Homeಮುಖಪುಟಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

ಸಹಿಷ್ಣುತೆ ಎಂದರೆ ದ್ವೇಷದ ಮಾತುಗಳನ್ನೂ ಒಪ್ಪಬೇಕೆಂದಲ್ಲ: ಜಸ್ಟೀಸ್ ಚಂದ್ರಚೂಡ್‌

- Advertisement -
- Advertisement -

ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು ಮತ್ತು ಸಹಿಸಿಕೊಳ್ಳುವುದು ಎಂದರೆ ದ್ವೇಷದ ಮಾತುಗಳನ್ನು ಸಹ ಒಪ್ಪಿಕೊಳ್ಳಬೇಕು ಎಂದಲ್ಲ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ಹೇಳಿದ್ದಾರೆ.

ಗುಜರಾತ್ ರಾಷ್ಟ್ರೀಯ ಕಾನೂನು ವಿಶ್ವವಿದ್ಯಾನಿಲಯದಲ್ಲಿ (ಜಿಎನ್‌ಎಲ್‌ಯು) ಅವರು ಮಾಡಿದ ಘಟಿಕೋತ್ಸವ ಭಾಷಣದಲ್ಲಿ, ಪದವೀಧರ ವಿದ್ಯಾರ್ಥಿಗಳು ತಮ್ಮ ಸ್ವಂತ ಮಾರ್ಗದರ್ಶನ ಹಾಗೂ ಸಮಾನತೆಯ ಆಶಯದಲ್ಲಿ ಮುನ್ನಡೆಯಬೇಕು ಎಂದಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

“ನೀವು ಹೇಳುವುದನ್ನು ನಾನು ಒಪ್ಪುದಿರಬಹುದು, ಆದರೆ ನಿಮ್ಮ ಅಭಿವ್ಯಕ್ತಿಯನ್ನು ರಕ್ಷಿಸುತ್ತೇನೆ” ಎಂದ ವಾಲ್ಟೈರ್‌ನ ಮಾತನ್ನು ನಾವು ಅಳವಡಿಸಿಕೊಳ್ಳಬೇಕು. ತಪ್ಪುಗಳನ್ನು ಮಾಡುವುದು, ಇತರರ ಅಭಿಪ್ರಾಯಗಳನ್ನು ಒಪ್ಪಿಕೊಳ್ಳುವುದು, ಸಹಿಸಿಕೊಳ್ಳುವುದು ಎಂದರೆ ಕರುಡಾಗಿ ಅನುಸರಿಸುವುದೂ ಅಲ್ಲ. ದ್ವೇಷ ಭಾಷಣದ ಪರ ಇರುತ್ತೇವೆ ಎಂದರ್ಥವಲ್ಲ” ಎಂದು ವಿವರಿಸಿದ್ದಾರೆ.

“ಬಹುಮತದ ರಾಜಕೀಯ, ಸಾಮಾಜಿಕ, ನೈತಿಕ ಘರ್ಷಣೆಗಳ ಹೆಚ್ಚುತ್ತಿರುವ ಗದ್ದಲ ಮತ್ತು ಗೊಂದಲದ ನಡುವೆ ವಿದ್ಯಾರ್ಥಿಗಳು ಹೊರ ಜಗತ್ತಿಗೆ ಕಾಲಿಡುತ್ತಿದ್ದೀರಿ. ನೀವು ತಮ್ಮ ಸ್ವಂತ ಆತ್ಮಸಾಕ್ಷಿ ಮತ್ತು ಸಮಾನತೆ ಆಶಯಗಳ ಮಾರ್ಗದಿಂದ ಮುನ್ನಡೆಯಬೇಕು’’ ಎಂದು ಆಶಿಸಿದ್ದಾರೆ.

ಹಲವು ತೀರ್ಪುಗಳ ಮೂಲಕ ಗಮನ ಸೆಳೆದಿರುವ ಜಸ್ಟೀಸ್ ಚಂದ್ರಚೂಡ್ ಅವರು ಇತ್ತೀಚೆಗೆ ಲಂಡನ್‌ನಲ್ಲಿ ಮಾತನಾಡುತ್ತಾ, ಅನೇಕ ಕಟುವಾದ ಪ್ರಶ್ನೆಗಳನ್ನು ಎದುರಿಸಿದ್ದರು.

ಲಂಡನ್‌ನ ಕಿಂಗ್ಸ್ ಕಾಲೇಜ್‌ನಲ್ಲಿ ನಡೆದ ‘ಮಾನವ ಹಕ್ಕುಗಳ ರಕ್ಷಣೆ, ನಾಗರಿಕ ಸ್ವಾತಂತ್ರ್ಯದ ರಕ್ಷಣೆ: ಪ್ರಜಾಪ್ರಭುತ್ವದಲ್ಲಿ ನ್ಯಾಯಾಲಯಗಳ ಪಾತ್ರ’ ಕುರಿತ ವಿಚಾರಸಂಕಿರಣದಲ್ಲಿ ಹಲವು ಪ್ರಶ್ನೆಗಳನ್ನು ಚಂದ್ರಚೂಡ್ ಅವರಿಗೆ ಕೇಳಲಾಗಿತ್ತು.

ಬುಲ್ಡೋಜರ್‌ಗಳ ಮೂಲಕ ಮುಸ್ಲಿಮರ ಮನೆಗಳ ಧ್ವಂಸ, ಹಿಜಾಬ್ ವಿವಾದ, ಬಾಬರಿ ಮಸೀದಿ ತೀರ್ಪುಗಳಿಗೆ ಸಂಬಂಧಿಸಿದಂತೆ ಭಾರತದ ಸುಪ್ರೀಂ ಕೋರ್ಟ್‌ ಮುಸ್ಲಿಂ ಅಲ್ಪಸಂಖ್ಯಾತರಿಗೆ ನೀಡಿರುವ ನ್ಯಾಯದ ಕುರಿತು ಪ್ರಶ್ನಿಸಲಾಗಿತ್ತು.

ನ್ಯಾಯಮೂರ್ತಿ ಚಂದ್ರಚೂಡ್‌ ಮಾತನಾಡಿ, “ಬಹುತೇಕ ಪ್ರಕರಣಗಳು ಪ್ರಸ್ತುತ ನ್ಯಾಯಾಲಯದಲ್ಲಿವೆ. ಅವುಗಳ ಬಗ್ಗೆ ಹೆಚ್ಚಿನ ಪ್ರತಿಕ್ರಿಯೆ ನೀಡಲು ಸಾಧ್ಯವಾಗುವುದಿಲ್ಲ. ನ್ಯಾಯಾಧೀಶರಾದ ಬಳಿಕ ಕೆಲವು ನಿರ್ಬಂಧಗಳಿವೆ” ಎಂದು ತಿಳಿಸಿದ್ದರು.

ಇದನ್ನೂ ಓದಿರಿ: ಒಬ್ಬ ಪತ್ರಕರ್ತನಿಗೆ ಬರೆಯಬಾರದು ಎಂದು ಹೇಳಲು ಸಾಧ್ಯವಿಲ್ಲ: ಜುಬೇರ್‌ಗೆ ಜಾಮೀನು ನೀಡುವಾಗ ಜಸ್ಟೀಸ್ ಚಂದ್ರಚೂಡ್ ಹೇಳಿಕೆ

ಬಾಬರಿ ಮಸೀದಿ ಪ್ರಕರಣದಲ್ಲಿ ರಾಮ ಜನ್ಮಭೂಮಿ ಪರವಾಗಿ ತೀರ್ಪು ಹೊರಬಿದ್ದಿತು. “ತೀರ್ಪು ನೀಡಿದ ಪೀಠದ ಭಾಗವಾಗಿರುವುದರಿಂದ ಪ್ರತಿಕ್ರಿಯಿಸಲು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದರು.

ಮುಸ್ಲಿಮರು ಅಥವಾ ಇತರ ಅಲ್ಪಸಂಖ್ಯಾತರ ವಿರುದ್ಧದ ತಾರತಮ್ಯದ ಪ್ರಕರಣಗಳನ್ನು ನ್ಯಾಯಾಲಯಗಳು ವ್ಯವಹರಿಸುವುದಿಲ್ಲ ಎಂಬ ಅನಿಸಿಕೆಗಳಿವೆ ಎಂದ ಅವರು, “ಧ್ವಂಸ ಕಾರ್ಯಾಚರಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಗಮನ ಹರಿಸಿದ್ದು, ಈ ವಿಷಯದ ಬಗ್ಗೆ ನೋಟಿಸ್ ನೀಡಿದೆ” ಎಂದು ಪ್ರತಿಕ್ರಿಯಿಸಿದ್ದರು.

ಸುಪ್ರೀಂ ಕೋರ್ಟ್ ಸಾಮಾನ್ಯವಾಗಿ ರಕ್ಷಣೆಯ ಮೊದಲ ಅಸ್ತ್ರವಾಗಿದೆ. ಧಾರ್ಮಿಕ ಸ್ವಾತಂತ್ರ್ಯದ ವಿಷಯಗಳಲ್ಲಿ ನ್ಯಾಯಾಲಯವು ಧಾರ್ಮಿಕ ಪಂಥಗಳು ಮತ್ತು ನ್ಯಾಯಶಾಸ್ತ್ರದ ಪ್ರತಿಪಾದನೆಗಳನ್ನು ಎತ್ತಿಹಿಡಿದಿದೆ. ಶಿಕ್ಷಣ ಕೇಂದ್ರಗಳನ್ನು ಸ್ಥಾಪಿಸುವ ಅಲ್ಪಸಂಖ್ಯಾತರ ಹಕ್ಕನ್ನು ನಾವು ಎತ್ತಿ ಹಿಡಿದಿದ್ದೇವೆ ಎಂದು ಹೇಳಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...