಾಪಿ ಮುಷ್ಕರದಿಂದ ವಿವಿಧ ರಾಜ್ಯಗಳಲ್ಲಿ ಜನ ಜೀವನ...

ಅದಾನಿ ಮಾನನಷ್ಟ ಪ್ರಕರಣದಲ್ಲಿ ಪತ್ರಕರ್ತ ರವಿ ನಾಯರ್‌ಗೆ ಶಿಕ್ಷೆ: ‘ಇದು ಪತ್ರಿಕಾ ಸ್ವಾತಂತ್ರ್ಯಕ್ಕೆ ಹೊಡೆತ’ ಎಂದ ಪತ್ರಕರ್ತರ ಸಂಘಟನೆಗಳು

ಅದಾನಿ ಎಂಟರ್‌ಪ್ರೈಸಸ್ ದಾಖಲಿಸಿದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ತನಿಖಾ ಪತ್ರಕರ್ತ ರವಿ ನಾಯರ್ ಅವರಿಗೆ ಒಂದು ವರ್ಷ ಜೈಲು ಶಿಕ್ಷೆ ವಿಧಿಸಿರುವುದನ್ನು ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಮತ್ತು ಹಲವಾರು ಪತ್ರಿಕಾ ಸಂಸ್ಥೆಗಳು...

‘ನಾವು ಯಾರನ್ನೂ ನಿಂದಿಸಿಲ್ಲ’: ಚೇಂಬರ್ ‘ದುರ್ವರ್ತನೆ’ ಆರೋಪಕ್ಕೆ ಪ್ರಿಯಾಂಕಾ ಗಾಂಧಿ ಸ್ಪಷ್ಟನೆ 

ನವದೆಹಲಿ: ಸ್ಪೀಕರ್ ಓಂ ಬಿರ್ಲಾ ಅವರ ಕೊಠಡಿಯಲ್ಲಿ ತಮ್ಮ ಪಕ್ಷದ ಸಂಸದರು "ಅನುಚಿತವಾಗಿ ವರ್ತಿಸಿದ್ದಾರೆ" ಎಂದು ಆರೋಪಿಸಿದಾಗ, ಅವರನ್ನು ಬೆಂಬಲಿಸಿದ್ದೇನೆ ಎಂದು ಹೇಳಿದ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಸಂಸದೀಯ ವ್ಯವಹಾರಗಳ...

‘ಭಾರತಕ್ಕೆ ಮರಳಲು ಇದು ಕೊನೆಯ ಅವಕಾಶ’: ವಿಜಯ್ ಮಲ್ಯಗೆ ಬಾಂಬೆ ಹೈಕೋರ್ಟ್‌ ಎಚ್ಚರಿಕೆ

ಭಾರತದ ಹೊರಗೆ ಇರುವ ಉದ್ಯಮಿ ವಿಜಯ್ ಮಲ್ಯ ನ್ಯಾಯಾಲಯದ ಪ್ರಕ್ರಿಯೆಗಳಿಂದ ಉದ್ದೇಶಪೂರ್ವಕವಾಗಿ ತಪ್ಪಿಸಿಕೊಳ್ಳುತ್ತಿದ್ದಾರೆ ಎಂದು ಗಂಭೀರವಾಗಿ ಪರಿಗಣಿಸಿರುವ ಬಾಂಬೆ ಹೈಕೋರ್ಟ್, ಅವರಿಗೆ ಭಾರತಕ್ಕೆ ಮರಳಲು “ಒಂದು ಕೊನೆಯ ಅವಕಾಶ” ನೀಡಿದೆ. ಒಂದು ವೇಳೆ...

ಕೆಲಸದ ಸ್ಥಳದಲ್ಲಿ ಜಾತಿ ತಾರತಮ್ಯದ ಬಗ್ಗೆ ರಾಜ್ಯಸಭೆಯಲ್ಲಿ ಖರ್ಗೆ ಕಳವಳ; ಒಡಿಶಾ ಅಂಗನವಾಡಿ ಘಟನೆ ಉಲ್ಲೇಖ

ಕೆಲಸದ ಸ್ಥಳಗಳಲ್ಲಿ ಆಗುತ್ತಿರುವ ಜಾತಿ ತಾರತಮ್ಯದ ಕುರಿತು ರಾಜ್ಯಸಭೆಯಲ್ಲಿ ಗುರುವಾರ (ಫೆ.12) ವಿಪಕ್ಷ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಳವಳ ವ್ಯಕ್ತಪಡಿಸಿದರು. ಒಡಿಶಾದ ಅಂಗನವಾಡಿಯೊಂದರಲ್ಲಿ ದಲಿತ ಮಹಿಳೆ ತಯಾರಿಸಿದ ಆಹಾರವನ್ನು...

ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಸುಪ್ರೀಂ ಕೋರ್ಟ್

ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ...

‘ಆಕೆಯ ಜೀವ ಮುಖ್ಯ’: ಅಮೆರಿಕದ ಪೊಲೀಸ್ ಅಧಿಕಾರಿ ವೇಗದ ಚಾಲನೆಯಿಂದ ಸಾವನ್ನಪ್ಪಿದ ಭಾರತೀಯ ವಿದ್ಯಾರ್ಥಿನಿಯ ಕುಟುಂಬಕ್ಕೆ 260 ಕೋಟಿ ಪರಿಹಾರ

2023 ರಲ್ಲಿ ರಸ್ತೆ ದಾಟುತ್ತಿದ್ದಾಗ ವೇಗವಾಗಿ ಚಾಲನೆ ಮಾಡುತ್ತಿದ್ದ ಪೊಲೀಸ್ ಅಧಿಕಾರಿಯೊಬ್ಬರು ಡಿಕ್ಕಿ ಹೊಡೆದ ಕಾರಣ ಸಾವನ್ನಪ್ಪಿದ ಭಾರತದ 23 ವರ್ಷದ ಪದವೀಧರ ವಿದ್ಯಾರ್ಥಿನಿ ಜಾಹ್ನವಿ ಕಂದುಲಾ ಅವರ ಕುಟುಂಬಕ್ಕೆ ಸಿಯಾಟಲ್ ನಗರವು...

ರಾಹುಲ್ ಗಾಂಧಿ ವಿರುದ್ಧ ಬಿಜೆಪಿಯಿಂದ ನಿಲುವಳಿ ಸೂಚನೆ ಸಲ್ಲಿಕೆ; ಸಂಸತ್ ಸದಸ್ಯತ್ವ ರದ್ದುಗೊಳಿಸುವಂತೆ ಆಗ್ರಹ

ಲೋಕಸಭೆ ಅಧಿವೇಶನದಲ್ಲಿ ಗುರುವಾರ (ಫೆ.12) ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ನಿಲುವಳಿ ಸೂಚನೆ ಸಲ್ಲಿಸಿದ್ದು, ಅವರ ಸಂಸತ್ತಿನ ಸದಸ್ಯತ್ವ ರದ್ದುಗೊಳಿಸುವಂತೆ ಕೋರಿದೆ. ಈ ಕುರಿತು ಪ್ರತಿಕ್ರಿಯಿಸಿದ ಬಿಜೆಪಿ ಸಂಸದ ನಿಶಿಕಾಂತ್...

ಕಾನ್ಪುರ ಲ್ಯಾಂಬೋರ್ಗಿನಿ ಅಪಘಾತ: ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಪುತ್ರ ಶಿವಂ ಮಿಶ್ರಾ ಬಂಧನ

2026 ಫೆಬ್ರವರಿ 8, ಭಾನುವಾರದಂದು ವಿಐಪಿ ರಸ್ತೆಯಲ್ಲಿ ಹಲವಾರು ಜನರು ಗಾಯಗೊಂಡಿದ್ದ ಹೈ ಪ್ರೊಫೈಲ್ ಲ್ಯಾಂಬೋರ್ಗಿನಿ ಅಪಘಾತಕ್ಕೆ ಸಂಬಂಧಿಸಿದಂತೆ ಸ್ಥಳೀಯ ತಂಬಾಕು ಉದ್ಯಮಿ ಕೆ.ಕೆ. ಮಿಶ್ರಾ ಅವರ ಪುತ್ರ ಶಿವಂ ಮಿಶ್ರಾ ಅವರನ್ನು...

ಫೆಬ್ರವರಿ 12 ರಂದು ಭಾರತ್ ಬಂದ್| ಹಲವು ರಾಜ್ಯಗಳಲ್ಲಿ ಬಂದ್ ಗೆ ಪೂರ್ಣ ಬೆಂಬಲ: ಕರ್ನಾಟಕದಲ್ಲಿ ಮಿಶ್ರ ಪ್ರತಿಕ್ರಿಯೆ

ಕೇಂದ್ರ ಸರ್ಕಾರದ ನೀತಿಗಳನ್ನು ವಿರೋಧಿಸಿ ಫೆಬ್ರವರಿ 12, ಗುರುವಾರ ಸಾರ್ವತ್ರಿಕ ಮುಷ್ಕರಕ್ಕೆ ಕೇಂದ್ರ ಕಾರ್ಮಿಕ ಸಂಘಗಳ ಜಂಟಿ ವೇದಿಕೆ ಕರೆ ನೀಡಿದೆ. ಕರ್ನಾಟಕದಲ್ಲಿಯೂ ಕಾರ್ಮಿಕ ಸಂಘಟನೆಗಳು ಮುಷ್ಕರವನ್ನು ನಡೆಸುತ್ತಿವೆ. ಕೇಂದ್ರ ಸರ್ಕಾರದ 4...