Homeಮುಖಪುಟಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

ಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು ಮತ್ತು ಸಹಿಸಿಕೊಳ್ಳುವುದು ಎಂದರೆ ದ್ವೇಷದ ಮಾತುಗಳನ್ನು ಸಹ ಒಪ್ಪಿಕೊಳ್ಳಬೇಕು ಎಂದಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.

ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ (ಜಿಎನ್‌ಎಲ್‌ಯು) ಅವರು ಮಾಡಿದ ಘಟಿಕೋತ್ಸವ ಭಾಷಣದಲ್ಲಿ, ಪದವೀಧರ ವಿದ್ಯಾರ್ಥಿಗಳು ತಮ್ಮ ಸ್ವಂತ ಮಾರ್ಗದರ್ಶನ ಹಾಗೂ ಸಮಾನತೆಯ ಆಶಯದಲ್ಲಿ ಮುನ್ನಡೆಯಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಹೇಳುವುದನ್ನು ನಾನು ಒಪ್ಪುದಿರಬಹುದು, ಆದರೆ ನಿಮ್ಮ ಅಭಿವ್ಯಕ್ತಿಯನ್ನು ರಕ್ಷಿಸುತ್ತೇನೆ” ಎಂದ ವಾಲ್ಟೈರ್‌ನ ಮಾತನ್ನು ನಾವು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಮಾಡುವುದು, ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು, ಸಹಿಸಿಕೊಳ್ಳುವುದು ಎಂದರೆ ಕರುಡಾಗಿ ಅನುಸರಿಸುವುದೂ ಅಲ್ಲ. ದ್ವೇಷ ಭಾಷಣದ ಪರ ಇರುತ್ತೇವೆ ಎಂದರ್ಥವಲ್ಲ” ಎಂದು ವಿವರಿಸಿದ್ದಾರೆ.

“ಬಹುಮತದ ರಾಜಕೀಯ, ಸಾಮಾಜಿಕ, ನೈತಿಕ ಘರ್ಷಣೆಗಳ ಹೆಚ್ಚುತ್ತಿರುವ ಗದ್ದಲ ಮತ್ತು ಗೊಂದಲದ ನಡುವೆ ವಿದ್ಯಾರ್ಥಿಗಳು ಹೊರ ಜಗತ್ತಿಗೆ ಕಾಲಿಡುತ್ತಿದ್ದೀರಿ. ನೀವು ತಮ್ಮ ಸ್ವಂತ ಆತ್ಮಸಾಕ್ಷಿ ಮತ್ತು ಸಮಾನತೆ ಆಶಯಗಳ ಮಾರ್ಗದಿಂದ ಮುನ್ನಡೆಯಬೇಕು’’ ಎಂದು ಆಶಿಸಿದ್ದಾರೆ.

ಹಲವು ತೀರ್ಪುಗಳ ಮೂಲಕ ಗಮನ ಸೆಳೆದಿರುವ ಜಸ್ಟೀಸ್ ಚಂದ್ರಚೂಡ್ ಅವರು ಇತ್ತೀಚೆಗೆ ಲಂಡನ್‌ನಲ್ಲಿ ಮಾತನಾಡುತ್ತಾ, ಅನೇಕ ಕಟುವಾದ ಪ್ರಶ್ನೆಗಳನ್ನು ಎದುರಿಸಿದ್ದರು.

ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಹಲವು ಪ್ರಶ್ನೆಗಳನ್ನು ಚಂದ್ರಚೂಡ್ ಅವರಿಗೆ ಕೇಳಲಾಗಿತ್ತು.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಪ್ರತಿಕ್ರಿಯಿಸಿದ್ದರು.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...